AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಈಗ ಹಾಗೆ ಆಗುವ ಸೂಚನೆ ಸಿಕ್ಕಿದೆ.

ಗೌತಮ್​ನಿಂದ ಮತ್ತಷ್ಟು ದೂರ ಸರಿಯಲಿದ್ದಾಳೆ ಭೂಮಿಕಾ? ನಡೆಯಿತು ಊಹಿಸದ ಘಟನೆ
ಗೌತಮ್-ಭೂಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 26, 2025 | 10:08 AM

Share

‘ಅಮೃತಧಾರೆ’ ಧಾರಾವಾಹಿ (Amruthadhaare) ಸದ್ಯ ಹಲವು ತಿರುವುಗಳನ್ನು ಪಡೆದು ಸಾಗುತ್ತಿರುವುದನ್ನು ಕಾಣಬಹುದು. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಈ ಧಾರಾವಾಹಿಯ ಕಥೆಯಲ್ಲಿ ಮಹತ್ವದ ಬದಲಾವಣೆ ಆಗಿದೆ. ಗೌತಮ್ ಬಾಡಿಗೆ ಕಾರ್ ಡ್ರೈವರ್ ಆಗಿದ್ದಾನೆ. ಭೂಮಿಕಾ ಆತನ ಬಿಟ್ಟು ದೂರ ಬಂದಿದ್ದಾಳೆ. ಭೂಮಿಕಾಳನ್ನು ಹುಡುಕುತ್ತಾ ಹುಡುಕುತ್ತಾ ಐದು ವರ್ಷಗಳು ಕಳೆದಿವೆ. ಕೊನೆಗೂ ಭೂಮಿಕಾ ಹಾಗೂ ಗೌತಮ್ ಎದುರಾಗಿದ್ದಾರೆ. ಈಗ ಭೂಮಿಕಾ ಮತ್ತಷ್ಟು ದೂರ ಹೋಗುವ ಸೂಚನೆ ಕೊಟ್ಟಿದ್ದಾಳೆ.

ಗೌತಮ್ ಹಾಗೂ ಭೂಮಿಕಾ ಐದು ವರ್ಷಗಳ ಬಳಿಕ ಭೇಟಿ ಆದಾಗ ಕೆಲವು ಎಚ್ಚರಿಕೆಗಳನ್ನು ನೀಡಿದ್ದಳು. ‘ನಿಮ್ಮಿಂದ ನಾನು ತುಂಬಾನೇ ದೂರ ಬಂದಿದ್ದೇನೆ. ನನ್ನನ್ನು ಮತ್ತೆ ಹುಡುಕುವ ಪ್ರಯತ್ನ ಮಾಡಬೇಡಿ. ಹಾಗಾದಲ್ಲಿ ನಾನು ನಿಮ್ಮಿಂದ ಮತ್ತಷ್ಟು ದೂರ ಹೋಗಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಳು. ಆದರೆ, ಗೌತಮ್ ಈ ಎಚ್ಚೆರಿಕೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇರಲಿಲ್ಲ. ಇದನ್ನು ನಿರ್ಲಕ್ಷ್ಯ ಮಾಡಿ ಮಗನ ಭೇಟಿ ಮಾಡುತ್ತಿದ್ದಾನೆ. ಇದು ಆತನಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ಗೌತಮ್ ತನ್ನ ಮಗ ಆಕಾಶ್​ನ ಪದೇ ಪದೇ ಭೇಟಿ ಮಾಡುತ್ತಿದ್ದ. ಈ ಭೇಟಿ ಗುಟ್ಟಾಗಿ ನಡೆಯುತ್ತಿತ್ತು. ಈ ಬಗ್ಗೆ ಭೂಮಿಕಾಗೆ ಯಾವುದೇ ಅನುಮಾನ ಇರಲಿಲ್ಲ. ಆದರೆ, ಈಗ ಗೌತಮ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಭೂಮಿಕಾ ಮತ್ತಷ್ಟು ದೂರ ಆಗುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

‘ಅಮೃತಧಾರೆ’ ಪ್ರೋಮೋ

ಗೌತಮ್ ಹಾಗೂ ಆಕಾಶ್ ಮಾತನಾಡುತ್ತಿದ್ದರು. ಆಕಾಶ್​ಗೆ ತೋರಿದ ಪ್ರೀತಿಯಿಂದ ಆತ ಖುಷಿಯಾಗಿದ್ದಾನೆ. ಈ ವೇಳೆ ಭೂಮಿಕಾ ನೋಡಿ ಬಿಟ್ಟಿದ್ದಾಳೆ. ಗೌತಮ್ ಮುಖದಲ್ಲಿ ಆತಂಕದ ಛಾಯೆ ಮೂಡಿದೆ. ಈಗ ಇಬ್ಬರೂ ಮತ್ತಷ್ಟು ದೂರ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಭೂಮಿಕಾ ಹಾಗೂ ಗೌತಮ್ ಬೇರೆ ಆಗಿರುವಾಗ ತೆಗೆದುಕೊಂಡ ಕಥಾ ಹಂದರ ಸಾಕಷ್ಟು ಟೀಕೆಗೂ ಕಾರಣ ಆಗಿದೆ. ವಿವಿಧ ಸಿನಿಮಾಗಳ ಕಥೆಯನ್ನು ಇಟ್ಟುಕೊಂಡು ಈ ರೀತಿ ಕಥೆ ಮಾಡಲಾಗುತ್ತಿದೆ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಆದರೆ, ಮೇಕರ್​ಗಳು ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಸದ್ಯ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:07 am, Fri, 26 September 25

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ