AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC 14: ಸೈಫ್​ ತಂದೆ, ಮಾಜಿ ಕ್ರಿಕೆಟರ್​ ಮನ್ಸೂರ್​ ಅಲಿ ಖಾನ್​ ಬಗ್ಗೆ ಅಚ್ಚರಿಯ ಮಾಹಿತಿ ತೆರೆದಿಟ್ಟ ಅಮಿತಾಭ್​

Amitabh Bachchan | Mansoor Ali Khan Pataudi: ಭಾರತ ಕ್ರಿಕೆಟ್​ ತಂಡದಲ್ಲಿ ಮನ್ಸೂರ್​ ಅಲಿ ಖಾನ್​ ಸಕ್ರಿಯರಾಗಿದ್ದರು. ಅಪಘಾತವೊಂದರಲ್ಲಿ ಅವರು ಒಂದು ಕಣ್ಣಿನ ದೃಷ್ಟಿಯನ್ನು ಬಹುತೇಕ ಕಳೆದುಕೊಳ್ಳಬೇಕಾಯಿತು.

KBC 14: ಸೈಫ್​ ತಂದೆ, ಮಾಜಿ ಕ್ರಿಕೆಟರ್​ ಮನ್ಸೂರ್​ ಅಲಿ ಖಾನ್​ ಬಗ್ಗೆ ಅಚ್ಚರಿಯ ಮಾಹಿತಿ ತೆರೆದಿಟ್ಟ ಅಮಿತಾಭ್​
ಅಮಿತಾಭ್ ಬಚ್ಚನ್, ಮನ್ಸೂರ್ ಅಲಿ ಖಾನ್
TV9 Web
| Edited By: |

Updated on:Nov 16, 2022 | 11:23 AM

Share

ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಜನಪ್ರಿಯ ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮವನ್ನು ಅವರು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಈಗ ಈ ಶೋನ 14ನೇ ಆವೃತ್ತಿ ನಡೆಯುತ್ತಿದೆ. ‘ಕೌನ್​ ಬನೇಗಾ ಕರೋಡ್​ಪತಿ’ (Kaun Banega Crorepati) ಕಾರ್ಯಕ್ರಮ ಎಂದರೆ ಅಲ್ಲಿ ವಿವಿಧ ಕ್ಷೇತ್ರಕ್ಕೆ ಸಂಬಂಧಿಸಿದ ಮಾಹಿತಿಗಳು ಸಿಗುತ್ತವೆ. ವೀಕ್ಷಕರ ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಅಮಿತಾಭ್​ ಬಚ್ಚನ್​ ಅವರು ಈಗ ಸೈಫ್​ ಅಲಿ ಖಾನ್ ತಂದೆ, ಮಾಜಿ ಕ್ರಿಕೆಟರ್​ ಮನ್ಸೂರ್​ ಅಲಿ ಖಾನ್​ (Mansoor Ali Khan Pataudi) ಬಗ್ಗೆ ಒಂದು ಅಪರೂಪದ ಘಟನೆಯನ್ನು ಮೆಲುಕು ಹಾಕಿದ್ದಾರೆ. ಕಷ್ಟಗಳನ್ನು ಎದುರಿಸಿ ನಿಂತು ಕ್ರಿಕೆಟ್​ ಲೋಕದಲ್ಲಿ ವಿಶೇಷ ಸಾಧನೆ ಮಾಡಿದ ಮನ್ಸೂರ್​ ಅಲಿ ಖಾನ್ ಅವರ ಸ್ಫೂರ್ತಿಯ ಕಥೆಯನ್ನು ವೀಕ್ಷಕರಿಗೆ ಬಿಗ್​ ಬಿ ತಿಳಿಸಿಕೊಟ್ಟಿದ್ದಾರೆ.

ಭಾರತ ಕ್ರಿಕೆಟ್​ ತಂಡದಲ್ಲಿ ಮನ್ಸೂರ್​ ಅಲಿ ಖಾನ್​ ಸಕ್ರಿಯರಾಗಿದ್ದರು. ಆದರೆ ಅಪಘಾತವೊಂದರಲ್ಲಿ ಅವರು ಒಂದು ಕಣ್ಣಿನ ದೃಷ್ಟಿಯನ್ನು ಬಹುತೇಕ ಕಳೆದುಕೊಳ್ಳಬೇಕಾಯಿತು. ಲೋಟಕ್ಕೆ ನೀರು ಹಾಕಿಕೊಳ್ಳುವುದು ಕೂಡ ಅವರಿಗೆ ಕಷ್ಟ ಆಗುತ್ತಿತ್ತು. ಅಂಥ ಸ್ಥಿತಿಯಲ್ಲೂ ಅವರು ಕುಗ್ಗಲಿಲ್ಲ. ಅವರ ಬಗ್ಗೆ ಕೌನ್ ಬನೇಗಾ ಕರೋಡ್​ಪತಿ ವೇದಿಕೆಯಲ್ಲಿ ಅಮಿತಾಭ್​ ಬಚ್ಚನ್​ ಮಾತನಾಡಿದ್ದಾರೆ.

ಇದನ್ನೂ ಓದಿ
Image
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Image
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
Image
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
Image
ಅಮಿತಾಭ್​ ಬಚ್ಚನ್​ ವ್ಯಕ್ತಿತ್ವ ಎಂಥದ್ದು? ಇಂಚಿಂಚು ವಿವರಿಸಿದ ರಶ್ಮಿಕಾ ಮಂದಣ್ಣ

‘ಇಂಥ ಕಷ್ಟದ ಸಮಯದಲ್ಲಿ ತಮ್ಮ ಕ್ರಿಕೆಟ್​ ಜೀವನ ಮುಗಿದುಹೋಯ್ತು ಎಂದುಕೊಂಡರು. ಆದರೆ ಪರಿಸ್ಥಿತಿಗೆ ಸವಾಲು ಹಾಕಿದ ಅವರು ಮತ್ತೆ ಕ್ರಿಕೆಟ್​ ಆಡುವ ಸಾಮರ್ಥ್ಯ ಪಡೆದುಕೊಂಡರು. ಅಪಘಾತ ಸಂಭವಿಸಿ 6 ತಿಂಗಳು ಕಳೆಯುವುದರಲ್ಲಿ ಅವರು ಭಾರತ ಕ್ರಿಕೆಟ್​ ತಂಡದ ಅತಿ ಕಿರಿಯ ಕ್ಯಾಪ್ಟನ್​ ಆಗಿ ಆಯ್ಕೆಯಾದರು. ಅವರ ನಾಯಕತ್ವದಲ್ಲಿ ಭಾರತ ತಂಡ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್​ ಕ್ರಿಕೆಟ್​ನಲ್ಲಿ ಜಯ ಸಾಧಿಸಿತು’ ಎಂದಿದ್ದಾರೆ ಅಮಿತಾಭ್​ ಬಚ್ಚನ್​.

‘ನಿಮ್ಮ ಗುರಿ ನಿಮಗೆ ಸ್ಪಷ್ಟವಾಗಿದ್ದರೆ, ಜಗತ್ತಿನ ಯಾವ ಶಕ್ತಿ ಕೂಡ ನಿಮ್ಮನ್ನು ಅದರಿಂದ ದೂರ ಮಾಡಲು ಸಾಧ್ಯವಿಲ್ಲ ಎಂಬುದನ್ನು ಮನ್ಸೂರ್​ ಅಲಿ ಖಾನ್​ ಅವರು ತೋರಿಸಿಕೊಟ್ಟಿದ್ದಾರೆ’ ಎಂದು ಹೊಗಳುವ ಮೂಲಕ ಬಿಗ್​ ಬಿ ಚಪ್ಪಾಳೆ ತಟ್ಟಿದ್ದಾರೆ. ಈ ಪ್ರೋಮೋವನ್ನು ಸೋನಿ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಅಮಿತಾಭ್​ ಬಚ್ಚನ್​ ಅವರಿಗೆ ಈಗ 80 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಊಂಚಾಯಿ’ ಸಿನಿಮಾ ನವೆಂಬರ್​ 11ರಂದು ಬಿಡುಗಡೆಯಾಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಹಲವು ಸಿನಿಮಾ ಆಫರ್​​ಗಳು ಅವರ ಕೈಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:23 am, Wed, 16 November 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು