AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಕಳೆದು ಹೋದ ಮಗಳು ಗೌತಮ್​ಗೆ ಸಿಕ್ಕೇ ಬಿಟ್ಟಳು

ಅಮೃತಧಾರೆ ಧಾರಾವಾಹಿ ಪ್ರಸ್ತುತ TRPಯಲ್ಲಿ ನಂಬರ್ 1 ಸ್ಥಾನದಲ್ಲಿದೆ. ಈಗ ಗೌತಮ್‌ನ ಕಳೆದುಹೋದ ಮಗಳು ಮತ್ತೆ ಸಿಗುವ ಸೂಚನೆ ಸಿಕ್ಕಿದೆ. ಹೊಸ ಪ್ರೋಮೋದಲ್ಲಿ ತೋರಿಸಿದ ಮಗು ಗೌತಮ್‌ಳದ್ದಾಗಿರಬಹುದು ಎಂದು ಹೇಳಲಾಗಿದೆ. ಇದು ಗೌತಮ್ ಮತ್ತು ಭೂಮಿಕಾ ಮರುಮಿಲನಕ್ಕೆ ದಾರಿ ಮಾಡಿಕೊಡಲಿದೆಯೇ ಎಂಬ ಕುತೂಹಲ ಹೆಚ್ಚಿಸಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಕಳೆದು ಹೋದ ಮಗಳು ಗೌತಮ್​ಗೆ ಸಿಕ್ಕೇ ಬಿಟ್ಟಳು
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 06, 2025 | 7:47 AM

Share

‘ಅಮೃತಧಾರೆ’ (Amruthadhaare) ಧಾರಾವಾಹಿ ಸಾಕಷ್ಟು ತಿರುವುಗಳನ್ನು ಪಡೆದು ಸಾಗುತ್ತಾ ಇದೆ. ಈ ಧಾರಾವಾಹಿಯು ಟಿಆರ್​ಪಿಯಲ್ಲೂ ನಂಬರ್ ಒಂದನೇ ಸ್ಥಾನ ಪಡೆದುಕೊಂಡಿದೆ. ಈಗ ಧಾರಾವಾಹಿಯಲ್ಲಿ ಮತ್ತೊಂದು ರೋಚಕತೆ ಎದುರಾಗುವ ಸೂಚನೆ ಸಿಕ್ಕಿದೆ. ಕಳೆದು ಹೋಗಿದ್ದ ಗೌತಮ್ ಮಗಳು ಸಿಗುವ ಸೂಚನೆ ಸಿಕ್ಕಿದೆ. ಆ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಗಮನ ಸೆಳೆದಿದೆ.

ಗೌತಮ್ ದೀವಾನ್​ಗೆ ಇಬ್ಬರು ಮಕ್ಕಳು ಜನಿಸಿದ್ದರು. ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು. ಗಂಡು ಮಗು ಉಳಿದುಕೊಂಡರೆ, ಹೆಣ್ಣು ಮಗು ಕಳೆದು ಹೋಗಿದೆ. ಈ ಕೆಲಸ ಮಾಡಿದ್ದು ಜಯದೇವ್​ ದೀವಾನ್. ಆದರೆ, ನಂತರ ಮಗು ಎಲ್ಲಿ ಹೋಯಿತು ಎಂಬ ಬಗ್ಗೆ ಮಾಹಿತಿಯೇ ಇರಲಿಲ್ಲ. ಕೊನೆಗೂ ಈ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. ಐದು ವರ್ಷಗಳ ಬಳಿಕ ಮಗು ಎಲ್ಲಿದೆ ಎಂಬ ವಿಷಯ ಗೊತ್ತಾಗಿದೆ!

ಇದನ್ನೂ ಓದಿ
Image
ಪುನೀತ್​ಗೆ ರಚಿತಾ ಅವಮಾನ ? ನಾಲಿಗೆ ಮೇಲೆ ಹಿಡಿತ ಇರಲಿ ಎಂದ ಫ್ಯಾನ್ಸ್
Image
‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ?
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ

ಗೌತಮ್ ದೀವಾನ್ ಮಗುವನ್ನು ಹುಡಕಿಕೊಂಡು ಸಾಕಷ್ಟು ಕಡೆಗಳಲ್ಲಿ ಸುತ್ತಾಡಿದ್ದಾನೆ. ಆದರೆ, ಈವರೆಗೆ ಮಗು ಸಿಕ್ಕಿರಲೇ ಇಲ್ಲ. ಈ ಕಾರಣದಿಂದಲೇ ಭೂಮಿಕಾ ಕೂಡ ಗೌತಮ್​ನ ಬಿಟ್ಟು ಹೋಗಿದ್ದಳು. ಈ ವಿಚಾರ ಆತನಿಗೆ ಸಾಕಷ್ಟು ಬೇಸರ ಇದೆ. ಮಗು ಇಲ್ಲ ಎಂಬ ವಿಚಾರವನ್ನು ಆಕೆಗೆ ಒಪ್ಪಿಕೊಳ್ಳಳು ಸಾಧ್ಯವಾಗಲೇ ಇಲ್ಲ. ಇದು ಗೌತಮ್​ಗೆ ಬೇಸರ ಮೂಡಿಸಿದೆ.

ಜೀ ಕನ್ನಡ ಪ್ರೋಮೋ

View this post on Instagram

A post shared by Zee Kannada (@zeekannada)

ಈಗ ಹೊಸ ಪ್ರೋಮೋದಲ್ಲಿ ರೋಚಕ ತಿರುವು ಎಂಬ ಪ್ರೋಮೋ ಹಂಚಿಕೊಳ್ಳಲಾಗಿದೆ. ದಂಪತಿಯೊಬ್ಬರು ಹೆಣ್ಣು ಮಗುವೊಂದನ್ನು ದತ್ತು ಪಡೆದು ಸಾಕಿರುತ್ತಾರೆ. ಆದರೆ, ಮಗು ನಮಗೆ ಬೇಡ ಎಂದು ಅವರು ದೂರ ಹೋಗುತ್ತಾರೆ. ಇದು ಗೌತಮ್​ಗೆ ಹುಟ್ಟಿದ ಹೆಣ್ಣು ಮಗಳೇ ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮತ್ತೆ ಒಂದಾಗಬೇಕು ಎಂಬುದು ಅನೇಕರ ಕೋರಿಕೆ. ಅದಕ್ಕೂ ಮೊದಲೇ ಅವನ ಮಗಳು ಸಿಗುವ ಸೂಚನೆ ಸಿಕ್ಕಿದೆ. ಮುಂದೆ ಯಾವ ರೀತಿಯ ತಿರುವುಗಳ ಜೊತೆ ಧಾರಾವಾಹಿ ಸಾಗುತ್ತದೆ ಎಂಬ ಕುತೂಹಲವೂ ಪ್ರೇಕ್ಷಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!