AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ತಂಟೆಗೆ ಬಂದ ಎಂಎಲ್​ಎಗೆ ಪವನ್ ಕಲ್ಯಾಣ್ ಸ್ಟೈಲ್​ನಲ್ಲಿ ಪಾಠ ಕಲಿಸಿದ ಗೌತಮ್ ದೀವಾನ್

'ಅಮೃತಧಾರೆ' ಧಾರಾವಾಹಿಯಲ್ಲಿ ಗೌತಮ್ ದೀವಾನ್ ಐದು ವರ್ಷಗಳ ನಂತರ ಮರಳಿ ಭೂಮಿಕಾಳನ್ನು ಹುಡುಕಿದ್ದಾನೆ. ಎಂಎಲ್ಎಯಿಂದ ಭೂಮಿಕಾಳಿಗೆ ತೊಂದರೆಯಾದಾಗ, ಗೌತಮ್ ಪವನ್ ಕಲ್ಯಾಣ್ ಶೈಲಿಯಲ್ಲಿ ಆತನಿಗೆ ಪಾಠ ಕಲಿಸಿದ್ದಾನೆ. ತನ್ನ ಪ್ರಭಾವ ಬಳಸಿಕೊಂಡು ಎಂಎಲ್ಎ ಹುದ್ದೆ ಕಳೆದುಕೊಳ್ಳುವಂತೆ ಮಾಡಿದ್ದಾನೆ. ಆ ಬಗ್ಗೆ ಇಲ್ಲಿದೆ ವಿವರ.

ಪತ್ನಿಯ ತಂಟೆಗೆ ಬಂದ ಎಂಎಲ್​ಎಗೆ ಪವನ್ ಕಲ್ಯಾಣ್ ಸ್ಟೈಲ್​ನಲ್ಲಿ ಪಾಠ ಕಲಿಸಿದ ಗೌತಮ್ ದೀವಾನ್
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 03, 2025 | 8:41 AM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ದೀವಾನ್ ಮರಳಿ ಫಾರ್ಮ್​ಗೆ ಮರಳಿದ್ದಾನೆ ಎನ್ನಬಹುದು. ಕಳೆದ ಐದು ವರ್ಷಗಳಿಂದ ತಲೆಮರಿಸಿಕೊಂಡು ಬಂದಿದ್ದ ಈತ ಈಗ ಭೂಮಿಕಾಳನ್ನು ಹುಡುಕಿದ್ದಾನೆ. ಆದರೆ, ಭೂಮಿಕಾ ಇವಳನ್ನು ಒಪ್ಪಿಕೊಳ್ಳಲು ರೆಡಿ ಇಲ್ಲ. ಹೀಗಿರುವಾಗಲೇ ಎಂಎಲ್​ಎ ಒಬ್ಬವನು ಭೂಮಿಕಾ ಜೊತೆ ಕಿರಿಕ್ ಮಾಡಿಕೊಂಡಿದ್ದ. ಇದಕ್ಕೆ ಗೌತಮ್ ದೀವನ್, ಪವನ್ ಕಲ್ಯಾಣ್ ಸ್ಟೈಲ್​ನಲ್ಲಿ ಉತ್ತರಿಸಿದ್ದಾನೆ.

ಪವನ್ ಕಲ್ಯಾಣ್ ಅವರು ‘ಅತ್ತಾರೆಂಟಿಕಿ ದಾರೀದಿ’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಪವನ್ ಕಲ್ಯಾಣ್ ಶ್ರೀಮಂತನಾದರೂ ಕ್ಯಾಬ್ ಡ್ರೈವರ್ ಪಾತ್ರದಲ್ಲಿಯೇ ಕಾಣಿಸಿಕೊಂಡಿದ್ದರು. ಅವರ ಅತ್ತೆಗೆ ತೊಂದರೆ ಮಾಡುವ ವ್ಯಕ್ತಿಗೆ ಕ್ಯಾಬ್ ಡ್ರೈವರ್ ಆಗಿ ಬಂದು ಪವನ್ ಕಲ್ಯಾಣ್ ಪಾಠ ಕಲಿಸುತ್ತಾರೆ. ತಾವು ಎಂತಹ ಪ್ರಭಾವಿ ಎಂಬುದನ್ನು ದೂರುವಾಣಿ ಕರೆ ಮೂಲಕವೇ ತೋರಿಸುತ್ತಾರೆ.

ಇದನ್ನೂ ಓದಿ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಇದೇ ರೀತಿಯ ದೃಶ್ಯ ಬಂದಿದೆ ಎಂದರೂ ತಪ್ಪಾಗಲಾರದರು. ಭೂಮಿಕಾಳಿಗೆ ತೊಂದರೆ ಕೊಡಲು ಬಂದ ಎಂಎಲ್​ಎಗೆ ಗೌತಮ್ ದೀವಾನ್ ಬಂದು ಪಾಠ ಕಲಿಸುತ್ತಾನೆ. ಕಮಿಷನರ್​ಗೆ ಕರೆ ಮಾಡುವಂತೆ ಎಂಎಲ್​ಎ ಗೌತಮ್​​ಗೆ ಹೇಳುತ್ತಾನೆ. ಅವರು ಗೌತಮ್ ಪರ ಮಾತನಾಡುತ್ತಾರೆ. ಆ ಬಳಿಕ ಹೈ ಕಮಿಷನರ್​ಗೆ ಕರೆ ಮಾಡುತ್ತಾನೆ. ಅಲ್ಲಿಯೂ ಹಾಗೆಯೇ ಆಗುತ್ತದೆ. ನಂತರ ಬೇರೆ ದಾರಿ ಇಲ್ಲದೆ, ಹೈ ಕಮಾಂಡ್​ಗೆ ಕರೆ ಹೋಗುತ್ತದೆ. ಎಲ್ಲ ಕಡೆಗಳಲ್ಲೂ ಎಂಎಲ್​ಎಗೆ ಹಿನ್ನಡೆ ಆಗುತ್ತದೆ.

View this post on Instagram

A post shared by Zee Kannada (@zeekannada)

ಕರೆ ಮಾಡಿದವರೆಲ್ಲರೂ ‘ಗೌತಮ್ ಸರ್’ ಎಂದು ಮಾತನಾಡಿಸುತ್ತಾರೆ. ಇದನ್ನು ನೋಡಿ ಎಂಎಲ್​ಎ ಶಾಕ್ ಆಗುತ್ತಾನೆ. ಆ ಬಳಿಕ ಎಂಎಲ್​ಎಯನ್ನು ಹುದ್ದೆಯಿಂದಲೇ ತೆಗೆದು ಹಾಕುವ ನಿರ್ಧಾರವನ್ನು ಹೈಕಮಾಂಡ್ ಮಾಡುತ್ತಾನೆ. ಸಿನಿಮೀಯ ಶೈಲಿಯಲ್ಲಿ ಧಾರಾವಾಹಿ ಮೂಡಿ ಬಂದಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ವಿರೋಧದ ನಡುವೆಯೂ ‘ಕಾಂತಾರ’ ಪರ ನಿಂತ ಪವನ್ ಕಲ್ಯಾಣ್: ಹೇಳಿದ್ದೇನು?

ಸದ್ಯ ಭೂಮಿಕಾ ಕುಶಾಲನಗರವನ್ನೇ ಬಿಟ್ಟು ಹೋಗಿದ್ದಾಳೆ. ಈಗ ಆಕೆ ಎಲ್ಲಿ ಹೋಗಿದ್ದಾಳೆ ಎಂಬ ಗೊಂದಲದಲ್ಲಿ ಗೌತಮ್ ಇದ್ದಾನೆ. ಇವರು ಮತ್ತೆ ಮುಖಾಮುಖಿ ಆಗೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ. ಇವರು ಆದಷ್ಟು ಬೇಗ ಒಂದಾಗಬೇಕು ಎಂಬುದು ಅಭಿಮಾನಿಗಳ ಕೋರಿಕೆಯಾಗಿದೆ. ಆಕೆ ಮರಳಿ ಬೆಂಗಳೂರಿಗೆ ಬಂದಿದ್ದಾಳೆ. ಹೀಗಾಗಿ, ಮುಂದಿನ ದಿನಗಳಲ್ಲಿ ಬೆಂಗಳೂರಲ್ಲೇ ಕಥೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:39 am, Fri, 3 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್