AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ

ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಜಯದೇವ್​ಗೆ ದೊಡ್ಡ ಶಾಕ್ ನೀಡಿದ್ದಾನೆ. ಕಂಪನಿಯ ಲೋಗೋ ತನ್ನದು ಎಂದು ಬೀಗುತ್ತಿದ್ದ ಜಯದೇವ್, ಕೊನೆಗೆ ಮುಖಭಂಗಕ್ಕೆ ಒಳಗಾಗಿದ್ದಾನೆ. ಲೋಗೋ ನೋಂದಣಿ ಪತ್ರದ ಮೂಲಕ ಅದು ಗೌತಮ್ ಹೆಸರಿನಲ್ಲಿದೆ ಎಂದು ಸಾಬೀತಾಗಿದ್ದು, ಹೀರೋ ಗೌತಮ್ ಮತ್ತೊಮ್ಮೆ ವಿಜಯ ಸಾಧಿಸಿದ್ದಾನೆ.

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 16, 2026 | 10:25 AM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ.

ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ ಆಸೆ ಈಡೇರಲೇ ಇಲ್ಲ. ಆತ ಬೇರೆಯದೇ ಪ್ಲ್ಯಾನ್ ಮಾಡಿದ. ಗೌತಮ್​​​ಗೆ ತೊಂದರೆಕೊಡಬೇಕು ಎಂದು ಪ್ರಯತ್ನಿಸಿದ. ಈಗ ಗೌತಮ್ ಬಿಸ್ನೆಸ್ ಆರಂಭಿಸಿದ್ದಾನೆ ಮತ್ತು ಈ ಬಿಸ್ನೆಸ್​​ಗೆ ದೀವಾನ್ ಕಂಪನಿಯ ಲೋಗೋ ಬಳಕೆ ಮಾಡಿದ್ದಾನೆ.

View this post on Instagram

A post shared by Zee Kannada (@zeekannada)

ಇದು ಚರ್ಚೆಯ ವಿಷಯ ಆಯಿತು. ಜಯದೇವ್ ಲೋಗೋ ತನ್ನದು ಎಂದು ಬೀಗುತ್ತಿದ್ದ. ಹೀಗಿರುವಾಗಲೇ ದೀವಾನ್ ಕಂಪನಿಯ ಲೋಗೋ ಗೌತಮ್ ಹೆಸರಿಗೆ ನೋಂದಣಿ ಆಗಿರುವ ಪತ್ರ ಸಿಕ್ಕಿತು. ಈ ಪತ್ರವನ್ನು ಜಯದೇವ್ ತಮ್ಮ ಪಾರ್ಥ ಗೌತಮ್​​ಗೆ ನೀಡಿದ್ದಾನೆ. ಈ ಮೂಲಕ ಲೋಗೋ ಗೌತಮ್​​ ಹೆಸರಲ್ಲಿ ಇದೆ ಎಂದು ಸಾಬೀತಾಗಿದೆ. ಇದರಿಂದ ಜಯದೇವ್​​ಗೆ ದೊಡ್ಡ ಮುಖಭಂಗ ಆಗಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಅಮೃತಧಾರೆ’: ದೊಡ್ಡ ಸಾಧನೆ ಮಾಡಿದ ಮಲ್ಲಿ; ಜಯದೇವ್ ಬಾಳಲ್ಲಿ ಕತ್ತಲು

ಜಯದೇವ್ ಸದಾ ಕೆಟ್ಟದನ್ನು ಮಾಡಲು ಪ್ರಯತ್ನಿಸುತ್ತಲೇ ಇರುವವನು ಎಂಬುದು ಗೊತ್ತೇ ಇದೆ. ಈಗಲೂ ಆತ ಹಾಗೆಯೇ ಮಾಡುವ ಎಲ್ಲಾ ಸಾಧ್ಯತೆ ಇದೆ. ಆದರೆ, ಹೀರೋ ಎಂದಮೇಲೆ ಗೆಲುವು ಆತನ ಕಡೆಗೆ ಒಲಿಯಲೇ ಬೇಕಲ್ಲವೇ? ಹೀಗಾಗಿ. ಪ್ರತಿ ಹಂತದಲ್ಲೂ ಗೌತಮ್​​ಗೆ ಗೆಲುವು ಸಿಗುತ್ತಾ ಹೋಗುತ್ತಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್