AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಈಗ ಹಾಗೆ ಆಗುವ ಸೂಚನೆ ಸಿಕ್ಕಿದೆ.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ
ಗೌತಮ್-ಭೂಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 26, 2025 | 10:08 AM

Share

‘ಅಮೃತಧಾರೆ’ ಧಾರಾವಾಹಿ (Amruthadhaare) ಸದ್ಯ ಹಲವು ತಿರುವುಗಳನ್ನು ಪಡೆದು ಸಾಗುತ್ತಿರುವುದನ್ನು ಕಾಣಬಹುದು. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಈ ಧಾರಾವಾಹಿಯ ಕಥೆಯಲ್ಲಿ ಮಹತ್ವದ ಬದಲಾವಣೆ ಆಗಿದೆ. ಗೌತಮ್ ಬಾಡಿಗೆ ಕಾರ್ ಡ್ರೈವರ್ ಆಗಿದ್ದಾನೆ. ಭೂಮಿಕಾ ಆತನ ಬಿಟ್ಟು ದೂರ ಬಂದಿದ್ದಾಳೆ. ಭೂಮಿಕಾಳನ್ನು ಹುಡುಕುತ್ತಾ ಹುಡುಕುತ್ತಾ ಐದು ವರ್ಷಗಳು ಕಳೆದಿವೆ. ಕೊನೆಗೂ ಭೂಮಿಕಾ ಹಾಗೂ ಗೌತಮ್ ಎದುರಾಗಿದ್ದಾರೆ. ಈಗ ಭೂಮಿಕಾ ಮತ್ತಷ್ಟು ದೂರ ಹೋಗುವ ಸೂಚನೆ ಕೊಟ್ಟಿದ್ದಾಳೆ.

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಆದರೆ, ಗೌತಮ್ ಈ ಎಚ್ಚೆರಿಕೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇರಲಿಲ್ಲ. ಇದನ್ನು ನಿರ್ಲಕ್ಷ್ಯ ಮಾಡಿ ಮಗನ ಭೇಟಿ ಮಾಡುತ್ತಿದ್ದಾನೆ. ಇದು ಆತನಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ಗೌತಮ್ ತನ್ನ ಮಗ ಆಕಾಶ್​ನ ಪದೇ ಪದೇ ಭೇಟಿ ಮಾಡುತ್ತಿದ್ದ. ಈ ಭೇಟಿ ಗುಟ್ಟಾಗಿ ನಡೆಯುತ್ತಿತ್ತು. ಈ ಬಗ್ಗೆ ಭೂಮಿಕಾಗೆ ಯಾವುದೇ ಅನುಮಾನ ಇರಲಿಲ್ಲ. ಆದರೆ, ಈಗ ಗೌತಮ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಭೂಮಿಕಾ ಮತ್ತಷ್ಟು ದೂರ ಆಗುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

‘ಅಮೃತಧಾರೆ’ ಪ್ರೋಮೋ

ಗೌತಮ್ ಹಾಗೂ ಆಕಾಶ್ ಮಾತನಾಡುತ್ತಿದ್ದರು. ಆಕಾಶ್​ಗೆ ತೋರಿದ ಪ್ರೀತಿಯಿಂದ ಆತ ಖುಷಿಯಾಗಿದ್ದಾನೆ. ಈ ವೇಳೆ ಭೂಮಿಕಾ ನೋಡಿ ಬಿಟ್ಟಿದ್ದಾಳೆ. ಗೌತಮ್ ಮುಖದಲ್ಲಿ ಆತಂಕದ ಛಾಯೆ ಮೂಡಿದೆ. ಈಗ ಇಬ್ಬರೂ ಮತ್ತಷ್ಟು ದೂರ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಭೂಮಿಕಾ ಹಾಗೂ ಗೌತಮ್ ಬೇರೆ ಆಗಿರುವಾಗ ತೆಗೆದುಕೊಂಡ ಕಥಾ ಹಂದರ ಸಾಕಷ್ಟು ಟೀಕೆಗೂ ಕಾರಣ ಆಗಿದೆ. ವಿವಿಧ ಸಿನಿಮಾಗಳ ಕಥೆಯನ್ನು ಇಟ್ಟುಕೊಂಡು ಈ ರೀತಿ ಕಥೆ ಮಾಡಲಾಗುತ್ತಿದೆ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಆದರೆ, ಮೇಕರ್​ಗಳು ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಸದ್ಯ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:07 am, Fri, 26 September 25

Follow Us
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!