AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್ ಬಾಲಾಜಿ

Akul Balaji: ಹಳ್ಳಿ ಪವರ್ ರಿಯಾಲಿಟಿ ಶೋನಲ್ಲಿ ಅಕುಲ್ ಬಾಲಾಜಿ ಅವರ ಖಡಕ್ ನಿರೂಪಣೆ ಗಮನ ಸೆಳೆದಿದೆ. ಸ್ಪರ್ಧಿಗಳಿಗೆ ಹಾಲು ಕರೆಯುವ ಕಠಿಣ ಕಾರ್ಯ ನೀಡಲಾಗಿತ್ತು. ಸ್ಪರ್ಧಿ ಸ್ನೇಹಾ ಶೆಟ್ಟಿ ಹಾಲು ಕರೆಯಲು ವಿಫಲರಾದಾಗ ಅಕುಲ್ ಅವರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್ ಬಾಲಾಜಿ
ಅಕುಲ್
ರಾಜೇಶ್ ದುಗ್ಗುಮನೆ
|

Updated on: Sep 03, 2025 | 7:33 AM

Share

ಅಕುಲ್ ಬಾಲಾಜಿ ಅವರು ಕೆಲವು ರಿಯಾಲಿಟಿ ಶೋಗಳನ್ನು ಹೋಸ್ಟ್ ಮಾಡಿ ಗಮನ ಸೆಳೆದಿದ್ದಿದೆ. ಅವರು ಯಾವಾಗಲೂ ತಮ್ಮ ಖಡಕ್ ನಿರೂಪಣೆಯಿಂದ ಇಷ್ಟ ಆಗುತ್ತಾರೆ. ಈಗ ಅವರು ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿರುವ ‘ಹಳ್ಳಿ ಪವರ್’ (Halli Power) ರಿಯಾಲಿಟಿ ಶೋನ ನಡೆಸಿಕೊಡುತ್ತಿದ್ದಾರೆ. 12 ಸ್ಪರ್ಧಿಗಳು ಬೆಳಗಾವಿಯ ಸಂಗೊಳ್ಳಿ ಊರನ್ನು ಸೇರಿದ್ದಾರೆ. ಮೊದಲ ದಿನವೇ ಅಕುಲ್ ಬಾಲಾಜಿ ಅವರ ನಿಜವಾದ ಸ್ವರೂಪ ಗೊತ್ತಾಗಿದೆ.

ಅಕುಲ್ ಬಾಲಾಜಿ ಅವರು ಯಾವುದೇ ವಿಚಾರ ಇದ್ದರೂ ನೇರವಾಗಿ ಹೇಳುತ್ತಾರೆ. ಅವರು ಓಪನ್ ಆಗಿ ಹೇಳುವಾಗ ಸಾಫ್ಟ್ ಆಗಿ ಹೇಳಿದ ಉದಾಹರಣೆಯೇ ಇಲ್ಲ. ಅವರು ಯಾವಾಗಲೂ ತಮ್ಮ ಖಡಕ್ ಮಾತುಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಈಗ ‘ಹಳ್ಳಿ ಪವರ್’ನಲ್ಲೂ ಅವರ ಖಡಕ್ ನಿರೂಪಣೆ ಹೆಚ್ಚು ಸುದ್ದಿ ಆಗಿದೆ.

ಹಳ್ಳಿ ಸೇರಿದ ಪ್ಯಾಟೆ ಬೆಡಗಿಯರಿಗೆ ಮೊದಲ ದಿನವೇ ಹಾಲು ಕರೆಯೋ ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ನ ಸಿದ್ಧತೆಗೋಸ್ಕರ ಯುವತಿಯರಿಗೆ ಪ್ರ್ಯಾಕ್ಟಿಸ್ ಕೂಡ ಕೊಡಿಸಲಾಯಿತು. ಬೇರೆ ಬೇರೆ ಮನೆಗಳಿಗೆ ತೆರಳಿ ಎಲ್ಲಾ ಸ್ಪರ್ಧಿಗಳು ಹಾಲು ಕರೆಯೋದನ್ನು ಅಭ್ಯಾಸ ಮಾಡಿಕೊಂಡರು. ಆದರೆ, ಟಾಸ್ಕ್ ನಡೆಯುವಾಗ ಹಾಲು ಕರೆಯೋದು ಅಷ್ಟು ಸುಲಭ ಆಗಿರಲೇ ಇಲ್ಲ ಎಂಬುದು ಎಲ್ಲರ ಅನುಭವಕ್ಕೆ ಬಂತು.

ಇದನ್ನೂ ಓದಿ
Image
ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ
Image
‘ಕಿತ್ತೋಗಿರೋ ನನ್ಮಕ್ಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’; ಸುದೀಪ್ ಕಿವಿಮಾತು
Image
ಪವನ್ ಕಲ್ಯಾಣ್ ಜನ್ಮದಿನ: 5 ಲಕ್ಷಕ್ಕೆ ಹರಾಜಾಯ್ತು ‘ಒಜಿ’ ಚಿತ್ರದ ಟಿಕೆಟ್
Image
ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ

ಮಂಗಳೂರಿನ ಸ್ನೇಹಾ ಶೆಟ್ಟಿ ಅವರು ಎಷ್ಟೇ ಪ್ರಯತ್ನ ಮಾಡಿದರೂ ಒಂದೇ ಒಂದು ತೊಟ್ಟು ಹಾಲು ಕರೆಯೋಕೆ ಸಾಧ್ಯ ಆಗಲೇ ಇಲ್ಲ. ‘ಹಾಲು ಬರ್ತಾ ಇಲ್ಲ. ಈ ಎಮ್ಮೆಯಲ್ಲಿ ಹಾಲೇ ಇಲ್ಲ’ ಎಂದು ಹೇಳಿದರು. ಪ್ರಯತ್ನ ಹಾಕೋದು ಬಿಟ್ಟು ಅವರು ಕೈ ಚೆಲ್ಲಿದರು. ಆಗ ಎಮ್ಮೆಯ ಮಾಲೀಕರು ಬಂದು ಹಾಲು ಕರೆದು ತೋರಿಸಿದರು. ಆಗ ಸ್ನೇಹಾಗೆ ಏನು ಹೇಳಬೇಕು ಎಂಬುದೇ ಗೊತ್ತಾಗಲಿಲ್ಲ.

ಇದನ್ನೂ ಓದಿ: ಹಳ್ಳಿ ಪವರ್; ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ

‘ಸ್ನೇಹಾ ಅವರೇ ಎಷ್ಟು ಹಾಲು ಕರೆದ್ರಿ’ ಎಂದು ಬಕೆಟ್ ನೋಡಿ ನೆಲಕ್ಕೆ ಎಸೆದೇ ಬಿಟ್ಟರು. ಆ ಬಳಿಕ ಸ್ನೇಹಾಗೆ ಏರು ಧ್ವನಿಯಲ್ಲಿ ಬೈದರು. ಇದರಿಂದ ಸ್ನೇಹಾಗೆ ಕಣ್ಣಲ್ಲಿ ನಿರೇ ಬಂದು ಬಿಟ್ಟಿತು. ಆದರೆ, ಅವರ ಪಾರ್ಟ್ನರ್ ಮೋನಿಷಾ 400 ಎಂಎಲ್ ಹಾಲು ಕರೆದಿದ್ದರಿಂದ ಸ್ನೇಹಾಗೆ ಗೆಲುವು ಸಿಕ್ಕಿತು. ಮುಂದಿನ ದಿನಗಳಲ್ಲಿ ಅಕುಲ್ ಬಾಲಾಜಿ ಅವರು ಮತ್ತಷ್ಟು ಉಗ್ರ ಸ್ವರೂಪ ತೋರಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ