‘ಕದ್ದು-ಮುಚ್ಚಿ ಮದುವೆ ಆಗಿಲ್ಲ’; ಆ ಹುಡುಗ ಯಾರು ಎಂಬುದನ್ನು ಹೇಳಿದ ರಜನಿ

ಅಮೃತವರ್ಷಿಣಿ ಧಾರಾವಾಹಿಯ ನಟಿ ರಜನಿ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ. ಅವರನ್ನು ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ತಕ್ಕಮಟ್ಟಿಗೆ ಉತ್ತರಿಸಿರುವ ರಜನಿ, ಅವರು ತಮ್ಮ ವೀಡಿಯೋ ಪಾರ್ಟ್‌ನರ್ ಎಂದು ಹೇಳಿದ್ದಾರೆ. ಮದುವೆಯಾಗಿದ್ದರೆ ಎಲ್ಲರ ಜೊತೆ ಸಂಭ್ರಮಿಸುತ್ತಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

‘ಕದ್ದು-ಮುಚ್ಚಿ ಮದುವೆ ಆಗಿಲ್ಲ’; ಆ ಹುಡುಗ ಯಾರು ಎಂಬುದನ್ನು ಹೇಳಿದ ರಜನಿ
ರಜಿನಿ

Updated on: Aug 26, 2025 | 3:09 PM

ರಜನಿ ಅವರು ‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ (Serials) ನಟಿಸಿ ಫೇಮಸ್ ಆದವರು. ಅವರು ಈ ಧಾರಾವಾಹಿ ಮೂಲಕ ಅಮೃತಾ ಎಂದೇ ಫೇಮಸ್ ಆಗಿದ್ದರು. ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಭರ್ಜರಿ ಆ್ಯಕ್ಟಿವ್ ಆಗಿದ್ದಾರೆ. ವಿವಿಧ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಅವರು ವ್ಯಕ್ತಿಯೊಬ್ಬರ ಜೊತೆ ರೀಲ್ಸ್ ಮಾಡುತ್ತಿದ್ದರು. ಇದು ಅವರ ಬಾಯ್​ಫ್ರೆಂಡ್ ಎಂದು ಕೆಲವರು ಹೇಳಿದ್ದರೆ, ಇನ್ನೂ ಕೆಲವರು ಇಬ್ಬರೂ ಪತಿ-ಪತ್ನಿ ಎಂದೆಲ್ಲ ಸುದ್ದಿ ಹಬ್ಬಿಸಿದ್ದರು. ಇದಕ್ಕೆ ರಜನಿ ಸ್ಪಷ್ಟನೆ ನೀಡಿದ್ದಾರೆ.

ರಜಿನಿ ಅವರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಆ ಬಳಿಕ ‘ಹಿಟ್ಲರ್ ಕಲ್ಯಾಣ್’ ಧಾರಾವಾಹಿಯಲ್ಲೂ ಕಾಣಿಸಿಕೊಂಡರು. ಅವರು ರಿಯಾಲಿಟಿ ಶೋಗಳಲ್ಲೂ ಕಾಣಿಸಿದರು. ಕೆಲವು ಶೋಗಳನ್ನು  ಅವರು ಹೋಸ್ಟ್ ಮಾಡಿದರು. ಈಗ ಅವರ ಬಗ್ಗೆ ಹಬ್ಬಿದ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
2015ರ ಹಾಡಿನ ಟ್ಯೂನ್ ಹೋಲುತ್ತಿದೆ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್
‘ಸು ಫ್ರಮ್ ಸೋ’ OTT ರಿಲೀಸ್ ದಿನಾಂಕ ರಿವೀಲ್ ಆದರೂ ನಿಂತಿಲ್ಲ ಕಲೆಕ್ಷನ್
VIDEO: ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ

ರಜನಿ ಅವರು ಅರುಣ್ ವೆಂಕಟೇಶ್ ಹೆಸರಿನ ಜಿಮ್ ಟ್ರೇನರ್ ಜೊತೆ ವಿಡಿಯೋ ಮಾಡುತ್ತಿದ್ದರು. ಇಬ್ಬರೂ ಮದುವೆ ಆಗಿದ್ದಾರೆ ಎನ್ನಲಾಗಿತ್ತು. ಇದಕ್ಕೆ ರಜನಿ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಫಸ್ಟ್​ ಡೇ ಫಸ್ಟ್ ಶೋಗೆ ನೀಡಿದ ಸಂದರ್ಶನದಲ್ಲಿ ರಜನಿ ಮಾತನಾಡಿದ್ದಾರೆ.

‘ನಿಮ್ಮನ್ನು ಕರೆಯದೇ ಮದುವೆ ಆಗುತ್ತೇನಾ? ಕದ್ದು ಮುಚ್ಚಿ ಮದುವೆ ಮಾಡಿಕೊಳ್ಳುವ ಅವಶ್ಯಕತೆ ಏನಿದೆ? ಮದುವೆ ಖುಷಿ ವಿಚಾರ. ಎಲ್ಲರ ಜೊತೆ ಹಂಚಿಕೊಂಡು ಖುಷಿಪಡಬೇಕು. ಮದುವೆ ಆಗಿಲ್ಲ ಅಂದಮೇಲೆ ಎಲ್ಲಿಂದ ಕರೆಯೋದು. ಗಾಸಿಪ್ ಅನ್ನೋದು ಬೆನ್ನಿಗೆ ಅಂಟಿರೋ ಭೂತ’ ಎಂದು ರಜನಿ ಹೇಳಿದ್ದಾರೆ.

ಇದನ್ನೂ ಓದಿ: ಸಂಜನಾ ಬುರ್ಲಿ ಹೊಸ ಧಾರಾವಾಹಿಯ ಪ್ರೋಮೋದಲ್ಲೇ ದೊಡ್ಡ ಟ್ವಿಸ್ಟ್

‘ನಾವು ಗಂಡ-ಹೆಂಡತಿ ಅಲ್ಲ. ವಿಡಿಯೋ ಪಾರ್ಟ್ನರ್ ಅಷ್ಟೇ. ಗೆಳೆಯರನ್ನೇ ಮದುವೆ ಆದರೂ ತಪ್ಪೇನಿಲ್ಲ. ಸ್ನೇಹಿತರೇ ಜಾಸ್ತಿ ಅರ್ಥ ಮಾಡಿಕೊಂಡಿರುತ್ತಾರೆ. ಫ್ರೆಂಡ್ಸ್ ಹಲವು ವರ್ಷಗಳಿಂದ ಜೊತೆಯಲ್ಲೇ ಇರುತ್ತಾರೆ. ಅವರಿಗೆ ಕಷ್ಟ-ಸುಖ ಗೊತ್ತಿರುತ್ತದೆ. ಬೇರೆಯವರನ್ನು ಮದುವೆ ಆದರೂ ತಪ್ಪಿಲ್ಲ’ ಎಂದು ಅಡ್ಡ ಗೋಡೆ ಮೇಲೆ ದೀಪ ಇಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us