AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 7 ಗಂಟೆಗೆ ಹೊಸ ಧಾರಾವಾಹಿ ‘ಅಮೃತಧಾರೆ’ ಪ್ರಸಾರ; ‘ಹಿಟ್ಲರ್ ಕಲ್ಯಾಣ’ದ ಕಥೆ ಏನು?

‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸದ್ಯ ರಾತ್ರಿ 7 ಗಂಟೆಗೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಹೊಂದಿದೆ. ಆದರೆ, ಆ ಸಮಯಕ್ಕೆ ‘ಅಮೃತಧಾರೆ’ ಬರುತ್ತಿದೆ.

ರಾತ್ರಿ 7 ಗಂಟೆಗೆ ಹೊಸ ಧಾರಾವಾಹಿ ‘ಅಮೃತಧಾರೆ’ ಪ್ರಸಾರ; ‘ಹಿಟ್ಲರ್ ಕಲ್ಯಾಣ’ದ ಕಥೆ ಏನು?
ಅಮೃತಧಾರೆ-ಹಿಟ್ಲರ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:May 23, 2023 | 8:09 AM

Share

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ (Chaya Singh) ನಟನೆಯ ‘ಅಮೃತಧಾರೆ’ ಧಾರಾವಾಹಿ ಮೇ 29ರಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಲಿದೆ. ಈ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರದ ಸಮಯದ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿರಲಿಲ್ಲ. ಈಗ ಈ ವಿಚಾರ ರಿವೀಲ್ ಆಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ‘ಅಮೃತಧಾರೆ’ ಧಾರಾವಾಹಿ (Amruthadhare Serial ) ರಾತ್ರಿ 7 ಗಂಟೆಗೆ ಪ್ರಸಾರ ಕಾಣಲಿದೆ. ಈ ಸಂದರ್ಭದಲ್ಲಿ ಪ್ರಸಾರ ಕಾಣುತ್ತಿದ್ದ ‘ಹಿಟ್ಲರ್ ಕಲ್ಯಾಣ’ದ ಕಥೆ ಏನು ಎಂಬ ಪ್ರಶ್ನೆ ಮೂಡಿದೆ.

ಸಿನಿಮಾ ರಂಗದಲ್ಲಿ ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಗುರುತಿಸಿಕೊಂಡಿದ್ದಾರೆ. ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ. ಈಗ ‘ಅಮೃತಧಾರೆ’ ಧಾರಾವಾಹಿಯ ಪ್ರಸಾರ ಸಮಯ ಕೂಡ ಘೋಷಣೆ ಆಗಿದೆ.

‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸದ್ಯ ರಾತ್ರಿ 7 ಗಂಟೆಗೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಹೊಂದಿದೆ. ಆದರೆ, ಈಗ ಹೊಸ ಧಾರಾವಾಹಿಯ ಆಗಮನದಿಂದ ‘ಹಿಟ್ಲರ್​ ಕಲ್ಯಾಣ’ವನ್ನು ರಾತ್ರಿ 10 ಗಂಟೆಗೆ ಪ್ರಸಾರ ಮಾಡಲಾಗುತ್ತದೆ ಎನ್ನಲಾಗಿದೆ. ಸದ್ಯ ಜೀ ಕನ್ನಡದಲ್ಲಿ ರಾತ್ರಿ 10 ಗಂಟೆಗೆ ‘ಸೌಭಾಗ್ಯವತಿ ಭವ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಇದಕ್ಕೆ ಯಾವ ಸ್ಲಾಟ್ ಕೊಡುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

‘ಒಂಟಿ ಜೀವಗಳೆರೆಡು ಒಂದಾದ್ರೆ ಒಲವ ‘ಅಮೃತಧಾರೆ’. ಬರ್ತಿದೆ ಒಂದು ಹೊಸ ಕಥೆ ಅಮೃತಧಾರೆ. ಮೇ 29 ಸೋಮವಾರದಿಂದ ಸಂಜೆ 7ಕ್ಕೆ’ ಎಂದು ಹೊಸ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ. ಈ ಧಾರಾವಾಹಿಯಲ್ಲಿ ಸಿಹಿಕಹಿ ಚಂದ್ರು ಮೊದಲಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?

ರಾಜೇಶ್ ನಟರಂಗ ಅವರು ಉದ್ಯಮಿ ಆಗಿ ಕಾಣಿಸಿಕೊಂಡರೆ, ಛಾಯಾ ಸಿಂಗ್ ಮಧ್ಯಮ ವರ್ಗದ ಹುಡುಗಿ ಆಗಿ ಕಾಣಿಸಿಕೊಂಡಿದ್ದಾರೆ. ‘ಬಡೇ ಅಚ್ಚೆ ಲಗ್ತೇ ಹೈ’ ಹೆಸರಿನ ಹಿಂದಿ ಧಾರಾವಾಹಿಯ ರಿಮೇಕ್ ಇದಾಗಿದೆ. ‘ಅಮೃತಧಾರೆ’ ಪ್ರೋಮೋ ನೋಡಿದವರಿಗೆ ‘ಜೊತೆ ಜೊತೆಯಲಿ’ ಧಾರಾವಾಹಿ ನೆನಪಾಗಿದೆ. ವಯಸ್ಸಿನ ಅಂತರ ಹೆಚ್ಚಿರುವ ಹುಡುಗ-ಹುಡುಗಿಯ ಪ್ರೇಮ್ ಕಹಾನಿ ಈ ಧಾರಾವಾಹಿಯಲ್ಲಿತ್ತು. ‘ಅಮೃತಧಾರೆ’ ಕೂಡ ಇದೇ ರೀತಿ ಇರಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Tue, 23 May 23

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ