AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್

Kriti Sanon in KBC 13: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್​ಪತಿ ಶೋ ನಡೆಸಿಕೊಡುತ್ತಾ, ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಅವರಿಗೆ ತಮ್ಮ ಯೌವ್ವನದ ದಿನಗಳು ನೆನಪಾಗಿದೆ.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್
ಅಮಿತಾಭ್ ಬಚ್ಚನ್, ಕೃತಿ ಸನೋನ್
TV9 Web
| Edited By: |

Updated on: Oct 19, 2021 | 4:18 PM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ‘ಕೌನ್ ಬನೇಗಾ ಕರೋಡ್​ಪತಿ’ಯ 13ನೇ ಸೀಸನ್ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ  ಪ್ರತಿ ಶುಕ್ರವಾರ ‘ಶಾನ್ದಾರ್ ಶುಕ್ರವಾರ್’ ಎಂಬ ಸಂಚಿಕೆ ಪ್ರಸಾರವಾಗುತ್ತದೆ. ಅದರಲ್ಲಿ ವಿವಿಧ ಕ್ಷೇತ್ರಗಳ ಖ್ಯಾತ ತಾರೆಯರು ಚಾರಿಟಿಯ ಉದ್ದೇಶದಿಂದ ಭಾಗವಹಿಸಿ, ಗೆದ್ದ ಹಣವನ್ನು ದಾನ ಮಾಡುತ್ತಾರೆ. ಈ ವಾರದ ಸಂಚಿಕೆಯಲ್ಲಿ ಬಾಲಿವುಡ್​ನ ಖ್ಯಾತ ನಟಿ ಕೃತಿ ಸನೋನ್ ಭಾಗಿಯಾಗಲಿದ್ದಾರೆ. ಈ ಕುರಿತು ಬಿಗ್​ಬಿ ಚಿತ್ರಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಕೃತಿ ಜೊತೆಗೆ ಹೆಜ್ಜೆ ಹಾಕುತ್ತಿದ್ದಾರೆ. ನೃತ್ಯ ಮಾಡುವಾಗ ಅಮಿತಾಭ್​ಗೆ ತಮ್ಮ ಯೌವ್ವನದ ದಿನಗಳು ನೆನಪಾಗಿವೆಯಂತೆ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಅಮಿತಾಭ್, ಅದಕ್ಕೆ ಕ್ಯಾಪ್ಶನ್ ನೀಡುತ್ತಾ ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ‘ನಟಿ ಕೃತಿಯೊಂದಿಗೆ ಬಲ್ರೂಮ್ ನೃತ್ಯ ಮಾಡುತ್ತಾ ತನ್ನ ಕಾಲೇಜು ಹಾಗೂ ಕಲ್ಕತ್ತಾದ ದಿನಗಳು ನೆನಪಾದವು’ ಎಂದು ಅಮಿತಾಭ್ ಸಂಭ್ರಮ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ಅಮಿತಾಭ್ ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ:

ನಟ ಅಮಿತಾಭ್ ಮುಂಬೈಗೆ ಬರುವ ಮೊದಲು ಕಲ್ಕತ್ತಾದಲ್ಲಿದ್ದರು. ಕೃತಿ ಜೊತೆ ನೃತ್ಯ ಮಾಡುತ್ತಾ ಅಮಿತಾಭ್ ಆಗಿನ ಕಾಲವನ್ನು ನೆನಪಿಸಿಕೊಂಡಿದ್ದಾರೆ. ಈ ಸಂಚಿಕೆಯ ಕುರಿತು ಇನ್ನೂ ವಾಹಿನಿ ಪ್ರೋಮೋ ಬಿಡುಗಡೆ ಮಾಡಿಲ್ಲ. ಕೃತಿ ಭಾಗವಹಿಸಿರುವ ವಿಶೇಷ ಸಂಚಿಕೆಯು ಶುಕ್ರವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಇತ್ತೀಚೆಗಷ್ಟೇ ನಟಿ ಕೃತಿ ಸನೋನ್ ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ್ದರು. ಅದರಲ್ಲಿ ಅವರು ಸೀತೆಯ ಪಾತ್ರವನ್ನು ನಿರ್ವಹಿಸಿದ್ದಾರೆ.

ಕೆಬಿಸಿಯಲ್ಲಿ ಪ್ರತಿ ಶುಕ್ರವಾರ ಪ್ರಸಾರವಾಗುವ ವಿಶೇಷ ಸಂಚಿಕೆಯಲ್ಲಿ ಈವರೆಗೆ ಖ್ಯಾತ ತಾರೆಯರು ಭಾಗವಹಿಸಿದ್ದಾರೆ. ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ, ಸುನೀಲ್ ಶೆಟ್ಟಿ, ಜಾಕಿನ ಶ್ರಾಫ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಒಲಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಹಾಕಿ ಆಟಗಾರ ಪಿ.ಶ್ರೀಜಿತ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

‘ಸಲಗ’ ಚಿತ್ರದ ಸಾವಿತ್ರಿ-ಚಿನ್ನು ಲವ್​ಸ್ಟೋರಿ ಬಗ್ಗೆ ಕಾಕ್ರೋಚ್​​ ಸುಧಿ ಫನ್ನಿ ಮಾತುಕತೆ

Vasishta Simha: ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹಗೆ ಜನ್ಮದಿನದ ಸಂಭ್ರಮ; ಹೊಸ ಚಿತ್ರಗಳ ಪೋಸ್ಟರ್ ರಿಲೀಸ್

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು