AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌನ್​ ಬನೇಗಾ ಕರೋಡ್​ಪತಿ’ 1000ನೇ ಎಪಿಸೋಡ್​; ಮಗಳ ಎದುರು ಕಣ್ಣೀರು ಹಾಕಿದ ಅಮಿತಾಭ್​ ಬಚ್ಚನ್​

Kaun Banega Crorepati: ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದ ವೇದಿಕೆಯು ಈ 21 ವರ್ಷಗಳಲ್ಲಿ ಅನೇಕ ರೆಕಾರ್ಡ್​ಗಳಿಗೆ ಸಾಕ್ಷಿ ಆಗಿದೆ. ಅದನ್ನು ವಿವರಿಸುತ್ತ ಅಮಿತಾಭ್​ ಭಾವುಕರಾದರು. ಈ ವಿಶೇಷ ಎಪಿಸೋಡ್​ ಡಿ.3ರಂದು ಪ್ರಸಾರ ಆಗಲಿದೆ.

‘ಕೌನ್​ ಬನೇಗಾ ಕರೋಡ್​ಪತಿ’ 1000ನೇ ಎಪಿಸೋಡ್​; ಮಗಳ ಎದುರು ಕಣ್ಣೀರು ಹಾಕಿದ ಅಮಿತಾಭ್​ ಬಚ್ಚನ್​
ಶ್ವೇತಾ ನವೇಲಿ ನಂದಾ, ಅಮಿತಾಭ್​ ಬಚ್ಚನ್​
TV9 Web
| Edited By: |

Updated on:Nov 29, 2021 | 4:08 PM

Share

ಕಿರುತೆರೆ ಪ್ರೇಕ್ಷಕರ ಫೇವರಿಟ್​ ಕಾರ್ಯಕ್ರಮಗಳಲ್ಲಿ ಒಂದಾದ ‘ಕೌನ್​ ಬನೇಗಾ ಬರೋಡ್​ಪತಿ’ ಈಗ ಸಾವಿರ ಎಪಿಸೋಡ್​ಗಳನ್ನು ಪೂರೈಸಿದೆ. ಅಮಿತಾಭ್​ ಬಚ್ಚನ್​ (Amitabh Bachchan) ನಡೆಸಿಕೊಡುವ ಈ ಶೋ ದೇಶಾದ್ಯಂತ ಫೇಮಸ್​ ಆಗಿದೆ. ಯಶಸ್ವಿಯಾಗಿ 13 ಸೀಸನ್​ಗಳವರೆಗೆ ಇದು ಸಾಗಿ ಬಂದಿದೆ. ಸಾವಿರಾರು ಜನರು ಹಾಟ್​ ಸೀಟ್​ನಲ್ಲಿ ಕುಳಿತು ಆಟ ಆಡಿದ್ದಾರೆ. ಜಗತ್ತಿನಲ್ಲಿರುವ ನೂರಾರು ವಿಷಯದ ಬಗೆಗಿನ ಮಾಹಿತಿಗಳ ಜೊತೆಗೆ ಮನರಂಜನೆಯನ್ನೂ ನೀಡುವ ‘ಕೌನ್​ ಬನೇಗಾ ಕರೋಡ್​ಪತಿ’ (Kaun Banega Crorepati) ಕಾರ್ಯಕ್ರಮ ಸೋನಿ (Sony Tv) ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. 21 ವರ್ಷಗಳನ್ನು ಪೂರೈಸಿ, ಸಾವಿರದ ಎಪಿಸೋಡ್​ಗೆ ಈ ಶೋ ಕಾಲಿಟ್ಟಿದೆ. ಆ ಸಲುವಾಗಿ ಒಂದು ವಿಶೇಷ ಪ್ರೋಮೋವನ್ನು ವಾಹಿನಿ ಹಂಚಿಕೊಂಡಿದೆ.

‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದ 1000ನೇ ಎಪಿಸೋಡ್​ಗೆ ವಿಶೇಷ ಅತಿಥಿಗಳಾಗಿ ಅಮಿತಾಭ್​ ಬಚ್ಚನ್​ ಪುತ್ರಿ ಶ್ವೇತಾ ನವೇಲಿ ನಂದಾ ಮತ್ತು ಮೊಮ್ಮಗಳು ನವ್ಯಾ ನವೇಲಿ ನಂದಾ ಆಗಮಿಸಿದ್ದರು. ಈ 21 ವರ್ಷಗಳ ಮಹಾನ್​ ಜರ್ನಿ ಹೇಗಿತ್ತು ಎಂಬುದನ್ನು ವಿವರಿಸುತ್ತ ಅಮಿತಾಭ್​ ಭಾವುಕರಾದರು. ಕಣ್ಣೀರು ವರೆಸಿಕೊಂಡು ಕಾರ್ಯಕ್ರಮ ಮುಂದುವರಿಸಿದರು. ಈ ವಿಶೇಷ ಎಪಿಸೋಡ್​ ಡಿ.3ರಂದು ಪ್ರಸಾರ ಆಗಲಿದೆ.

‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದ ವೇದಿಕೆಯು ಈ 21 ವರ್ಷಗಳಲ್ಲಿ ಅನೇಕ ರೆಕಾರ್ಡ್​ಗಳಿಗೆ ಸಾಕ್ಷಿ ಆಗಿದೆ. ಮೊದಲ ಬಾರಿಗೆ ಒಂದು ಕೋಟಿ ರೂಪಾಯಿ ಗೆದ್ದವರು ಯಾರು? ಮೊದಲು ಬಾರಿ 5 ಕೋಟಿ ರೂಪಾಯಿ ಯಾರ ಪಾಲಾಯಿತು? 7 ಕೋಟಿ ರೂಪಾಯಿ ಗೆದ್ದು ಇತಿಹಾಸ ಬರೆದಿದ್ದು ಯಾರು? ಕೋಟಿ ರೂ. ಪಡೆದ ಮೊದಲ ಮಹಿಳೆ ಯಾರು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರದಂತೆ ಇರುವ ಪ್ರೋಮೋವನ್ನು ಸೋನಿ ವಾಹಿನಿ ಶೇರ್​ ಮಾಡಿಕೊಂಡಿದೆ.

ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದ ಜೊತೆಗೆ ಅಮಿತಾಭ್​ ಬಚ್ಚನ್​ ಅವರಿಗೆ ಒಂದು ಎಮೋಷನಲ್​ ಬಾಂಧವ್ಯ ಇದೆ. ದೇಶದ ಬೇರೆ ಬೇರೆ ಭಾಗಗಳಿಂದ ಬಂದ ಸ್ಪರ್ಧಿಗಳು ಹಾಟ್​ ಸೀಟ್​ನಲ್ಲಿ ಕುಳಿತು ಬಹುಮಾನ ಗೆದ್ದಿದ್ದಾರೆ. ಕೋಟ್ಯಂತರ ರೂಪಾಯಿ ಗೆದ್ದು ತಮ್ಮ ಕಷ್ಟಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ. ಹಲವು ಸೆಲೆಬ್ರಿಟಿಗಳು ಈ ವೇದಿಕೆಗೆ ಬಂದು, ಹಣ ಗೆದ್ದಿದ್ದಾರೆ. ಆ ಹಣವನ್ನು ಚಾರಿಟಿ ಕೆಲಸಕ್ಕೆ ಬಳಸಿದ್ದಾರೆ. ಇಂಥ ನೂರಾರು ಘಟನೆಗಳಿಗೆ ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದ ವೇದಿಕೆ ಸಾಕ್ಷಿ ಆಗಿದೆ. ಆ ಎಲ್ಲ ಘಟನೆಗಳನ್ನು 1000ನೇ ಎಪಿಸೋಡ್​ನಲ್ಲಿ ಅಮಿತಾಭ್​ ಬಚ್ಚನ್​ ಮೆಲುಕು ಹಾಕಲಿದ್ದಾರೆ. ಈ ಕಾರ್ಯಕ್ರಮದ ಕನ್ನಡದ ಅವತರಣಿಕೆ ‘ಕನ್ನಡದ ಕೋಟ್ಯಾಧಿಪತಿ’ ಕೂಡ ಫೇಮಸ್​ ಆಗಿದೆ. ಅದನ್ನು ಪುನೀತ್​ ರಾಜ್​ಕುಮಾರ್​ ನಡೆಸಿಕೊಡುತ್ತಿದ್ದರು.

ಇದನ್ನೂ ಓದಿ:

ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

‘ಹಾಗಲ್ಲ ಸರ್​..’ ಎಂದು ಅಮಿತಾಭ್​ಗೆ ನಟನೆ ಹೇಳಿಕೊಟ್ಟ ದೀಪಿಕಾ, ಫರ್ಹಾ ಖಾನ್​; ವಿಡಿಯೋ ವೈರಲ್​

Published On - 3:38 pm, Mon, 29 November 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?