AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ

ಜೀ ಕನ್ನಡದ 'ಅಮೃತಧಾರೆ' ಧಾರಾವಾಹಿಯಲ್ಲಿ ಮಿಂಚು ಅಪಹರಣ ಪ್ರೇಕ್ಷಕರನ್ನು ಆತಂಕಕ್ಕೆ ದೂಡಿದೆ. ಮಗಳ ರಕ್ಷಣೆಗಾಗಿ ಸೌಮ್ಯ ಸ್ವಭಾವದ ಭೂಮಿಕಾ, ಭದ್ರಕಾಳಿ ಅವತಾರ ತಾಳಿ ರೌಡಿಗಳ ಹೆಡೆಮುರಿ ಕಟ್ಟುತ್ತಿದ್ದಾಳೆ. ಕಡ್ಡಿ, ರಾಡ್‌ಗಳನ್ನೇ ಆಯುಧವಾಗಿಸಿಕೊಂಡು ರೌಡಿಗಳ ವಿರುದ್ಧ ಹೋರಾಡುವ ಭೂಮಿಕಾಳ ಸಾಹಸ ಮುಂದಿನ ಸಂಚಿಕೆಗಳ ಬಗ್ಗೆ ಕುತೂಹಲ ಮೂಡಿಸಿದೆ.

'ಅಮೃತಧಾರೆ' ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 06, 2026 | 8:03 AM

Share

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ.

ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ ಸಹಾಯದೊಂದಿಗೆ ಕಿಡ್ನ್ಯಾಪರ್‌ಗಳ ಅಡಗುದಾಣವನ್ನು ಪತ್ತೆಹಚ್ಚಲು ಮುಂದಾಗುತ್ತಾಳೆ. ಒಂದು ಹಳೆಯ ಗೋದಾಮಿನಲ್ಲಿ ಮಿಂಚನ್ನು ಕೂಡಿಹಾಕಿರುವುದು ಗೊತ್ತಾದ ತಕ್ಷಣ ಅಲ್ಲಿಗೆ ಧಾವಿಸುತ್ತಾಳೆ. ಆದರೆ, ಪೊಲೀಸರು ಮತ್ತು ಭೂಮಿಕಾ ಕಣ್ಣು ತಪ್ಪಿಸಿ ಕಿಡ್ನ್ಯಾಪರ್‌ಗಳು ಮಿಂಚನ್ನು ಮತ್ತೊಂದು ವಾಹನದಲ್ಲಿ ಬೇರೆಡೆಗೆ ಸಾಗಿಸಲು ಯತ್ನಿಸುತ್ತಾರೆ.

View this post on Instagram

A post shared by Zee Kannada (@zeekannada)

ನಂತರ ಆಕೆಯನ್ನು ಕಿಡ್ನ್ಯಾಪ್ ಮಾಡಿದವರ ಬಳಿ ಭೂಮಿಕಾ ತೆರಳುತ್ತಾಳೆ. ತಾಯಿಯ ಮಮತೆಯ ಜೊತೆಗೆ ರೌಡಿಗಳನ್ನು ಸಂಹರಿಸುವ ಉಗ್ರ ರೂಪ ತಳೆಯುತ್ತಾಳೆ. ಮಗಳನ್ನು ಕಾಪಾಡಲು ಮುಂದಾಗುವ ಭೂಮಿಕಾ ಎದುರು ಬರುವ ಪ್ರತಿಯೊಬ್ಬ ಗೂಂಡಾಗೂ ತಕ್ಕ ಶಾಸ್ತಿ ಮಾಡುತ್ತಾಳೆ. ಕೈಗೆ ಸಿಕ್ಕ ಕಡ್ಡಿ, ಕಬ್ಬಿಣದ ರಾಡ್‌ಗಳನ್ನೇ ಆಯುಧವಾಗಿಸಿಕೊಂಡು ರೌಡಿಗಳ ಮೇಲೆ ಮುಗಿಬೀಳುತ್ತಾಳೆ. ಭೂಮಿಕಾಳ ಈ ಅನಿರೀಕ್ಷಿತ ಸಾಹಸ ನೋಡಿ ಎಲ್ಲರೂ ಬೆಚ್ಚಿಬೀಳುತ್ತಾರೆ.

ಇದನ್ನೂ ಓದಿ: ಅಮೃತಧಾರೆ: ಆ ಒಂದು ವಿಷಯಕ್ಕೆ ದಿಯಾಳನ್ನು ಕೊಂದೇ ಬಿಟ್ಟ ಜೆಡಿ

ಸಾಮಾನ್ಯವಾಗಿ ಸೌಮ್ಯ ಸ್ವಭಾವದ ಗೃಹಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದ ಭೂಮಿಕಾ, ಮಗಳ ರಕ್ಷಣೆಗಾಗಿ ಇಷ್ಟು ದೊಡ್ಡ ಸಾಹಸಕ್ಕೆ ಕೈ ಹಾಕಿರುವುದು ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಈ ರೋಚಕ ಸಂಚಿಕೆಯು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದ್ದು, ಭೂಮಿಕಾ ತನ್ನ ಮಗಳು ಮಿಂಚನ್ನು ಕಿಡ್ನ್ಯಾಪರ್‌ಗಳಿಂದ ಸುರಕ್ಷಿತವಾಗಿ ಹೇಗೆ ಬಿಡಿಸಿಕೊಂಡು ಬರುತ್ತಾಳೆ ಎಂಬುದು ಮುಂದಿನ ಸಂಚಿಕೆಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ