AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜಿನಿಗೆ ಪ್ರೀತಿಯಿಂದ ಮಮ್ಮಿ ಅಂತಾರೆ ಪತಿ ಅರುಣ್; ಕೇಳಿದವರು ಶಾಕ್

ಅಮೃತವರ್ಷಿಣಿ ಖ್ಯಾತಿಯ ನಟಿ ರಜಿನಿ ಮತ್ತು ಅವರ ಪತಿ ಅರುಣ್ ಅವರ ವಿಶಿಷ್ಟ ಪ್ರೇಮಕಥೆ ಈಗ ವೈರಲ್ ಆಗಿದೆ. ಅರುಣ್ ಅವರು ರಜಿನಿಯನ್ನು 'ಮಮ್ಮಿ' ಎಂದು ಕರೆಯುವುದು ಹಲವರನ್ನು ಅಚ್ಚರಿಗೊಳಿಸಿದೆ. ಜಿಮ್‌ನಲ್ಲಿ ಆರಂಭವಾದ ಇವರ ಪರಿಚಯ ಪ್ರೀತಿಯಾಗಿ, ನವೆಂಬರ್ 10ರಂದು ಮದುವೆ ಆಗಿದ್ದಾರೆ.

ರಜಿನಿಗೆ ಪ್ರೀತಿಯಿಂದ ಮಮ್ಮಿ ಅಂತಾರೆ ಪತಿ ಅರುಣ್; ಕೇಳಿದವರು ಶಾಕ್
ರಜಿನಿ
ರಾಜೇಶ್ ದುಗ್ಗುಮನೆ
|

Updated on:Nov 11, 2025 | 11:19 AM

Share

ಸಾಮಾನ್ಯವಾಗಿ ಪ್ರೀತಿಯಲ್ಲಿ ಇದ್ದಾಗ ಚಿನ್ನು, ಮುದ್ದು, ಬಂಗಾರ, ಡಾರ್ಲಿಂಗ್ ಎಂದು ಕರೆದುಕೊಳ್ಳೋದು ಸಾಮಾನ್ಯ. ಆದರೆ, ಪತ್ನಿಯನ್ನು ಅಥವಾ ಪ್ರೇಯಸಿಯನ್ನು ಮಮ್ಮಿ ಎಂದು ಕರೆಯೋದು ಎಲ್ಲಾದರೂ ಕೇಳಿದ್ದೀರಾ? ‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದ ರಜಿನಿಗೆ ಅವರ ಪತಿ ಅರುಣ್ ಮಮ್ಮಿ ಅಂತಲೇ ಕರೆಯೋದು. ಈ ಬಗ್ಗೆ ಸಂದರ್ಶನ ಒಂದರಲ್ಲಿ ಇವರು ವಿವರಿಸಿದ್ದರು.

ಅರುಣ್ ಹಾಗೂ ರಜಿನಿ ನವೆಂಬರ್ 10ರಂದು ವಿವಾಹ ಆಗಿದ್ದಾರೆ. ಇವರ ಮದುವೆ ಅದ್ದೂರಿಯಾಗಿ ನಡೆದಿದೆ. ಆಪ್ತರು ಹಾಗೂ ಕುಟುಂಬದವರು ಈ ಮದುವೆಯಲ್ಲಿ ಭಾಗವಹಿಸಿದ್ದರು. ಈ ವಿವಾಹದ ಬಳಿಕ ಅವರ ಮದುವೆಯ ಫೋಟೋಗಳು ವೈರಲ್ ಆಗಿವೆ. ಅದೇ ರೀತಿ ಅರುಣ್ ಹಾಗೂ ರಜಿನಿ ಹಳೆಯ ಸಂದರ್ಶನ ಕೂಡ ಗಮನ ಸೆಳೆದಿದೆ. ಇದರಲ್ಲಿ ಒಂದು ಅಚ್ಚರಿಯ ಮಾಹಿತಿ ರಿವೀಲ್ ಆಗಿದೆ.

View this post on Instagram

A post shared by NewsO NewsU (@newsonewsu)

‘ನ್ಯೂಸೋ ನ್ಯೂಸು’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ, ಅರುಣ್ ಹಾಗೂ ಅಮೃತಾ, ‘ಅವನು ಹೊರಗೂ ನನ್ನ ಮಮ್ಮಿ ಎಂದೇ ಕರೆಯೋದು. ಜ್ಯೂಸ್ ಅಂಗಡಿಯಲ್ಲಿ ಜ್ಯೂಸ್ ಕುಡಿತಾ ಇದ್ವಿ. ಆಗ ಮಮ್ಮಿ ಎಂದು ಕರೆದ. ಅಲ್ಲಿದ್ದವರು ನನ್ನ ನೋಡೋಕೆ ಆರಂಭಿಸಿದರು. ನಿಜವಾಗಲೂ ನೀವು ಅಮ್ಮ-ಮಗನ ಎಂದು ಕೇಳ್ತಾರೆ’ ಎಂದಿದ್ದರು ಅಮೃತಾ.

ಇದನ್ನೂ ಓದಿ: ‘ಅಮೃತವರ್ಷಿಣಿ’ ರಜಿನಿ ವಿವಾಹ; ಇಲ್ಲಿದೆ ಸುಂದರ ಫೋಟೋಗಳು

ಅರುಣ್ ಅವರು ಈಗ ಜಿಮ್ ಟ್ರೇನರ್. ಇವರ ಭೇಟಿ ಆಗಿದ್ದು ಜಿಮ್​ ಅಲ್ಲಿಯೇ. ಮಲ್ಲೇಶ್ವರದ ಜಿಮ್ ಒಂದರಲ್ಲಿ ಅರುಣ್ ವರ್ಕೌಟ್ ಮಾಡುತ್ತಿದ್ದರಂತೆ. ಇದೇ ಜಿಮ್​ಗೆ ಅಮೃತಾ ಸೇರಿಕೊಂಡರು. ಆಗ ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಈಗ ಇವರು ಮದುವೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:08 am, Tue, 11 November 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ