AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಮಹಾ ತಿರುವು; ಗೌತಮ್ ಹಾಗೂ ಭೂಮಿಕಾ ದಂಪತಿಗೆ ತಿಳಿಯಿತು ಮಿಂಚು ಸತ್ಯ

ಅಮೃತಧಾರೆ ಧಾರಾವಾಹಿಯಲ್ಲಿ ದೊಡ್ಡ ತಿರುವು! ಗೌತಮ್-ಭೂಮಿಕಾ ದಂಪತಿಯ ಕಳೆದುಹೋದ ಮಗಳು 'ಮಿಂಚು' ಎಂಬುದು DNA ಪರೀಕ್ಷೆಯಿಂದ ಬಹಿರಂಗವಾಗಿದೆ. ಕರ್ಣನ ಸಹಾಯದಿಂದ ಈ ಸತ್ಯ ಗೊತ್ತಾಗುತ್ತದೆ. ತಮ್ಮ ಮಗುವಿನ ಕೈ ಮೇಲಿದ್ದ ತ್ರಿಶೂಲದ ಮಚ್ಚೆ ಗುರುತಿಸಿ, ಕಳೆದುಹೋದ ಮಗಳು 'ಮಿಂಚು' ಎಂಬುದು ಖಚಿತವಾಗುತ್ತದೆ. ಜೆಡಿ ಸಂಚುಗಳಿಗೆ ಈಗ ಕೊನೆ! ಪ್ರೇಕ್ಷಕರಿಗೆ ರೋಮಾಂಚಕ ಕ್ಷಣಗಳು ಕಾಯುತ್ತಿವೆ.

‘ಅಮೃತಧಾರೆ’ ಮಹಾ ತಿರುವು; ಗೌತಮ್ ಹಾಗೂ ಭೂಮಿಕಾ ದಂಪತಿಗೆ ತಿಳಿಯಿತು ಮಿಂಚು ಸತ್ಯ
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 16, 2026 | 7:52 AM

Share

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ ಈಗ ಅತ್ಯಂತ ರೋಚಕ ಹಂತ ತಲುಪಿದೆ. ಗೌತಮ್ ಹಾಗೂ ಭೂಮಿಕಾ ದಂಪತಿಯಿಂದ ಹಲವು ಸಮಯದ ಹಿಂದೆ ದೂರವಾಗಿದ್ದ ಮಗಳು ಕೊನೆಗೂ ಸಿಕ್ಕಿರುವ ಸತ್ಯ ಈಗ ಪ್ರೋಮೋ ಮೂಲಕ ರಿವೀಲ್ ಆಗಿದೆ. ಇದು ವೀಕ್ಷಕರಲ್ಲಿ ಖುಷಿ ಮೂಡಿಸಿದೆ.

ಭೂಮಿಕಾಗೆ ಅವಳಿ ಮಕ್ಕಳು ಜನಿಸಿದ್ದವು. ಆದರೆ ಕ್ರೂರ ಜೆಡಿ ಸಂಚು ನಡೆಸಿ ಒಂದು ಮಗುವನ್ನು ಕಿಡ್ನ್ಯಾಪ್ ಮಾಡಿದ್ದ. ಇದಾದ ಹಲವು ಸಮಯದ ಬಳಿಕ ಗೌತಮ್‌ಗೆ ‘ಮಿಂಚು’ ಎಂಬ ಮುದ್ದಾದ ಹುಡುಗಿ ಸಿಕ್ಕಿದ್ದಳು. ಆಕೆ ಅನಾಥೆ ಎಂದು ಭಾವಿಸಿ ಗೌತಮ್ ದತ್ತು ಪಡೆದು ಪ್ರೀತಿಯಿಂದ ಸಾಕಿದ್ದ. ಆದರೆ, ಈಗ ಆ ಮಿಂಚು ಬೇರೆ ಯಾರೂ ಅಲ್ಲ, ಗೌತಮ್ ಮತ್ತು ಭೂಮಿಕಾ ಅವರ ಸ್ವಂತ ಮಗಳು ಎಂಬ ಮಹತ್ವದ ಸತ್ಯ ಬಯಲಾಗಿದೆ.

ಈ ಮಹಾ ಸತ್ಯವನ್ನು ಗೌತಮ್ ಕುಟುಂಬದ ಮುಂದೆ ತಂದು ನಿಲ್ಲಿಸುವುದು ಜೀ ಕನ್ನಡದ ಮತ್ತೊಂದು ಹೊಸ ಧಾರಾವಾಹಿ ‘ಕರ್ಣ’ ನಾಯಕ ಕರ್ಣ. ‘ಅಮೃತಧಾರೆ’ಯ ಸಂಚಿಕೆಯಲ್ಲಿ ಇದು ಪ್ರಸಾರ ಆಗಲಿದೆ. ಕರ್ಣ ಮೆಡಿಕಲ್ ರಿಪೋರ್ಟ್‌ಗಳನ್ನು ಹಿಡಿದು ಗೌತಮ್ ಮನೆಗೆ ಎಂಟ್ರಿ ಕೊಡುತ್ತಾನೆ. ‘ಯಾರೋ ಈ ರಿಪೋರ್ಟ್ ಅನ್ನು ಸ್ವಾಪ್ (ಅದಲು-ಬದಲು) ಮಾಡಿರೋ ತರ ಇದೆ’ ಎಂದು ಅನುಮಾನ ವ್ಯಕ್ತಪಡಿಸುವ ಕರ್ಣ, ಬಳಿಕ ಡಿಎನ್‌ಎ ರಿಪೋರ್ಟ್‌ಗಳನ್ನು ಮ್ಯಾಚ್ ಮಾಡಿ ತೋರಿಸುತ್ತಾನೆ.

‘ನನಗೆ ಮೊದಲೇ ಆ ಮಗು ನಿಮ್ಮ ಮಗುವೇ ಆಗಿರಬಹುದು ಅನ್ನೋ ಡೌಟ್ ಇತ್ತು. ಈಗ ರಿಪೋರ್ಟ್‌ಗಳು ಮ್ಯಾಚ್ ಆಗ್ತಿವೆ. ಆ ಮಿಂಚು ಬೇರೆ ಯಾರೂ ಅಲ್ಲ, ನಿಮ್ಮದೇ ಮಗಳು’ ಎಂದು ಕರ್ಣ ಅಧಿಕೃತವಾಗಿ ಸಾರುತ್ತಾನೆ.

View this post on Instagram

A post shared by Zee Kannada (@zeekannada)

ಮಗುವಿನ ಕೈ ಮೇಲಿನ ಆ ಗುರುತು

ಸತ್ಯ ಕೇಳಿ ಇಡೀ ಕುಟುಂಬ ಆಶ್ಚರ್ಯಚಕಿತರಾದಾಗ, ಕರ್ಣ ಮತ್ತೊಂದು ಮುಖ್ಯವಾದ ಸುಳಿವು ನೀಡುತ್ತಾನೆ. ‘ಆ ಮಗುವಿನ ಕೈ ಮೇಲೇನಾದರೂ ಮಚ್ಚೆ ಇತ್ತಾ?” ಎಂದು ಪ್ರಶ್ನಿಸುತ್ತಾನೆ. ತಕ್ಷಣವೇ ಭೂಮಿಕಾ ಹಾಗೂ ಗೌತಮ್‌ಗೆ ತಮ್ಮ ಮಗುವಿನ ಕೈ ಮೇಲಿದ್ದ ತ್ರಿಶೂಲದ ಆಕಾರದ ಮಚ್ಚೆ ನೆನಪಿಗೆ ಬರುತ್ತದೆ. ಇದರಿಂದಾಗಿ ಮಿಂಚು ತಾವೇ ಕಳೆದುಕೊಂಡ ಮಗಳು ಎಂಬುದು ನೂರಕ್ಕೆ ನೂರರಷ್ಟು ಖಚಿತವಾಗುತ್ತದೆ. ಇತ್ತ ಮಗುವಿನ ಸತ್ಯ ಬಯಲಾಗುತ್ತಿದ್ದಂತೆ ಸದಾ ಸಂಚು ರೂಪಿಸುತ್ತಿದ್ದ ಜೆಡಿಗೆ ತಕ್ಕ ಶಾಸ್ತಿ ಕಾದಂತಿದೆ.

ಇದನ್ನೂ ಓದಿ: ಅಮೃತಧಾರೆ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ

ಇಷ್ಟು ದಿನ ತನ್ನದೇ ಮಗಳನ್ನು ದತ್ತು ಪುತ್ರಿ ಎಂದು ಸಾಕುತಿದ್ದ ಗೌತಮ್‌ಗೆ ಈಗ ಅವಳೇ ತನ್ನ ಕಂದ ಎಂಬ ಸತ್ಯ ತಿಳಿದಾಗ ಆಗುವ ಭಾವುಕ ಕ್ಷಣಗಳನ್ನು ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ