AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್-ಭೂಮಿಕಾ ಬಾಳಲ್ಲಿ ಮತ್ತೆ ಮೂಡಿತು ಪ್ರೀತಿ; ಎಲ್ಲರಿಂದ ದೂರ ಹೋಗೋಣ ಎಂದ ನಾಯಕಿ

Amruthadhare Kannada serial: ‘ಅಮೃತಧಾರೆ’ ಧಾರಾವಾಹಿಯಲ್ಲಿ ಭೂಮಿಕಾ ಮನೆ ಬಿಟ್ಟು ಹೋಗಿ ಐದು ವರ್ಷಗಳ ಮೇಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ಗೌತಮ್ ಮಲತಾಯಿ ಶಕುಂತಲಾ. ಇದನ್ನು ತಿಳಿದು ಗೌತಮ್ ಕೂಡ ಬೇಸರಿಂದ ಹೊರ ಬಂದಿದ್ದಾನೆ. ತನ್ನ ಆಸ್ತಿಯನ್ನು ಮನೆಯವರ ಹೆಸರಿಗೆ ಬರೆದುಕೊಟ್ಟು ನೇರವಾಗಿ ಕ್ಯಾಬ್ ಡ್ರೈವರ್ ಆಗಿದ್ದಾನೆ. ಕ್ಯಾಬ್ ಡ್ರೈವರ್ ಆದಾಗ ಆತ ಭೂಮಿಕಾಳನ್ನು ಹುಡುಕುವ ಪ್ರಯತ್ನ ಮಾಡಿದ್ದಾನೆ.

ಗೌತಮ್-ಭೂಮಿಕಾ ಬಾಳಲ್ಲಿ ಮತ್ತೆ ಮೂಡಿತು ಪ್ರೀತಿ; ಎಲ್ಲರಿಂದ ದೂರ ಹೋಗೋಣ ಎಂದ ನಾಯಕಿ
Amruthadhare Serial
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 28, 2025 | 1:24 PM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಇಷ್ಟು ದಿನ ಕಥಾ ನಾಯಕ ಗೌತಮ್ ಹಾಗೂ ಕಥಾ ನಾಯಕಿ ಭೂಮಿಕಾ ದೂರವಾಗಿಯೇ ಇದ್ದರು. ಇವರು ಬೇರೆ ಆಗಲು ಕಾರಣ ಆಗಿದ್ದು ಶಕುಂತಲಾ. ಆದರೆ, ಈಗ ಇವರು ಮತ್ತೆ ಒಂದಾಗುತ್ತಾ ಇದ್ದಾರೆ. ಗೌತಮ್​​ನ ತಬ್ಬಿಕೊಂಡ ಭೂಮಿಕಾ ‘ನಿಮ್ಮನ್ನು ಬಿಟ್ಟು ಇರಲಾರೆನು’ ಎಂದು ಹೇಳಿದ್ದಾಳೆ. ಇವಳ ಬಾಳಲ್ಲಿ ಮತ್ತೆ ಚೈತ್ರಕಾಲ ಬಂದಿದೆ ಎಂದು ಅನೇಕರು ಹೇಳಿದ್ದಾರೆ.

ಭೂಮಿಕಾ ಮನೆ ಬಿಟ್ಟು ಹೋಗಿ ಐದು ವರ್ಷಗಳ ಮೇಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ಗೌತಮ್ ಮಲತಾಯಿ ಶಕುಂತಲಾ. ಇದನ್ನು ತಿಳಿದು ಗೌತಮ್ ಕೂಡ ಬೇಸರಿಂದ ಹೊರ ಬಂದಿದ್ದಾನೆ. ತನ್ನ ಆಸ್ತಿಯನ್ನು ಮನೆಯವರ ಹೆಸರಿಗೆ ಬರೆದುಕೊಟ್ಟು ನೇರವಾಗಿ ಕ್ಯಾಬ್ ಡ್ರೈವರ್ ಆಗಿದ್ದಾನೆ. ಕ್ಯಾಬ್ ಡ್ರೈವರ್ ಆದಾಗ ಆತ ಭೂಮಿಕಾಳನ್ನು ಹುಡುಕುವ ಪ್ರಯತ್ನ ಮಾಡಿದ್ದಾನೆ.

ಆದರೆ, ಭೂಮಿಕಾ ಅಷ್ಟು ಸುಲಭಕ್ಕೆ ಸಿಕ್ಕುವವಳಲ್ಲ. ಆದರೂ ಛಲ ಬಿಡದೇ ಭೂಮಿಕಾಳನ್ನು ಹುಡುಕಿದ್ದಾನೆ ಗೌತಮ್. ಕಥೆಯಲ್ಲಿ ಸಾಕಷ್ಟು ಸುತ್ತಾಟ ನಡೆದು ಈಗ ಗೌತಮ್ ಹಾಗೂ ಭೂಮಿಕಾ ಒಂದೇ ವಠಾರ ಸೇರಿದ್ದಾರೆ. ಒಂದು ಕಡೆ ಗೌತಮ್ ನಿಮ್ಮ ಸಹವಾಸಕ್ಕೆ ಬರೋದಿಲ್ಲ ಎಂದು ಹೇಳಿದ್ದಾನೆ. ಇದು ಭೂಮಿಕಾ ಚಿಂತೆಗೆ ಕಾರಣ ಆಗಿದೆ.

View this post on Instagram

A post shared by Zee Kannada (@zeekannada)

ಗೌತಮ್ ಇಷ್ಟು ಕಲ್ಲು ಮನಸ್ಸಿನವರಾಗಲು ಹೇಗೆ ಸಾಧ್ಯ ಎಂದು ಭೂಮಿಕಾಗೆ ಅನಿಸುತ್ತಿತ್ತು. ಮತ್ತೊಂದು ಕಡೆ ಗೌತಮ್ ಬೇಕು ಎಂದು ಅನಿಸುತ್ತಿದೆ. ಈಗ ರಿಲೀಸ್ ಆಗಿರೋ ಪ್ರೋಮೋದಲ್ಲಿ ಭೂಮಿಕಾ ಹಾಗೂ ಗೌತಮ್ ಒಂದಾಗಿದ್ದಾರೆ. ‘ನಿಮ್ಮನ್ನುನ ಪ್ರೀತಿ ಮಾಡುತ್ತೇನೆ’ ಎಂದು ಭೂಮಿಕಾ ಹೇಳಿದ್ದಾಳೆ. ‘ನಿಮ್ಮನ್ನು ಬಿಟ್ಟು ಇರಲು ಸಾಧ್ಯವೇ ಇಲ್ಲ ಎಂದು, ಗೌತಮ್​ನ ತಬ್ಬಿ ಹೇಳಿದ್ದಾಳೆ. ಎಲ್ಲರನ್ನೂ ಬಿಟ್ಟು ದೂರ ಎಲ್ಲಾದರೂ ಹೋಗಿ ಜೀವಿಸೋಣ ಎಂದು ಭೂಮಿಕಾ ಹೇಳಿದ್ದಾಳೆ. ಇದರಿಂದ ಇವರ ಮಧ್ಯೆ ಮತ್ತೆ ಪ್ರೀತಿ ಮೂಡಿರೋದು ಸ್ಪಷ್ಟವಾಗಿದೆ.

‘ಅಮೃತಧಾರೆ’ ಧಾರಾವಾಹಿಯ ಹೊಸ ಕಥೆ ಜನರಿಗೆ ಇಷ್ಟ ಆಗುತ್ತಿದೆ. ಶ್ರೀಮಂತ ವ್ಯಕ್ತಿಯಾಗಿದ್ದ ಗೌತಮ್ ಸರಳ ಜೀವ ನಡೆಸುತ್ತಿರುವುದು ಅನೇಕರಿಗೆ ಖುಷಿ ನೀಡಿದೆ. ಮತ್ತೊಂದು ಕಡೆ ಗೌತಮ್​ಗಾಗಿ ಆತನ ಸಹೋದರ ಜಯದೇವ್ ಹುಡುಕಾಟ ಆರಂಭಿಸಿದ್ದಾನೆ. ಈ ಕಥೆ ಕೂಡ ಮತ್ತೊಂದು ಕಡೆಯಲ್ಲಿ ಸಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ