AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಕಿರುತೆರೆಯ ಜನಪ್ರಿಯ ನಟಿಯರಾದ ಅಮೃತಾ ರಾಮಮೂರ್ತಿ ಮತ್ತು ಅಮೂಲ್ಯ ಗೌಡ ಇದೀಗ ಒಂದೇ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ 'ಮಹಾಲಕ್ಷ್ಮೀ ಮದುವೆ' ಧಾರಾವಾಹಿಯಲ್ಲಿ ಈ ಇಬ್ಬರು ಪ್ರತಿಭಾನ್ವಿತ ನಟಿಯರು ಜೊತೆಯಾಗಿ ನಟಿಸಲಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಅತೀವ ಸಂತಸ ಮೂಡಿಸಿದೆ.

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ
ಅಮೂಲ್ಯ-ಅಮೃತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 25, 2026 | 8:06 AM

Share

ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್​ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್​​ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ.

ಅಮೂಲ್ಯ ಗೌಡ ಕನ್ನಡ ಕಿರುತೆರೆ ಲೋಕದಲ್ಲಿ ಸಕ್ರಿಯ ಆಗಿರೋ ಉದಯೋನ್ಮುಖ ನಟಿಯರಲ್ಲಿ ಒಬ್ಬರು. ಅಮೃತಾ ಕೂಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಉದಯದಲ್ಲಿ ಪ್ರಸಾರ ಆಗಲಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಶೀಘ್ರವೇ ಧಾರಾವಾಹಿ ಬಗ್ಗೆ ಮತ್ತಷ್ಟು ಅಪ್ಡೇಟ್ ಸಿಗಲಿದೆ.

ಅಮೂಲ್ಯ ಗೌಡ ಅವರು ಕಿರುತೆರೆ ಲೋಕಕ್ಕೆ ಬಂದು 12 ವರ್ಷಗಳೇ ಕಳೆದಿವೆ! ಅಮೂಲ್ಯ ಗೌಡ ಅವರು ಮೊದಲು ನಟಿಸಿದ್ದು ಸ್ವಾತಿ ಮುತ್ತು ಧಾರಾವಾಹಿಯಲ್ಲಿ. ‘ಸ್ಟಾರ್ ಸುವರ್ಣದಲ್ಲಿ’ ಧಾರಾವಾಹಿ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ಪಾರು ಹೆಸರಿನ ಪಾತ್ರ ಮಾಡಿದರು. ಅವರಿಗೆ ಭರ್ಜರಿ ಜನಪ್ರಿಯತೆ ತಂದುಕೊಟ್ಟ ಸೀರಿಯಲ್ ಎಂದರೆ ‘ಕಮಲಿ’. ಈ ಸೀರಿಯಲ್ 2018ರಿಂದ 2022ರವರೆಗೆ ಪ್ರಸಾರ ಆಯಿತು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅಮೂಲ್ಯ ಮಿಂಚಿದರು.

ಇದನ್ನೂ ಓದಿ: ಅರ್ಧಕ್ಕೆ ಧಾರಾವಾಹಿ ತೊರೆದ ಅಮೃತಾ ರಾಮಮೂರ್ತಿ

ಇನ್ನು, ಅಮೃತಾ ಅವರು ‘ಕುಲವಧು’, ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ ಮೊದಲಾದ ಸೀರಿಯಲ್​​​ನಲ್ಲಿ ನಟಿಸಿದರು. ಕೆಲ ಸಮಯ ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಹೆಸರಿನ ಪಾತ್ರ ಮಾಡಿದರು. ಇದು ನೆಗೆಟಿವ್ ಶೇಡ್ ಹೊಂದಿದ್ದ ಪಾತ್ರ ಆಗಿತ್ತು. ಅವರ ವೃತ್ತಿ ಜೀವನಕ್ಕೆ ಈ ಧಾರಾವಾಹಿ ಸಾಕಷ್ಟು ಮೈಲೇಜ್ ನೀಡಿತು ಎಂದರೂ ತಪ್ಪಾಗಲಾರದು. ಈಗ ಅವರು ಉದಯ ಟಿವಿ ಮೂಲಕ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ