AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಈಗ ಹಾಗೆ ಆಗುವ ಸೂಚನೆ ಸಿಕ್ಕಿದೆ.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ
ಗೌತಮ್-ಭೂಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 26, 2025 | 10:08 AM

Share

‘ಅಮೃತಧಾರೆ’ ಧಾರಾವಾಹಿ (Amruthadhaare) ಸದ್ಯ ಹಲವು ತಿರುವುಗಳನ್ನು ಪಡೆದು ಸಾಗುತ್ತಿರುವುದನ್ನು ಕಾಣಬಹುದು. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಈ ಧಾರಾವಾಹಿಯ ಕಥೆಯಲ್ಲಿ ಮಹತ್ವದ ಬದಲಾವಣೆ ಆಗಿದೆ. ಗೌತಮ್ ಬಾಡಿಗೆ ಕಾರ್ ಡ್ರೈವರ್ ಆಗಿದ್ದಾನೆ. ಭೂಮಿಕಾ ಆತನ ಬಿಟ್ಟು ದೂರ ಬಂದಿದ್ದಾಳೆ. ಭೂಮಿಕಾಳನ್ನು ಹುಡುಕುತ್ತಾ ಹುಡುಕುತ್ತಾ ಐದು ವರ್ಷಗಳು ಕಳೆದಿವೆ. ಕೊನೆಗೂ ಭೂಮಿಕಾ ಹಾಗೂ ಗೌತಮ್ ಎದುರಾಗಿದ್ದಾರೆ. ಈಗ ಭೂಮಿಕಾ ಮತ್ತಷ್ಟು ದೂರ ಹೋಗುವ ಸೂಚನೆ ಕೊಟ್ಟಿದ್ದಾಳೆ.

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಆದರೆ, ಗೌತಮ್ ಈ ಎಚ್ಚೆರಿಕೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇರಲಿಲ್ಲ. ಇದನ್ನು ನಿರ್ಲಕ್ಷ್ಯ ಮಾಡಿ ಮಗನ ಭೇಟಿ ಮಾಡುತ್ತಿದ್ದಾನೆ. ಇದು ಆತನಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ಗೌತಮ್ ತನ್ನ ಮಗ ಆಕಾಶ್​ನ ಪದೇ ಪದೇ ಭೇಟಿ ಮಾಡುತ್ತಿದ್ದ. ಈ ಭೇಟಿ ಗುಟ್ಟಾಗಿ ನಡೆಯುತ್ತಿತ್ತು. ಈ ಬಗ್ಗೆ ಭೂಮಿಕಾಗೆ ಯಾವುದೇ ಅನುಮಾನ ಇರಲಿಲ್ಲ. ಆದರೆ, ಈಗ ಗೌತಮ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಭೂಮಿಕಾ ಮತ್ತಷ್ಟು ದೂರ ಆಗುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

‘ಅಮೃತಧಾರೆ’ ಪ್ರೋಮೋ

ಗೌತಮ್ ಹಾಗೂ ಆಕಾಶ್ ಮಾತನಾಡುತ್ತಿದ್ದರು. ಆಕಾಶ್​ಗೆ ತೋರಿದ ಪ್ರೀತಿಯಿಂದ ಆತ ಖುಷಿಯಾಗಿದ್ದಾನೆ. ಈ ವೇಳೆ ಭೂಮಿಕಾ ನೋಡಿ ಬಿಟ್ಟಿದ್ದಾಳೆ. ಗೌತಮ್ ಮುಖದಲ್ಲಿ ಆತಂಕದ ಛಾಯೆ ಮೂಡಿದೆ. ಈಗ ಇಬ್ಬರೂ ಮತ್ತಷ್ಟು ದೂರ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಭೂಮಿಕಾ ಹಾಗೂ ಗೌತಮ್ ಬೇರೆ ಆಗಿರುವಾಗ ತೆಗೆದುಕೊಂಡ ಕಥಾ ಹಂದರ ಸಾಕಷ್ಟು ಟೀಕೆಗೂ ಕಾರಣ ಆಗಿದೆ. ವಿವಿಧ ಸಿನಿಮಾಗಳ ಕಥೆಯನ್ನು ಇಟ್ಟುಕೊಂಡು ಈ ರೀತಿ ಕಥೆ ಮಾಡಲಾಗುತ್ತಿದೆ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಆದರೆ, ಮೇಕರ್​ಗಳು ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಸದ್ಯ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:07 am, Fri, 26 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ