AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಕಳೆದು ಹೋದ ಮಗಳು ಗೌತಮ್​ಗೆ ಸಿಕ್ಕೇ ಬಿಟ್ಟಳು

ಅಮೃತಧಾರೆ ಧಾರಾವಾಹಿ ಪ್ರಸ್ತುತ TRPಯಲ್ಲಿ ನಂಬರ್ 1 ಸ್ಥಾನದಲ್ಲಿದೆ. ಈಗ ಗೌತಮ್‌ನ ಕಳೆದುಹೋದ ಮಗಳು ಮತ್ತೆ ಸಿಗುವ ಸೂಚನೆ ಸಿಕ್ಕಿದೆ. ಹೊಸ ಪ್ರೋಮೋದಲ್ಲಿ ತೋರಿಸಿದ ಮಗು ಗೌತಮ್‌ಳದ್ದಾಗಿರಬಹುದು ಎಂದು ಹೇಳಲಾಗಿದೆ. ಇದು ಗೌತಮ್ ಮತ್ತು ಭೂಮಿಕಾ ಮರುಮಿಲನಕ್ಕೆ ದಾರಿ ಮಾಡಿಕೊಡಲಿದೆಯೇ ಎಂಬ ಕುತೂಹಲ ಹೆಚ್ಚಿಸಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಕಳೆದು ಹೋದ ಮಗಳು ಗೌತಮ್​ಗೆ ಸಿಕ್ಕೇ ಬಿಟ್ಟಳು
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 06, 2025 | 7:47 AM

Share

‘ಅಮೃತಧಾರೆ’ (Amruthadhaare) ಧಾರಾವಾಹಿ ಸಾಕಷ್ಟು ತಿರುವುಗಳನ್ನು ಪಡೆದು ಸಾಗುತ್ತಾ ಇದೆ. ಈ ಧಾರಾವಾಹಿಯು ಟಿಆರ್​ಪಿಯಲ್ಲೂ ನಂಬರ್ ಒಂದನೇ ಸ್ಥಾನ ಪಡೆದುಕೊಂಡಿದೆ. ಈಗ ಧಾರಾವಾಹಿಯಲ್ಲಿ ಮತ್ತೊಂದು ರೋಚಕತೆ ಎದುರಾಗುವ ಸೂಚನೆ ಸಿಕ್ಕಿದೆ. ಕಳೆದು ಹೋಗಿದ್ದ ಗೌತಮ್ ಮಗಳು ಸಿಗುವ ಸೂಚನೆ ಸಿಕ್ಕಿದೆ. ಆ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಗಮನ ಸೆಳೆದಿದೆ.

ಗೌತಮ್ ದೀವಾನ್​ಗೆ ಇಬ್ಬರು ಮಕ್ಕಳು ಜನಿಸಿದ್ದರು. ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು. ಗಂಡು ಮಗು ಉಳಿದುಕೊಂಡರೆ, ಹೆಣ್ಣು ಮಗು ಕಳೆದು ಹೋಗಿದೆ. ಈ ಕೆಲಸ ಮಾಡಿದ್ದು ಜಯದೇವ್​ ದೀವಾನ್. ಆದರೆ, ನಂತರ ಮಗು ಎಲ್ಲಿ ಹೋಯಿತು ಎಂಬ ಬಗ್ಗೆ ಮಾಹಿತಿಯೇ ಇರಲಿಲ್ಲ. ಕೊನೆಗೂ ಈ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. ಐದು ವರ್ಷಗಳ ಬಳಿಕ ಮಗು ಎಲ್ಲಿದೆ ಎಂಬ ವಿಷಯ ಗೊತ್ತಾಗಿದೆ!

ಇದನ್ನೂ ಓದಿ
Image
ಪುನೀತ್​ಗೆ ರಚಿತಾ ಅವಮಾನ ? ನಾಲಿಗೆ ಮೇಲೆ ಹಿಡಿತ ಇರಲಿ ಎಂದ ಫ್ಯಾನ್ಸ್
Image
‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ?
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ

ಗೌತಮ್ ದೀವಾನ್ ಮಗುವನ್ನು ಹುಡಕಿಕೊಂಡು ಸಾಕಷ್ಟು ಕಡೆಗಳಲ್ಲಿ ಸುತ್ತಾಡಿದ್ದಾನೆ. ಆದರೆ, ಈವರೆಗೆ ಮಗು ಸಿಕ್ಕಿರಲೇ ಇಲ್ಲ. ಈ ಕಾರಣದಿಂದಲೇ ಭೂಮಿಕಾ ಕೂಡ ಗೌತಮ್​ನ ಬಿಟ್ಟು ಹೋಗಿದ್ದಳು. ಈ ವಿಚಾರ ಆತನಿಗೆ ಸಾಕಷ್ಟು ಬೇಸರ ಇದೆ. ಮಗು ಇಲ್ಲ ಎಂಬ ವಿಚಾರವನ್ನು ಆಕೆಗೆ ಒಪ್ಪಿಕೊಳ್ಳಳು ಸಾಧ್ಯವಾಗಲೇ ಇಲ್ಲ. ಇದು ಗೌತಮ್​ಗೆ ಬೇಸರ ಮೂಡಿಸಿದೆ.

ಜೀ ಕನ್ನಡ ಪ್ರೋಮೋ

View this post on Instagram

A post shared by Zee Kannada (@zeekannada)

ಈಗ ಹೊಸ ಪ್ರೋಮೋದಲ್ಲಿ ರೋಚಕ ತಿರುವು ಎಂಬ ಪ್ರೋಮೋ ಹಂಚಿಕೊಳ್ಳಲಾಗಿದೆ. ದಂಪತಿಯೊಬ್ಬರು ಹೆಣ್ಣು ಮಗುವೊಂದನ್ನು ದತ್ತು ಪಡೆದು ಸಾಕಿರುತ್ತಾರೆ. ಆದರೆ, ಮಗು ನಮಗೆ ಬೇಡ ಎಂದು ಅವರು ದೂರ ಹೋಗುತ್ತಾರೆ. ಇದು ಗೌತಮ್​ಗೆ ಹುಟ್ಟಿದ ಹೆಣ್ಣು ಮಗಳೇ ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮತ್ತೆ ಒಂದಾಗಬೇಕು ಎಂಬುದು ಅನೇಕರ ಕೋರಿಕೆ. ಅದಕ್ಕೂ ಮೊದಲೇ ಅವನ ಮಗಳು ಸಿಗುವ ಸೂಚನೆ ಸಿಕ್ಕಿದೆ. ಮುಂದೆ ಯಾವ ರೀತಿಯ ತಿರುವುಗಳ ಜೊತೆ ಧಾರಾವಾಹಿ ಸಾಗುತ್ತದೆ ಎಂಬ ಕುತೂಹಲವೂ ಪ್ರೇಕ್ಷಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ