AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ಯಲ್ಲಿ ಛಾಯಾ ಸಿಂಗ್ ಕಣ್ಣೀರಿಗೆ ಕರಗಿತು ವೀಕ್ಷಕರ ಮನ; ನಟಿಯನ್ನು ಕೊಂಡಾಡಿದ ಅಭಿಮಾನಿಗಳು

ಮದುವೆ ಆಗದೇ ಇರುವ ಹೆಣ್ಣನ್ನು ಅನೇಕರು ದೂಷಿಸುತ್ತಾರೆ. ಆ ರೀತಿ ದೂಷಿಸಬಾರದು ಎಂಬ ಥೀಮ್ ಇಟ್ಟುಕೊಂಡು ‘ಅಮೃತಧಾರೆ’ ಎಪಿಸೋಡ್ ಮೂಡಿಬಂದಿತ್ತು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಅಮೃತಧಾರೆ’ಯಲ್ಲಿ ಛಾಯಾ ಸಿಂಗ್ ಕಣ್ಣೀರಿಗೆ ಕರಗಿತು ವೀಕ್ಷಕರ ಮನ; ನಟಿಯನ್ನು ಕೊಂಡಾಡಿದ ಅಭಿಮಾನಿಗಳು
ಛಾಯಾ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Jun 24, 2023 | 11:47 AM

Share

ನಟಿ ಛಾಯಾ ಸಿಂಗ್ (Chaya Singh) ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ಬಣ್ಣದ ಬದುಕು ಆರಂಭಿಸಿದ್ದು ಕಿರುತೆರೆ ಮೂಲಕ. ಈಗಲೂ ಕಿರುತೆರೆ ಜೊತೆ ನಂಟು ಇಟ್ಟುಕೊಂಡಿದ್ದಾರೆ. ಕನ್ನಡದ ‘ಅಮೃತಧಾರೆ’ (Amruthadhare Serial) ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ಜೂನ್ 23ರ ಎಪಿಸೋಡ್ ವೀಕ್ಷಕರ ಗಮನ ಸೆಳೆದಿದೆ. ಮದುವೆ ಆಗದೇ ಇರುವ ಹೆಣ್ಣನ್ನು ಅನೇಕರು ದೂಷಿಸುತ್ತಾರೆ. ಆ ರೀತಿ ದೂಷಿಸಬಾರದು ಎಂಬ ಥೀಮ್ ಇಟ್ಟುಕೊಂಡು ಶುಕ್ರವಾರದ ಎಪಿಸೋಡ್ ಮೂಡಿಬಂದಿತ್ತು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಛಾಯಾ ಸಿಂಗ್ ನಟನೆಯನ್ನು ಫ್ಯಾನ್ಸ್ ಕೊಂಡಾಡಿದ್ದಾರೆ.

ಭೂಮಿಕಾಗೆ (ಛಾಯಾ ಸಿಂಗ್) ಈಗ ವಯಸ್ಸು 35 ವರ್ಷ. ಎಷ್ಟೇ ಪ್ರಯತ್ನ ಮಾಡಿದರೂ ಆಕೆಗೆ ಮದುವೆ ಆಗಿರುವುದಿಲ್ಲ. ಕೊನೆಗೂ ಒಂದು ಹುಡಗನನ್ನು ಗೌತಮ್ ದಿವಾನ್​ (ರಾಜೇಶ್ ನಟರಂಗ) ಕರೆದು ತರುತ್ತಾನೆ. ಎಂಗೇಜ್​ಮೆಂಟ್ ದಿನ ಆ ಹುಡುಗ ಫ್ರಾಡ್ ಅನ್ನೋದು ಗೊತ್ತಾಗುತ್ತದೆ. ಮದುವೆಯ ಕನಸು ಕಂಡ ಭೂಮಿಕಾಗೆ ಮತ್ತದೇ ನೋವು. ಆ ನೋವಿನಲ್ಲಿ ಆಕೆ ಆಡುವ ಮಾತುಗಳು ಎಲ್ಲರ ಗಮನ ಸೆಳೆದಿದೆ.

ಅನೇಕ ಹೆಣ್ಣುಮಕ್ಕಳು ಗಂಡನ ಮನೆಗೆ ತೆರಳಿ ಕಷ್ಟ ಪಟ್ಟವರಿದ್ದಾರೆ. ಅಲ್ಲಿ ಟಾರ್ಚರ್ ಪಡೆದು ವಿಚ್ಛೇದನ ಪಡೆದವರಿದ್ದಾರೆ. ಮದುವೆ ಆಗದೇ ಇದ್ದವರಿಗೆ ಮದುವೆ ಆಗಿಲ್ಲ ಎನ್ನುವ ಚಿಂತೆ. ಮದುವೆ ಆಗಿ ಗಂಡನ ಮನೆಗೆ ತೆರಳಿದವರಿಗೆ ಬೇರೆಯದೇ ಚಿಂತೆ. ಈ ಎಲ್ಲಾ ವಿಚಾರಗಳನ್ನು ಕಣ್ಣೀರು ಹಾಕುತ್ತಲೇ ಹೇಳುತ್ತಾರೆ ಛಾಯಾ ಸಿಂಗ್. ಅವರ ಕಣ್ಣೀರಿಗೆ ಪ್ರೇಕ್ಷಕರ ಮನ ಕರಗಿದೆ. ಈ ಕ್ಲಿಪ್​ನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಇಷ್ಟು ದಿನ ಧಾರಾವಾಹಿ ನೋಡಿ ನಗುತ್ತಿದೆ. ಆದರೆ, ಈ ಧಾರಾವಾಹಿಯ ದೃಶ್ಯ ನೋಡಿ ನಿಜಕ್ಕೂ ಕಣ್ಣೀರು ಇಟ್ಟೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಛಾಯಾ ಸಿಂಗ್ ಹೇಳುವ ‘ನಾವು ಪೂಜೆ ಮಾಡೋ ಯಾವ್ ದೇವ್ರೂಗೂ ಹೆಣ್ಣುಮಕ್ಕಳೇ ಹುಟ್ಟಿಲ್ಲ’ ಎಂಬ ಮಾತು ಎಲ್ಲರ ಗಮನ ಸೆಳೆದಿದೆ. ಛಾಯಾ ಸಿಂಗ್ ಮಾತ್ರವಲ್ಲದೆ, ರಾಜೇಶ್ ನಟರಂಗ, ಸಿಹಿ ಕಹಿ ಚಂದ್ರು, ಸಾರಾ ಅಣ್ಣಯ್ಯ ಮೊದಲಾದವರ ನಟನೆ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:46 am, Sat, 24 June 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ