AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?

ಎಲ್ಲಾ ಸ್ಪರ್ಧಿಗಳ ಜತೆ ಅಕುಲ್​ ಅದ್ಭುತವಾಗಿ ಸಂಭಾಷಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಅಕುಲ್​ ತಮ್ಮ ಸಂಸಾರದಲ್ಲಿ ನಡೆದ ವಿಚಿತ್ರ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ.

ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?
ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?
TV9 Web
| Edited By: |

Updated on: Aug 15, 2021 | 6:05 PM

Share

ಅಕುಲ್​ ಬಾಲಾಜಿ ತಮ್ಮ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಬಿಗ್​ ಬಾಸ್​ ಮಿನಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದಾರೆ. ಎಲ್ಲಾ ಸ್ಪರ್ಧಿಗಳ ಜತೆ ಅವರು ಅದ್ಭುತವಾಗಿ ಸಂಭಾಷಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಅಕುಲ್​ ತಮ್ಮ ಸಂಸಾರದಲ್ಲಿ ನಡೆದ ವಿಚಿತ್ರ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಳ್ಳುತ್ತಿದ್ದಂತೆ ಬಿಗ್​ ಬಾಸ್​ ಮಿನಿ ಸೀಸನ್​ ಆರಂಭಗೊಂಡಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಬಳಗ ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದೆ. ಎಲ್ಲಾ ಸ್ಪರ್ಧಿಗಳು ದೊಡ್ಮನೆಗೆ ನಿಧಾನವಾಗಿ ಹೊಂದಿಕೊಳ್ಳುತ್ತಿದ್ದಾರೆ.  ಈ ಮಧ್ಯೆ ಮನೆಯಲ್ಲಿ ಯಾರೆಲ್ಲ ಗೊರಕೆ ಹೊಡೆಯುತ್ತಾರೆ ಎನ್ನುವ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಅಕುಲ್​ ಬಾಲಾಜಿ ಅಚ್ಚರಿಯ ವಿಚಾರ ಬಾಯ್ಬಿಟ್ಟಿದ್ದಾರೆ.

‘ನಾನು ಮಲಗಿದ ಮೇಲೆ ಶಬ್ದ ಮಾಡುವುದಿಲ್ಲ. ಆದರೆ, ನಾನು ನಿದ್ರೆಯಲ್ಲಿ ತುಂಬಾ ಮಾತಾಡ್ತೀನಿ. ಇದು ತುಂಬಾನೇ ಸಮಸ್ಯೆ ಆಗಿ ಬಿಟ್ಟಿತ್ತು. ಒಂದು ದಿನ ಸಿನಿಮಾ ಶೂಟಿಂಗ್​ ಮುಗಿಸಿ ಬಂದು ಮಲಗಿದ್ದೆ. ಮುಂಜಾನೆ 4:30 ಹೊತ್ತಿಗೆ ಹೆಂಡತಿ ಅಳುವ ಧ್ವನಿ ಕೇಳಿತು. ಏಕೆ ಅಳುತ್ತಿದ್ದೀಯಾ ಎಂದು ಕೇಳಿದೆ?’ ಎಂದು ಅಂದಿನ ಘಟನೆ ನೆನೆದಿದ್ದಾರೆ ಅಕುಲ್​.

‘ನೀವು ಮಾಧುರಿ ಅಂತ ಹುಡುಗಿ ಹೆಸರು ಹೇಳಿದ್ರಿ. ಯಾರು ಆ ಮಾಧುರಿ? ನನಗೆ ಅವಳು ಯಾರು ಅಂತ ಗೊತ್ತಾಗಬೇಕು ಎಂದು ಪಟ್ಟು ಹಿಡಿದಳು. ಮಾಧುರಿ ಯಾರು ಅಂತಾನೇ ನನಗೆ ಗೊತ್ತಿರಲಿಲ್ಲ. ನಾನು ಹೇಳಿಲ್ಲ ಅಂದೆ. ಆದರೆ, ಹೆಂಡತಿ ಇದನ್ನು ಒಪ್ಪಿಲ್ಲ. ನಂತರ ನಿದ್ದೆಯಲ್ಲಿ ಹೇಳಿದ ಮಾತು ನಿಜವಿರುತ್ತದೆಯೋ ಅಥವಾ ಸುಳ್ಳಾಗಿರುತ್ತದೆಯೋ ಎಂಬುದನ್ನು ನನ್ನ ಹೆಂಡತಿ ಗೂಗಲ್​ನಲ್ಲಿ​ ಸರ್ಚ್​ ಮಾಡಿದಳು. ಆಗ ಸುಳ್ಳು ಎನ್ನುವ ಉತ್ತರ ಗೂಗಲ್​ನಿಂದ ಬಂತು. ಗೂಗಲ್​ ಕಡೆಯಿಂದ ಹೌದು ಎನ್ನುವ ಉತ್ತರ ಬಂದಿದ್ದೆ ನನ್ನ ಸಂಸಾರ ಹಾಳಾಗುತ್ತಿತ್ತು. ಗೂಗಲ್​ ನನ್ನ ಮನೆ ಉಳಿಸಿತು’ ಎಂದಿದ್ದಾರೆ ಅಕುಲ್​ ಬಾಲಾಜಿ. ಈ ವಿಚಾರ ಕೇಳಿ ಮನೆ ಮಂದಿ ನಿಜಕ್ಕೂ ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!