AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 7 ಗಂಟೆಗೆ ಹೊಸ ಧಾರಾವಾಹಿ ‘ಅಮೃತಧಾರೆ’ ಪ್ರಸಾರ; ‘ಹಿಟ್ಲರ್ ಕಲ್ಯಾಣ’ದ ಕಥೆ ಏನು?

‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸದ್ಯ ರಾತ್ರಿ 7 ಗಂಟೆಗೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಹೊಂದಿದೆ. ಆದರೆ, ಆ ಸಮಯಕ್ಕೆ ‘ಅಮೃತಧಾರೆ’ ಬರುತ್ತಿದೆ.

ರಾತ್ರಿ 7 ಗಂಟೆಗೆ ಹೊಸ ಧಾರಾವಾಹಿ ‘ಅಮೃತಧಾರೆ’ ಪ್ರಸಾರ; ‘ಹಿಟ್ಲರ್ ಕಲ್ಯಾಣ’ದ ಕಥೆ ಏನು?
ಅಮೃತಧಾರೆ-ಹಿಟ್ಲರ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:May 23, 2023 | 8:09 AM

Share

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ (Chaya Singh) ನಟನೆಯ ‘ಅಮೃತಧಾರೆ’ ಧಾರಾವಾಹಿ ಮೇ 29ರಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಲಿದೆ. ಈ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರದ ಸಮಯದ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿರಲಿಲ್ಲ. ಈಗ ಈ ವಿಚಾರ ರಿವೀಲ್ ಆಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ‘ಅಮೃತಧಾರೆ’ ಧಾರಾವಾಹಿ (Amruthadhare Serial ) ರಾತ್ರಿ 7 ಗಂಟೆಗೆ ಪ್ರಸಾರ ಕಾಣಲಿದೆ. ಈ ಸಂದರ್ಭದಲ್ಲಿ ಪ್ರಸಾರ ಕಾಣುತ್ತಿದ್ದ ‘ಹಿಟ್ಲರ್ ಕಲ್ಯಾಣ’ದ ಕಥೆ ಏನು ಎಂಬ ಪ್ರಶ್ನೆ ಮೂಡಿದೆ.

ಸಿನಿಮಾ ರಂಗದಲ್ಲಿ ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಗುರುತಿಸಿಕೊಂಡಿದ್ದಾರೆ. ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ. ಈಗ ‘ಅಮೃತಧಾರೆ’ ಧಾರಾವಾಹಿಯ ಪ್ರಸಾರ ಸಮಯ ಕೂಡ ಘೋಷಣೆ ಆಗಿದೆ.

‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸದ್ಯ ರಾತ್ರಿ 7 ಗಂಟೆಗೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಹೊಂದಿದೆ. ಆದರೆ, ಈಗ ಹೊಸ ಧಾರಾವಾಹಿಯ ಆಗಮನದಿಂದ ‘ಹಿಟ್ಲರ್​ ಕಲ್ಯಾಣ’ವನ್ನು ರಾತ್ರಿ 10 ಗಂಟೆಗೆ ಪ್ರಸಾರ ಮಾಡಲಾಗುತ್ತದೆ ಎನ್ನಲಾಗಿದೆ. ಸದ್ಯ ಜೀ ಕನ್ನಡದಲ್ಲಿ ರಾತ್ರಿ 10 ಗಂಟೆಗೆ ‘ಸೌಭಾಗ್ಯವತಿ ಭವ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಇದಕ್ಕೆ ಯಾವ ಸ್ಲಾಟ್ ಕೊಡುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

‘ಒಂಟಿ ಜೀವಗಳೆರೆಡು ಒಂದಾದ್ರೆ ಒಲವ ‘ಅಮೃತಧಾರೆ’. ಬರ್ತಿದೆ ಒಂದು ಹೊಸ ಕಥೆ ಅಮೃತಧಾರೆ. ಮೇ 29 ಸೋಮವಾರದಿಂದ ಸಂಜೆ 7ಕ್ಕೆ’ ಎಂದು ಹೊಸ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ. ಈ ಧಾರಾವಾಹಿಯಲ್ಲಿ ಸಿಹಿಕಹಿ ಚಂದ್ರು ಮೊದಲಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?

ರಾಜೇಶ್ ನಟರಂಗ ಅವರು ಉದ್ಯಮಿ ಆಗಿ ಕಾಣಿಸಿಕೊಂಡರೆ, ಛಾಯಾ ಸಿಂಗ್ ಮಧ್ಯಮ ವರ್ಗದ ಹುಡುಗಿ ಆಗಿ ಕಾಣಿಸಿಕೊಂಡಿದ್ದಾರೆ. ‘ಬಡೇ ಅಚ್ಚೆ ಲಗ್ತೇ ಹೈ’ ಹೆಸರಿನ ಹಿಂದಿ ಧಾರಾವಾಹಿಯ ರಿಮೇಕ್ ಇದಾಗಿದೆ. ‘ಅಮೃತಧಾರೆ’ ಪ್ರೋಮೋ ನೋಡಿದವರಿಗೆ ‘ಜೊತೆ ಜೊತೆಯಲಿ’ ಧಾರಾವಾಹಿ ನೆನಪಾಗಿದೆ. ವಯಸ್ಸಿನ ಅಂತರ ಹೆಚ್ಚಿರುವ ಹುಡುಗ-ಹುಡುಗಿಯ ಪ್ರೇಮ್ ಕಹಾನಿ ಈ ಧಾರಾವಾಹಿಯಲ್ಲಿತ್ತು. ‘ಅಮೃತಧಾರೆ’ ಕೂಡ ಇದೇ ರೀತಿ ಇರಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Tue, 23 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!