AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC 13: ಕೆಬಿಸಿಯ 20 ವರ್ಷಗಳ ಇತಿಹಾಸದಲ್ಲೇ ಯಾರೂ ಕೇಳಿರದ ಪ್ರಶ್ನೆ ಕೇಳಿದ ಕತ್ರೀನಾ ಕೈಫ್; ದಂಗಾದ ಅಮಿತಾಭ್

Katrina Kaif | Amitabh Bachchan: ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್​ಪತಿ 20 ವರ್ಷ ಪೂರೈಸಿದೆ. ಇಷ್ಟು ವರ್ಷಗಳ ಇತಿಹಾಸದಲ್ಲೇ ಯಾರೂ ಕೇಳಿರದ ಪ್ರಶ್ನೆಯೊಂದನ್ನು ಕತ್ರೀನಾ ಕೈಫ್ ಅಮಿತಾಭ್ ಮುಂದಿಟ್ಟಿದ್ದು, ಇಡೀ ಸೆಟ್ ನಗೆಗಡಲಲ್ಲಿ ತೇಲಿದೆ. ಆದರೆ ಅಮಿತಾಭ್​ ಮಾತ್ರ ಆ ಪ್ರಶ್ನೆಗೆ ಮೌನ ತಾಳಿದ್ದಾರೆ.

KBC 13: ಕೆಬಿಸಿಯ 20 ವರ್ಷಗಳ ಇತಿಹಾಸದಲ್ಲೇ ಯಾರೂ ಕೇಳಿರದ ಪ್ರಶ್ನೆ ಕೇಳಿದ ಕತ್ರೀನಾ ಕೈಫ್; ದಂಗಾದ ಅಮಿತಾಭ್
ಕತ್ರೀನಾ ಕೈಫ್, ಅಮಿತಾಭ್ ಬಚ್ಚನ್
TV9 Web
| Edited By: |

Updated on: Nov 04, 2021 | 6:17 PM

Share

ಕೆಬಿಸಿ 13: ಅಮೀತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್​ಪತಿಯ 13ನೇ ಸೀಸನ್ ಪ್ರಸ್ತುತ ಉತ್ತಮವಾಗಿ ಮೂಡಿಬರುತ್ತಿದೆ. ಈಗಾಗಲೇ ಇಬ್ಬರು ಕೋಟ್ಯಧಿಪತಿಗಳು ಈ ಸೀಸನ್​ನಲ್ಲಿ ಹೊರಹೊಮ್ಮಿದ್ದಾರೆ. ಅಲ್ಲದೇ ಪ್ರತಿ ಶುಕ್ರವಾರ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ರಂಗದ ಖ್ಯಾತ ತಾರೆಯರು ಆಗಮಿಸಿ, ಚಾರಿಟಿಯ ಉದ್ದೇಶದಿಂದ ಭಾಗವಹಿಸುತ್ತಾರೆ. ಅದೂ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ ಶೋ ಆರಂಭವಾಗಿ 20 ವರ್ಷಗಳು ಕಳೆದಿದ್ದು, ಬಹುತೇಕ ಅಮಿತಾಭ್ ನಿರೂಪಕರಾಗಿ ಶೋ ನಡೆಸಿಕೊಟ್ಟಿದ್ದಾರೆ. ದೀರ್ಘಾವಧಿಯಿಂದ ನಡೆಯುತ್ತಿರುವ ಯಶಸ್ವಿ ಶೋ ಇದಾಗಿದ್ದು, ಬಹುತೇಕರಿಗೆ ಇದರ ಪರಿಚಯವಿರುತ್ತದೆ. ಆದರೆ ಎಲ್ಲರಿಗೂ ಈ ಸ್ಪರ್ಧೆಯ ನಿಯಮಗಳು ಸ್ಪಷ್ಟವಾಗಿ ತಿಳಿದಿರಬೇಕು ಎಂದೇನೂ ಇಲ್ಲ. ಅಂಥದ್ದೇ ಪ್ರಸಂಗಕ್ಕೆ ಕೆಬಿಸಿ ವೇದಿಕೆ ಇತ್ತೀಚೆಗೆ ಸಾಕ್ಷಿಯಾಗಿದೆ. ಬಾಲಿವುಡ್​ನ ಖ್ಯಾತ ನಟಿ ಕತ್ರೀನಾ ಕೈಫ್ ಇತ್ತೀಚೆಗೆ ಶೋನಲ್ಲಿ ಭಾಗಿಯಾಗಿದ್ದು, ಸ್ಪರ್ಧೆಯ ನಿಯಮಗಳ ಕುರಿತು ಇದುವರೆಗೆ ಯಾರೂ ಕೇಳಿರದ ಪ್ರಶ್ನೆಯೊಂದನ್ನು ಅಮಿತಾಭ್ ಮುಂದಿಟ್ಟಿದ್ದಾರೆ.

‘ಸೂರ್ಯವಂಶಿ’ ಚಿತ್ರದ ಪ್ರಚಾರದ ಉದ್ದೇಶದಿಂದ ಕೆಬಿಸಿ 13ರ ಕಾರ್ಯಕ್ರಮದಲ್ಲಿ ಕತ್ರೀನಾ ಕೈಫ್ ಹಾಗೂ ನಟ ಅಕ್ಷಯ್ ಕುಮಾರ್ ಭಾಗವಹಿಸಿದ್ದರು. ಆಗ ಅಮಿತಾಭ್ ಮಾತನಾಡುತ್ತಾ ಕರೀನಾ ಅವರ ಬಳಿ, ನೀವು ಸ್ಪರ್ಧೆಗೆ ಹೇಗೆ ತಯಾರಾಗಿದ್ದೀರಿ ಎಂದು ಪ್ರಶ್ನಿಸಿದರು. ಆಗ ಕತ್ರೀನಾ, ಇತಿಹಾಸದ ಕೆಲವೊಂದು ಘಟನೆಗಳನ್ನು ಓದಿಕೊಂಡೆ, ನಂತರ ಒಂದಷ್ಟು ಗೂಗಲ್ ಸರ್ಚ್ ಮಾಡಿ ಮಾಹಿತಿ ಕಲೆಹಾಕಿಕೊಂಡಿದ್ದೇನೆ ಎಂದರು. ಇದೇ ಪ್ರಶ್ನೆಯನ್ನು ಬಿಗ್​ಬಿ ಅಕ್ಷಯ್​ಗೆ ಕೇಳಿದರು. ಆಗ ಅಕ್ಷಯ್, ‘ನನಗೇನೋ ತಿಳಿದಿದೆಯೋ ಅದನ್ನು ನಾನು ಹೇಳುತ್ತೇನೆ. ಇಲ್ಲಿ ಗೆಲ್ಲಬೇಕೆಂದು ಬಂದಿರುವವರು ಕತ್ರೀನಾ’ ಎಂದು ಹೇಳಿದರು.

ನಂತರ ಕತ್ರೀನಾ ಅಮಿತಾಭ್ ಬಳಿ, ‘ನಾವು ಲೈಫ್​ಲೈನ್​ ಅನ್ನು ಪ್ರತೀ ಪ್ರಶ್ನೆಗೂ ಒಮ್ಮೆ ಬಳಸಬಹುದೇ?’ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಅಮಿತಾಭ್ ಅಕ್ಷರಶಃ ದಂಗಾಗಿ, ಮೌನವಾಗಿ ಕುಳಿತರು. ಆಗ ಅಕ್ಷಯ್ ಅಮಿತಾಭ್ ಬಳಿ, ‘‘ನೀವು ಇಷ್ಟು ವರ್ಷ ಸ್ಪರ್ಧೆ ನಡೆಸುತ್ತಿದ್ದೀರಿ. ಆದರೆ ಇದುವರೆಗೆ ಯಾರೂ ಆ ಪ್ರಶ್ನೆಯನ್ನು ನಿಮಗೆ ಕೇಳಿಲ್ಲ’’ ಎಂದು ತಮಾಷೆ ಮಾಡಿದರು. ಅಕ್ಷಯ್ ಮಾತಿಗೆ ಇಡೀ ಸೆಟ್ ನಗೆಗಡಲಲ್ಲಿ ತೇಲಿದೆ. ಈ ಸಂಚಿಕೆ ಶುಕ್ರವಾರ ಪ್ರಸಾರವಾಗಲಿದೆ.

ವಾಹಿನಿ ಹಂಚಿಕೊಂಡ ಪ್ರೋಮೋ ಇಲ್ಲಿದೆ:

ಅಕ್ಷಯ್ ಕುಮಾರ್ ಹಾಗೂ ಕತ್ರೀನಾ ಕೈಫ್ ನಟನೆಯ ಸೂರ್ಯವಂಶಿ ಚಿತ್ರ ನವೆಂಬರ್ 5ಕ್ಕೆ ತೆರೆಗೆ ಬರಲಿದೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರ, ಪೊಲೀಸ್ ಸರಣಿಯ ಮೂರನೇ ಚಿತ್ರವಾಗಿದೆ. ಈ ಚಿತ್ರದಲ್ಲಿ ಅಕ್ಷಯ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ವಿಶೇಷ ಹಾಡಿನ ಮೂಲಕ ಪುನೀತ್​ಗೆ ನಮನ ಸಲ್ಲಿಸಿದ ಯುವತಿ

ಆತ್ಮಹತ್ಯೆ ಮಾಡಿಕೊಳ್ಳುವ ಹುಚ್ಚು ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಅಪ್ಪು ಅಭಿಮಾನಿಗಳನ್ನು ಮತ್ತೊಮ್ಮೆ ಕೋರಿದ ಶಿವಣ್ಣ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ