AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ತಿರುವು: ಗೌತಮ್ ಕೈಯಲ್ಲಿ ತಾಯಿಯ ಕೆಟ್ಟ ಕೆಲಸದ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಮತ್ತು ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳು ಪ್ರೇಕ್ಷಕರನ್ನು ತಲ್ಲಣಗೊಳಿಸುವ ತಿರುವುಗಳನ್ನು ಪಡೆದುಕೊಂಡಿವೆ. “ಅಮೃತಧಾರೆ”ಯಲ್ಲಿ ಗೌತಮ್ ತಾಯಿಯ ಮೋಸ ಗೊತ್ತಾಗುವ ಸಮಯ ಸಮೀಪಿಸುತ್ತಿದ್ದರೆ, “ನಾ ನಿನ್ನ ಬಿಡಲಾರೆ”ಯಲ್ಲಿ ದುರ್ಗಾ ಅಕ್ಕ ಅಂಬಿಕಾಳ ಸಾವಿನ ರಹಸ್ಯ ತಿಳಿದುಕೊಳ್ಳುತ್ತಾಳೆ .

ಮಹಾ ತಿರುವು: ಗೌತಮ್ ಕೈಯಲ್ಲಿ ತಾಯಿಯ ಕೆಟ್ಟ ಕೆಲಸದ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 14, 2025 | 7:43 AM

Share

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ (Amruthadhaare)  ಹಾಗೂ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳು ಮಹತ್ವದ ತಿರುವುಗಳನ್ನು ಪಡೆದು ಸಾಗುತ್ತಿರುವುದು ಗೊತ್ತೇ ಇದೆ. ಈ ಎರಡು ಧಾರಾವಾಹಿಗಳು ಟಿಆರ್​ಪಿಯಲ್ಲಿ ಸ್ಪರ್ಧೆಗೆ ಇಳಿದಿವೆ ಎಂದೇ ಹೇಳಬಹುದು. ಈ ಎರಡೂ ಧಾರಾವಾಹಿಗಳಲ್ಲಿ ಮಹಾ ತಿರುವೊಂದು ಬರುವ ಸೂಚನೆ ಸಿಕ್ಕಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ತಾಯಿಯ ಕೆಟ್ಟ ಕೆಲಸ ಗೌತಮ್​ಗ ಗೊತ್ತಾಗೋ ಹಂತದಲ್ಲಿ ಇದ್ದರೆ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದುರ್ಗಾಗೆ ಅಕ್ಕ ಅಂಬಿಕಾಳ ಇತಿಹಾಸ ಗೊತ್ತಾಗೋ ಸಮಯ ಹತ್ತಿರವಾಗಿದೆ.

‘ಅಮೃತಧಾರೆ’ ಧಾರಾವಾಹಿ

ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮಲತಾಯಿ ಶಕುಂತಲಾ ವಿಲನ್. ಆಕೆ ಗೊತ್ತಿಲ್ಲದೆ ಗೌತಮ್​ಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾಳೆ. ಇದು ಈವರೆಗೆ ಗೌತಮ್ ಅರಿವಿಗೆ ಬಂದಿಲ್ಲ. ಆದರೆ, ಭೂಮಿಕಾ ಇದನ್ನು ಅರಿತುಕೊಂಡಳು ಮತ್ತು ಶಕುಂತಲಾ ವಿರುದ್ಧ ತಿರುಗಿ ಬಿದ್ದಿದ್ದಾಳೆ. ಶಕುಂತಲಾಗೆ ಇದರಿಂದ ಸಾಕಷ್ಟು ತೊಂದರೆ ಆಗಿದೆ.

ಇದನ್ನೂ ಓದಿ
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?
Image
ಸಹೋದರನ ರೀತಿ ಕಾಣುತ್ತಿದ್ದ ಬೋನಿಯನ್ನೇ ವಿವಾಹ ಆಗಿದ್ದ ಶ್ರೀದೇವಿ

‘ಅಮೃತಧಾರೆ’ ಪ್ರೋಮೋ

View this post on Instagram

A post shared by Zee Kannada (@zeekannada)

‘ಗೌತಮ್​ಗೆ ಇದನ್ನೆಲ್ಲ ಹೋಗಿ ಹೇಳು ನಂಬ್ತಾನಾ ನೋಡೋಣ’ ಎಂದು ಶಕುಂತಲಾಳು ಭೂಮಿಕಾಗೆ ಚಾಲೆಂಜ್ ಮಾಡಿದಳು. ಈ ಚಾಲೆಂಜ್​ನ ಸ್ವೀಕರಿಸಿದ ಭೂಮಿಕಾ, ಹೋಗಿ ಗೌತಮ್ ಬಳಿ ಹೇಳಿದ್ದಾಳೆ. ಅಷ್ಟೇ ಅಲ್ಲ, ಫೋನ್ ಟ್ಯಾಪಿಂಗ್ ಮಾಡಿ, ಅದರ ಆಡಿಯೋಗಳನ್ನು ಇಟ್ಟುಕೊಂಡು ಗೌತಮ್​ಗೆ ಕೇಳಿಸಿದ್ದಾಳೆ. ಇದರಿಂದ ಧಾರಾವಾಹಿಗೆ ಮಹಾ ತಿರುವು ಬರಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ನಾ ನಿನ್ನ ಬಿಡಲಾರೆ

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಅಂಬಿಕಾ ಈಗಾಗಲೇ ನಿಧನ ಹೊಂದಿದ್ದಾಳೆ. ಆಕೆ ಆತ್ಮವಾಗಿ ಎಲ್ಲ ಕಡೆಗಳಲ್ಲಿ ಓಡಾಡುತ್ತಿದ್ದಾಳೆ. ಆಕೆ ಸಹೋದರಿ ದುರ್ಗಾಗೆ ಮಾತ್ರ ಕಾಣಿಸುತ್ತಿದ್ದಾಳೆ. ಅಂಬಿಕಾಳನ್ನು ಸಾಯಿಸಿದ ಮನೆ ಬಳಿ ದುರ್ಗಾ ಹೋಗಿದ್ದಾಳೆ. ಆಗ ಆಕೆಗೆ ಅಕ್ಕನ ನೆನಪು ಬಂದಿದೆ. ದುರ್ಗಾಳ ಮುಖವು ಅಸ್ಪಷ್ಟವಾಗಿ ಕಾಣಿಸಿದೆ.

ನಾ ನಿನ್ನ ಬಿಡಲಾರೆ ಪ್ರೋಮೋ

View this post on Instagram

A post shared by Zee Kannada (@zeekannada)

ಈ ಮೊದಲು ದುರ್ಗಾ ಕನಸಿನಲ್ಲಿ ಅಂಬಿಕಾಳನ್ನು ಸುಟ್ಟ ಮನೆಯ ಜಾಗದ ಕನಸು ಪದೇ ಪದೇ ಬರುತ್ತಲೇ ಇತ್ತು. ಆದರೆ, ಆ ಜಾಗ ಯಾವುದು ಎಂದು ಗೊತ್ತಿರಲಿಲ್ಲ. ಈಗ ಆ ಜಾಗವನ್ನು ನಿಜವಾಗಿ ನೋಡಿ ಶಾಕ್ ಆಗಿದೆ. ಆಕೆ ತಲೆ ಸುತ್ತಿ ಬಿದ್ದಿದ್ದಾಳೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:42 am, Thu, 14 August 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು