AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ಯಲ್ಲಿ ಛಾಯಾ ಸಿಂಗ್ ಕಣ್ಣೀರಿಗೆ ಕರಗಿತು ವೀಕ್ಷಕರ ಮನ; ನಟಿಯನ್ನು ಕೊಂಡಾಡಿದ ಅಭಿಮಾನಿಗಳು

ಮದುವೆ ಆಗದೇ ಇರುವ ಹೆಣ್ಣನ್ನು ಅನೇಕರು ದೂಷಿಸುತ್ತಾರೆ. ಆ ರೀತಿ ದೂಷಿಸಬಾರದು ಎಂಬ ಥೀಮ್ ಇಟ್ಟುಕೊಂಡು ‘ಅಮೃತಧಾರೆ’ ಎಪಿಸೋಡ್ ಮೂಡಿಬಂದಿತ್ತು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಅಮೃತಧಾರೆ’ಯಲ್ಲಿ ಛಾಯಾ ಸಿಂಗ್ ಕಣ್ಣೀರಿಗೆ ಕರಗಿತು ವೀಕ್ಷಕರ ಮನ; ನಟಿಯನ್ನು ಕೊಂಡಾಡಿದ ಅಭಿಮಾನಿಗಳು
ಛಾಯಾ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Jun 24, 2023 | 11:47 AM

Share

ನಟಿ ಛಾಯಾ ಸಿಂಗ್ (Chaya Singh) ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ಬಣ್ಣದ ಬದುಕು ಆರಂಭಿಸಿದ್ದು ಕಿರುತೆರೆ ಮೂಲಕ. ಈಗಲೂ ಕಿರುತೆರೆ ಜೊತೆ ನಂಟು ಇಟ್ಟುಕೊಂಡಿದ್ದಾರೆ. ಕನ್ನಡದ ‘ಅಮೃತಧಾರೆ’ (Amruthadhare Serial) ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ಜೂನ್ 23ರ ಎಪಿಸೋಡ್ ವೀಕ್ಷಕರ ಗಮನ ಸೆಳೆದಿದೆ. ಮದುವೆ ಆಗದೇ ಇರುವ ಹೆಣ್ಣನ್ನು ಅನೇಕರು ದೂಷಿಸುತ್ತಾರೆ. ಆ ರೀತಿ ದೂಷಿಸಬಾರದು ಎಂಬ ಥೀಮ್ ಇಟ್ಟುಕೊಂಡು ಶುಕ್ರವಾರದ ಎಪಿಸೋಡ್ ಮೂಡಿಬಂದಿತ್ತು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಛಾಯಾ ಸಿಂಗ್ ನಟನೆಯನ್ನು ಫ್ಯಾನ್ಸ್ ಕೊಂಡಾಡಿದ್ದಾರೆ.

ಭೂಮಿಕಾಗೆ (ಛಾಯಾ ಸಿಂಗ್) ಈಗ ವಯಸ್ಸು 35 ವರ್ಷ. ಎಷ್ಟೇ ಪ್ರಯತ್ನ ಮಾಡಿದರೂ ಆಕೆಗೆ ಮದುವೆ ಆಗಿರುವುದಿಲ್ಲ. ಕೊನೆಗೂ ಒಂದು ಹುಡಗನನ್ನು ಗೌತಮ್ ದಿವಾನ್​ (ರಾಜೇಶ್ ನಟರಂಗ) ಕರೆದು ತರುತ್ತಾನೆ. ಎಂಗೇಜ್​ಮೆಂಟ್ ದಿನ ಆ ಹುಡುಗ ಫ್ರಾಡ್ ಅನ್ನೋದು ಗೊತ್ತಾಗುತ್ತದೆ. ಮದುವೆಯ ಕನಸು ಕಂಡ ಭೂಮಿಕಾಗೆ ಮತ್ತದೇ ನೋವು. ಆ ನೋವಿನಲ್ಲಿ ಆಕೆ ಆಡುವ ಮಾತುಗಳು ಎಲ್ಲರ ಗಮನ ಸೆಳೆದಿದೆ.

ಅನೇಕ ಹೆಣ್ಣುಮಕ್ಕಳು ಗಂಡನ ಮನೆಗೆ ತೆರಳಿ ಕಷ್ಟ ಪಟ್ಟವರಿದ್ದಾರೆ. ಅಲ್ಲಿ ಟಾರ್ಚರ್ ಪಡೆದು ವಿಚ್ಛೇದನ ಪಡೆದವರಿದ್ದಾರೆ. ಮದುವೆ ಆಗದೇ ಇದ್ದವರಿಗೆ ಮದುವೆ ಆಗಿಲ್ಲ ಎನ್ನುವ ಚಿಂತೆ. ಮದುವೆ ಆಗಿ ಗಂಡನ ಮನೆಗೆ ತೆರಳಿದವರಿಗೆ ಬೇರೆಯದೇ ಚಿಂತೆ. ಈ ಎಲ್ಲಾ ವಿಚಾರಗಳನ್ನು ಕಣ್ಣೀರು ಹಾಕುತ್ತಲೇ ಹೇಳುತ್ತಾರೆ ಛಾಯಾ ಸಿಂಗ್. ಅವರ ಕಣ್ಣೀರಿಗೆ ಪ್ರೇಕ್ಷಕರ ಮನ ಕರಗಿದೆ. ಈ ಕ್ಲಿಪ್​ನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಇಷ್ಟು ದಿನ ಧಾರಾವಾಹಿ ನೋಡಿ ನಗುತ್ತಿದೆ. ಆದರೆ, ಈ ಧಾರಾವಾಹಿಯ ದೃಶ್ಯ ನೋಡಿ ನಿಜಕ್ಕೂ ಕಣ್ಣೀರು ಇಟ್ಟೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಛಾಯಾ ಸಿಂಗ್ ಹೇಳುವ ‘ನಾವು ಪೂಜೆ ಮಾಡೋ ಯಾವ್ ದೇವ್ರೂಗೂ ಹೆಣ್ಣುಮಕ್ಕಳೇ ಹುಟ್ಟಿಲ್ಲ’ ಎಂಬ ಮಾತು ಎಲ್ಲರ ಗಮನ ಸೆಳೆದಿದೆ. ಛಾಯಾ ಸಿಂಗ್ ಮಾತ್ರವಲ್ಲದೆ, ರಾಜೇಶ್ ನಟರಂಗ, ಸಿಹಿ ಕಹಿ ಚಂದ್ರು, ಸಾರಾ ಅಣ್ಣಯ್ಯ ಮೊದಲಾದವರ ನಟನೆ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:46 am, Sat, 24 June 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ