AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್

Kriti Sanon in KBC 13: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್​ಪತಿ ಶೋ ನಡೆಸಿಕೊಡುತ್ತಾ, ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಅವರಿಗೆ ತಮ್ಮ ಯೌವ್ವನದ ದಿನಗಳು ನೆನಪಾಗಿದೆ.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್
ಅಮಿತಾಭ್ ಬಚ್ಚನ್, ಕೃತಿ ಸನೋನ್
TV9 Web
| Edited By: |

Updated on: Oct 19, 2021 | 4:18 PM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ‘ಕೌನ್ ಬನೇಗಾ ಕರೋಡ್​ಪತಿ’ಯ 13ನೇ ಸೀಸನ್ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ  ಪ್ರತಿ ಶುಕ್ರವಾರ ‘ಶಾನ್ದಾರ್ ಶುಕ್ರವಾರ್’ ಎಂಬ ಸಂಚಿಕೆ ಪ್ರಸಾರವಾಗುತ್ತದೆ. ಅದರಲ್ಲಿ ವಿವಿಧ ಕ್ಷೇತ್ರಗಳ ಖ್ಯಾತ ತಾರೆಯರು ಚಾರಿಟಿಯ ಉದ್ದೇಶದಿಂದ ಭಾಗವಹಿಸಿ, ಗೆದ್ದ ಹಣವನ್ನು ದಾನ ಮಾಡುತ್ತಾರೆ. ಈ ವಾರದ ಸಂಚಿಕೆಯಲ್ಲಿ ಬಾಲಿವುಡ್​ನ ಖ್ಯಾತ ನಟಿ ಕೃತಿ ಸನೋನ್ ಭಾಗಿಯಾಗಲಿದ್ದಾರೆ. ಈ ಕುರಿತು ಬಿಗ್​ಬಿ ಚಿತ್ರಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಕೃತಿ ಜೊತೆಗೆ ಹೆಜ್ಜೆ ಹಾಕುತ್ತಿದ್ದಾರೆ. ನೃತ್ಯ ಮಾಡುವಾಗ ಅಮಿತಾಭ್​ಗೆ ತಮ್ಮ ಯೌವ್ವನದ ದಿನಗಳು ನೆನಪಾಗಿವೆಯಂತೆ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಅಮಿತಾಭ್, ಅದಕ್ಕೆ ಕ್ಯಾಪ್ಶನ್ ನೀಡುತ್ತಾ ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ‘ನಟಿ ಕೃತಿಯೊಂದಿಗೆ ಬಲ್ರೂಮ್ ನೃತ್ಯ ಮಾಡುತ್ತಾ ತನ್ನ ಕಾಲೇಜು ಹಾಗೂ ಕಲ್ಕತ್ತಾದ ದಿನಗಳು ನೆನಪಾದವು’ ಎಂದು ಅಮಿತಾಭ್ ಸಂಭ್ರಮ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ಅಮಿತಾಭ್ ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ:

ನಟ ಅಮಿತಾಭ್ ಮುಂಬೈಗೆ ಬರುವ ಮೊದಲು ಕಲ್ಕತ್ತಾದಲ್ಲಿದ್ದರು. ಕೃತಿ ಜೊತೆ ನೃತ್ಯ ಮಾಡುತ್ತಾ ಅಮಿತಾಭ್ ಆಗಿನ ಕಾಲವನ್ನು ನೆನಪಿಸಿಕೊಂಡಿದ್ದಾರೆ. ಈ ಸಂಚಿಕೆಯ ಕುರಿತು ಇನ್ನೂ ವಾಹಿನಿ ಪ್ರೋಮೋ ಬಿಡುಗಡೆ ಮಾಡಿಲ್ಲ. ಕೃತಿ ಭಾಗವಹಿಸಿರುವ ವಿಶೇಷ ಸಂಚಿಕೆಯು ಶುಕ್ರವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಇತ್ತೀಚೆಗಷ್ಟೇ ನಟಿ ಕೃತಿ ಸನೋನ್ ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ್ದರು. ಅದರಲ್ಲಿ ಅವರು ಸೀತೆಯ ಪಾತ್ರವನ್ನು ನಿರ್ವಹಿಸಿದ್ದಾರೆ.

ಕೆಬಿಸಿಯಲ್ಲಿ ಪ್ರತಿ ಶುಕ್ರವಾರ ಪ್ರಸಾರವಾಗುವ ವಿಶೇಷ ಸಂಚಿಕೆಯಲ್ಲಿ ಈವರೆಗೆ ಖ್ಯಾತ ತಾರೆಯರು ಭಾಗವಹಿಸಿದ್ದಾರೆ. ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ, ಸುನೀಲ್ ಶೆಟ್ಟಿ, ಜಾಕಿನ ಶ್ರಾಫ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಒಲಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಹಾಕಿ ಆಟಗಾರ ಪಿ.ಶ್ರೀಜಿತ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

‘ಸಲಗ’ ಚಿತ್ರದ ಸಾವಿತ್ರಿ-ಚಿನ್ನು ಲವ್​ಸ್ಟೋರಿ ಬಗ್ಗೆ ಕಾಕ್ರೋಚ್​​ ಸುಧಿ ಫನ್ನಿ ಮಾತುಕತೆ

Vasishta Simha: ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹಗೆ ಜನ್ಮದಿನದ ಸಂಭ್ರಮ; ಹೊಸ ಚಿತ್ರಗಳ ಪೋಸ್ಟರ್ ರಿಲೀಸ್

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ