AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್-ಭೂಮಿಕಾ ಬಾಳಲ್ಲಿ ಮತ್ತೆ ಮೂಡಿತು ಪ್ರೀತಿ; ಎಲ್ಲರಿಂದ ದೂರ ಹೋಗೋಣ ಎಂದ ನಾಯಕಿ

Amruthadhare Kannada serial: ‘ಅಮೃತಧಾರೆ’ ಧಾರಾವಾಹಿಯಲ್ಲಿ ಭೂಮಿಕಾ ಮನೆ ಬಿಟ್ಟು ಹೋಗಿ ಐದು ವರ್ಷಗಳ ಮೇಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ಗೌತಮ್ ಮಲತಾಯಿ ಶಕುಂತಲಾ. ಇದನ್ನು ತಿಳಿದು ಗೌತಮ್ ಕೂಡ ಬೇಸರಿಂದ ಹೊರ ಬಂದಿದ್ದಾನೆ. ತನ್ನ ಆಸ್ತಿಯನ್ನು ಮನೆಯವರ ಹೆಸರಿಗೆ ಬರೆದುಕೊಟ್ಟು ನೇರವಾಗಿ ಕ್ಯಾಬ್ ಡ್ರೈವರ್ ಆಗಿದ್ದಾನೆ. ಕ್ಯಾಬ್ ಡ್ರೈವರ್ ಆದಾಗ ಆತ ಭೂಮಿಕಾಳನ್ನು ಹುಡುಕುವ ಪ್ರಯತ್ನ ಮಾಡಿದ್ದಾನೆ.

ಗೌತಮ್-ಭೂಮಿಕಾ ಬಾಳಲ್ಲಿ ಮತ್ತೆ ಮೂಡಿತು ಪ್ರೀತಿ; ಎಲ್ಲರಿಂದ ದೂರ ಹೋಗೋಣ ಎಂದ ನಾಯಕಿ
Amruthadhare Serial
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 28, 2025 | 1:24 PM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಇಷ್ಟು ದಿನ ಕಥಾ ನಾಯಕ ಗೌತಮ್ ಹಾಗೂ ಕಥಾ ನಾಯಕಿ ಭೂಮಿಕಾ ದೂರವಾಗಿಯೇ ಇದ್ದರು. ಇವರು ಬೇರೆ ಆಗಲು ಕಾರಣ ಆಗಿದ್ದು ಶಕುಂತಲಾ. ಆದರೆ, ಈಗ ಇವರು ಮತ್ತೆ ಒಂದಾಗುತ್ತಾ ಇದ್ದಾರೆ. ಗೌತಮ್​​ನ ತಬ್ಬಿಕೊಂಡ ಭೂಮಿಕಾ ‘ನಿಮ್ಮನ್ನು ಬಿಟ್ಟು ಇರಲಾರೆನು’ ಎಂದು ಹೇಳಿದ್ದಾಳೆ. ಇವಳ ಬಾಳಲ್ಲಿ ಮತ್ತೆ ಚೈತ್ರಕಾಲ ಬಂದಿದೆ ಎಂದು ಅನೇಕರು ಹೇಳಿದ್ದಾರೆ.

ಭೂಮಿಕಾ ಮನೆ ಬಿಟ್ಟು ಹೋಗಿ ಐದು ವರ್ಷಗಳ ಮೇಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ಗೌತಮ್ ಮಲತಾಯಿ ಶಕುಂತಲಾ. ಇದನ್ನು ತಿಳಿದು ಗೌತಮ್ ಕೂಡ ಬೇಸರಿಂದ ಹೊರ ಬಂದಿದ್ದಾನೆ. ತನ್ನ ಆಸ್ತಿಯನ್ನು ಮನೆಯವರ ಹೆಸರಿಗೆ ಬರೆದುಕೊಟ್ಟು ನೇರವಾಗಿ ಕ್ಯಾಬ್ ಡ್ರೈವರ್ ಆಗಿದ್ದಾನೆ. ಕ್ಯಾಬ್ ಡ್ರೈವರ್ ಆದಾಗ ಆತ ಭೂಮಿಕಾಳನ್ನು ಹುಡುಕುವ ಪ್ರಯತ್ನ ಮಾಡಿದ್ದಾನೆ.

ಆದರೆ, ಭೂಮಿಕಾ ಅಷ್ಟು ಸುಲಭಕ್ಕೆ ಸಿಕ್ಕುವವಳಲ್ಲ. ಆದರೂ ಛಲ ಬಿಡದೇ ಭೂಮಿಕಾಳನ್ನು ಹುಡುಕಿದ್ದಾನೆ ಗೌತಮ್. ಕಥೆಯಲ್ಲಿ ಸಾಕಷ್ಟು ಸುತ್ತಾಟ ನಡೆದು ಈಗ ಗೌತಮ್ ಹಾಗೂ ಭೂಮಿಕಾ ಒಂದೇ ವಠಾರ ಸೇರಿದ್ದಾರೆ. ಒಂದು ಕಡೆ ಗೌತಮ್ ನಿಮ್ಮ ಸಹವಾಸಕ್ಕೆ ಬರೋದಿಲ್ಲ ಎಂದು ಹೇಳಿದ್ದಾನೆ. ಇದು ಭೂಮಿಕಾ ಚಿಂತೆಗೆ ಕಾರಣ ಆಗಿದೆ.

View this post on Instagram

A post shared by Zee Kannada (@zeekannada)

ಗೌತಮ್ ಇಷ್ಟು ಕಲ್ಲು ಮನಸ್ಸಿನವರಾಗಲು ಹೇಗೆ ಸಾಧ್ಯ ಎಂದು ಭೂಮಿಕಾಗೆ ಅನಿಸುತ್ತಿತ್ತು. ಮತ್ತೊಂದು ಕಡೆ ಗೌತಮ್ ಬೇಕು ಎಂದು ಅನಿಸುತ್ತಿದೆ. ಈಗ ರಿಲೀಸ್ ಆಗಿರೋ ಪ್ರೋಮೋದಲ್ಲಿ ಭೂಮಿಕಾ ಹಾಗೂ ಗೌತಮ್ ಒಂದಾಗಿದ್ದಾರೆ. ‘ನಿಮ್ಮನ್ನುನ ಪ್ರೀತಿ ಮಾಡುತ್ತೇನೆ’ ಎಂದು ಭೂಮಿಕಾ ಹೇಳಿದ್ದಾಳೆ. ‘ನಿಮ್ಮನ್ನು ಬಿಟ್ಟು ಇರಲು ಸಾಧ್ಯವೇ ಇಲ್ಲ ಎಂದು, ಗೌತಮ್​ನ ತಬ್ಬಿ ಹೇಳಿದ್ದಾಳೆ. ಎಲ್ಲರನ್ನೂ ಬಿಟ್ಟು ದೂರ ಎಲ್ಲಾದರೂ ಹೋಗಿ ಜೀವಿಸೋಣ ಎಂದು ಭೂಮಿಕಾ ಹೇಳಿದ್ದಾಳೆ. ಇದರಿಂದ ಇವರ ಮಧ್ಯೆ ಮತ್ತೆ ಪ್ರೀತಿ ಮೂಡಿರೋದು ಸ್ಪಷ್ಟವಾಗಿದೆ.

‘ಅಮೃತಧಾರೆ’ ಧಾರಾವಾಹಿಯ ಹೊಸ ಕಥೆ ಜನರಿಗೆ ಇಷ್ಟ ಆಗುತ್ತಿದೆ. ಶ್ರೀಮಂತ ವ್ಯಕ್ತಿಯಾಗಿದ್ದ ಗೌತಮ್ ಸರಳ ಜೀವ ನಡೆಸುತ್ತಿರುವುದು ಅನೇಕರಿಗೆ ಖುಷಿ ನೀಡಿದೆ. ಮತ್ತೊಂದು ಕಡೆ ಗೌತಮ್​ಗಾಗಿ ಆತನ ಸಹೋದರ ಜಯದೇವ್ ಹುಡುಕಾಟ ಆರಂಭಿಸಿದ್ದಾನೆ. ಈ ಕಥೆ ಕೂಡ ಮತ್ತೊಂದು ಕಡೆಯಲ್ಲಿ ಸಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು