AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?

Amruthadhaare Serial: ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ.

ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?
ರಾಜೇಶ್-ಛಾಯಾ ಸಿಂಗ್
TV9 Web
| Edited By: |

Updated on:May 17, 2023 | 9:04 AM

Share

ಜೀ ಕನ್ನಡದಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಸಾವಿರಾರು ಎಪಿಸೋಡ್ ಕಂಡ ಧಾರಾವಾಹಿಗಳು ಶೀಘ್ರವೇ ಪೂರ್ಣಗೊಳ್ಳುವ ಸೂಚನೆ ಸಿಕ್ಕಿದೆ. ಈ ಬೆನ್ನಲ್ಲೆ ಹೊಸ ಧಾರಾವಾಹಿ ಆರಂಭ ಆಗಿದೆ. ಇತ್ತೀಚೆಗಷ್ಟೇ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಪ್ರಸಾರ ಆರಂಭ ಕಂಡಿದೆ. ಈಗ ‘ಅಮೃತಧಾರೆ’ (Amruthadhaare) ಧಾರಾವಾಹಿ ಆರಂಭಕ್ಕೆ ದಿನಾಂಕ ಫಿಕ್ಸ್ ಆಗಿದೆ. ಪ್ರೋಮೋ ಮೂಲಕ ಗಮನ ಸೆಳೆದ ಈ ಧಾರಾವಾಹಿ ಮೇ 29ರಿಂದ ಆರಂಭ ಆಗಲಿದೆ.

ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಅಂತಿಮಘಟ್ಟ ತಲುಪಿದೆ. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ‘ಅಮೃತಧಾರೆ’ ಪ್ರಸಾರ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವಾಹಿನಿ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

‘ಹುಡುಗ-ಹುಡುಗಿ ಹೊಂದ್ಕೊಂಡಿದ್ರೆ ಅದೊಂದು ಚೆಂದದ ಕಥೆ. ಅವರಿಬ್ರೂ ಕಿತ್ತಾಡ್ಕೊಂಡಿದ್ರೆ ಅದು ಬೇರೇನೇ ಕಥೆ. ಬರ್ತಿದೆ ಒಂದು ಬೊಂಬಾಟ್ ಕಥೆ. ಅಮೃತಧಾರೆ, ಮೇ 29ರಿಂದ’ ಎಂದು ಹೊಸ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ.  ಈ ಧಾರಾವಾಹಿ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

ರಾಜೇಶ್ ನಟರಂಗ ಅವರು ಉದ್ಯಮಿ ಆಗಿ ಕಾಣಿಸಿಕೊಂಡರೆ, ಛಾಯಾ ಸಿಂಗ್ ಮಧ್ಯಮ ವರ್ಗದ ಹುಡುಗಿ ಆಗಿ ಕಾಣಿಸಿಕೊಂಡಿದ್ದಾರೆ. ‘ಬಡೇ ಅಚ್ಚೆ ಲಗ್ತೇ ಹೈ’ ಹೆಸರಿನ ಹಿಂದಿ ಧಾರಾವಾಹಿಯ ರಿಮೇಕ್ ಇದಾಗಿದೆ. ‘ಅಮೃತಧಾರೆ’ ಪ್ರೋಮೋ ನೋಡಿದವರಿಗೆ ‘ಜೊತೆ ಜೊತೆಯಲಿ’ ಧಾರಾವಾಹಿ ನೆನಪಾಗಿದೆ. ವಯಸ್ಸಿನ ಅಂತರ ಹೆಚ್ಚಿರುವ ಹುಡುಗ-ಹುಡುಗಿಯ ಪ್ರೇಮ್ ಕಹಾನಿ ಈ ಧಾರಾವಾಹಿಯಲ್ಲಿತ್ತು. ‘ಅಮೃತಧಾರೆ’ ಕೂಡ ಇದೇ ರೀತಿ ಇರಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಜೀ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ಅಮೃತಧಾರೆ’; ಇದರ ಕಥೆ ಏನು?

ಛಾಯಾ ಸಿಂಗ್ ಅವರು 2000ನೇ ಇಸವಿಯಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ‘ಮುನ್ನುಡಿ’ ಅವರ ಮೊದಲ ಸಿನಿಮಾ. ಹಲವು ಕನ್ನಡ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸದ್ಯ ಅವರು ‘ಅನು ಅನೆ ನೇನು’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ರಾಜೇಶ್ ನಟರಂಗ ಕೂಡ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಈಗ ಛಾಯಾ ಸಿಂಗ್ ಹಾಗೂ ರಾಜೇಶ್ ಒಟ್ಟಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Wed, 17 May 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ