AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್

Kriti Sanon in KBC 13: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್​ಪತಿ ಶೋ ನಡೆಸಿಕೊಡುತ್ತಾ, ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಅವರಿಗೆ ತಮ್ಮ ಯೌವ್ವನದ ದಿನಗಳು ನೆನಪಾಗಿದೆ.

Amitabh Bachchan: ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕುತ್ತಾ ಕಾಲೇಜು ದಿನಗಳ ನೆನಪಿಗೆ ಜಾರಿದ ಅಮಿತಾಭ್
ಅಮಿತಾಭ್ ಬಚ್ಚನ್, ಕೃತಿ ಸನೋನ್
TV9 Web
| Edited By: |

Updated on: Oct 19, 2021 | 4:18 PM

Share

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ‘ಕೌನ್ ಬನೇಗಾ ಕರೋಡ್​ಪತಿ’ಯ 13ನೇ ಸೀಸನ್ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ  ಪ್ರತಿ ಶುಕ್ರವಾರ ‘ಶಾನ್ದಾರ್ ಶುಕ್ರವಾರ್’ ಎಂಬ ಸಂಚಿಕೆ ಪ್ರಸಾರವಾಗುತ್ತದೆ. ಅದರಲ್ಲಿ ವಿವಿಧ ಕ್ಷೇತ್ರಗಳ ಖ್ಯಾತ ತಾರೆಯರು ಚಾರಿಟಿಯ ಉದ್ದೇಶದಿಂದ ಭಾಗವಹಿಸಿ, ಗೆದ್ದ ಹಣವನ್ನು ದಾನ ಮಾಡುತ್ತಾರೆ. ಈ ವಾರದ ಸಂಚಿಕೆಯಲ್ಲಿ ಬಾಲಿವುಡ್​ನ ಖ್ಯಾತ ನಟಿ ಕೃತಿ ಸನೋನ್ ಭಾಗಿಯಾಗಲಿದ್ದಾರೆ. ಈ ಕುರಿತು ಬಿಗ್​ಬಿ ಚಿತ್ರಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಕೃತಿ ಜೊತೆಗೆ ಹೆಜ್ಜೆ ಹಾಕುತ್ತಿದ್ದಾರೆ. ನೃತ್ಯ ಮಾಡುವಾಗ ಅಮಿತಾಭ್​ಗೆ ತಮ್ಮ ಯೌವ್ವನದ ದಿನಗಳು ನೆನಪಾಗಿವೆಯಂತೆ. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಅಮಿತಾಭ್, ಅದಕ್ಕೆ ಕ್ಯಾಪ್ಶನ್ ನೀಡುತ್ತಾ ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ‘ನಟಿ ಕೃತಿಯೊಂದಿಗೆ ಬಲ್ರೂಮ್ ನೃತ್ಯ ಮಾಡುತ್ತಾ ತನ್ನ ಕಾಲೇಜು ಹಾಗೂ ಕಲ್ಕತ್ತಾದ ದಿನಗಳು ನೆನಪಾದವು’ ಎಂದು ಅಮಿತಾಭ್ ಸಂಭ್ರಮ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ಅಮಿತಾಭ್ ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ:

ನಟ ಅಮಿತಾಭ್ ಮುಂಬೈಗೆ ಬರುವ ಮೊದಲು ಕಲ್ಕತ್ತಾದಲ್ಲಿದ್ದರು. ಕೃತಿ ಜೊತೆ ನೃತ್ಯ ಮಾಡುತ್ತಾ ಅಮಿತಾಭ್ ಆಗಿನ ಕಾಲವನ್ನು ನೆನಪಿಸಿಕೊಂಡಿದ್ದಾರೆ. ಈ ಸಂಚಿಕೆಯ ಕುರಿತು ಇನ್ನೂ ವಾಹಿನಿ ಪ್ರೋಮೋ ಬಿಡುಗಡೆ ಮಾಡಿಲ್ಲ. ಕೃತಿ ಭಾಗವಹಿಸಿರುವ ವಿಶೇಷ ಸಂಚಿಕೆಯು ಶುಕ್ರವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಇತ್ತೀಚೆಗಷ್ಟೇ ನಟಿ ಕೃತಿ ಸನೋನ್ ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ್ದರು. ಅದರಲ್ಲಿ ಅವರು ಸೀತೆಯ ಪಾತ್ರವನ್ನು ನಿರ್ವಹಿಸಿದ್ದಾರೆ.

ಕೆಬಿಸಿಯಲ್ಲಿ ಪ್ರತಿ ಶುಕ್ರವಾರ ಪ್ರಸಾರವಾಗುವ ವಿಶೇಷ ಸಂಚಿಕೆಯಲ್ಲಿ ಈವರೆಗೆ ಖ್ಯಾತ ತಾರೆಯರು ಭಾಗವಹಿಸಿದ್ದಾರೆ. ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ, ಸುನೀಲ್ ಶೆಟ್ಟಿ, ಜಾಕಿನ ಶ್ರಾಫ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಒಲಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಹಾಕಿ ಆಟಗಾರ ಪಿ.ಶ್ರೀಜಿತ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

‘ಸಲಗ’ ಚಿತ್ರದ ಸಾವಿತ್ರಿ-ಚಿನ್ನು ಲವ್​ಸ್ಟೋರಿ ಬಗ್ಗೆ ಕಾಕ್ರೋಚ್​​ ಸುಧಿ ಫನ್ನಿ ಮಾತುಕತೆ

Vasishta Simha: ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹಗೆ ಜನ್ಮದಿನದ ಸಂಭ್ರಮ; ಹೊಸ ಚಿತ್ರಗಳ ಪೋಸ್ಟರ್ ರಿಲೀಸ್

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Follow Us
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ