AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ-ತಂಗಿ ಆಗಿ ರಾಜೇಶ್ ನಟರಂಗ-ಛಾಯಾ ಸಿಂಗ್ ನಟಿಸಿದ್ರು ಅನ್ನೋ ವಿಚಾರ ನಿಮಗೆ ಗೊತ್ತೇ?

ರಾಜೇಶ್ ನಟರಂಗ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ತಮ್ಮ ಹಾಗೂ ಛಾಯಾ ಸಿಂಗ್ ನಡುವಿನ ಒಡನಾಟದ ಬಗ್ಗೆ ಮಾತನಾಡುವಾಗ ಅವರು ಕೆಲ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಅಣ್ಣ-ತಂಗಿ ಆಗಿ ರಾಜೇಶ್ ನಟರಂಗ-ಛಾಯಾ ಸಿಂಗ್ ನಟಿಸಿದ್ರು ಅನ್ನೋ ವಿಚಾರ ನಿಮಗೆ ಗೊತ್ತೇ?
Rajesh Natarang
ರಾಜೇಶ್ ದುಗ್ಗುಮನೆ
|

Updated on: Jun 03, 2023 | 9:02 AM

Share

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ (Chaya Singh) ಅಭಿನಯದ ‘ಅಮೃತಧಾರೆ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈಗಾಗಲೇ ಐದು ಎಪಿಸೋಡ್​ಗಳು ಪ್ರಸಾರ ಕಂಡಿದ್ದು, ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ರಾಜೇಶ್ ನಟರಂಗ (Rajesh Nataranga) ಅವರು ಗೌತಮ್ ದೀವಾನ್ ಆಗಿ ಕಾಣಿಸಿಕೊಂಡರೆ ಛಾಯಾ ಸಿಂಗ್ ಅವರು ಭೂಮಿಕಾ ಸದಾಶಿವ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಇವರ ಕೆಮಿಸ್ಟ್ರಿ ಕೆಲಸ ಮಾಡಿದೆ. ಈ ಮೊದಲು ಇಬ್ಬರೂ ಅಣ್ಣ-ತಂಗಿ ಪಾತ್ರದಲ್ಲಿ ಕಾಣಿಸಿಕೊಡಿದ್ದರು ಅನ್ನೋದು ವಿಶೇಷ. ಅಂದಹಾಗೆ, ಇದು ಇಂದು ನಿನ್ನೆಯ ಮಾತಲ್ಲ. ಬರೋಬ್ಬರಿ 23 ವರ್ಷಗಳ ಹಿಂದಿನ ಮಾತು.

ರಾಜೇಶ್ ನಟರಂಗ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ಹಲವು ಧಾರಾವಾಹಿಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ತಮ್ಮ ಹಾಗೂ ಛಾಯಾ ಸಿಂಗ್ ನಡುವಿನ ಫ್ರೆಂಡ್​ಶಿಪ್ ಬಗ್ಗೆ ಮಾತನಾಡುವಾಗ ಅವರು ಕೆಲ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಇವರದ್ದು 23 ವರ್ಷಗಳ ಪರಿಚಯ ಅನ್ನೋದು ವಿಶೇಷ. ಈ ಕುರಿತು ರಾಜೇಶ್ ನಟರಂಗ ಅವರು ಮಾತನಾಡಿದ್ದಾರೆ.

‘ಇಟಿವಿ ಕನ್ನಡ ಆಗತಾನೇ (2000ನೇ ಇಸ್ವಿ) ಆರಂಭ ಆಗಿತ್ತು. ಆಗ ಮಧ್ಯಾಹ್ನ ಒಂದು ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿಯಲ್ಲಿ ನಾನು, ವೈಶಾಲಿ ಕಾಸರವಳ್ಳಿ, ದತ್ತಣ್ಣ, ಛಾಯಾ ಮೊದಲಾದವರು ನಟಿಸಿದ್ದೆವು. ಛಾಯಾ ನನ್ನ ತಂಗಿ ಪಾತ್ರ ಮಾಡಿದ್ದರು. ಆ ಬಳಿಕ ಅವರು ಹಲವು ಸಿನಿಮಾ ಮಾಡಿದರು. ಅವರು ಓರ್ವ ಅದ್ಭುತ ನಟಿ’ ಎಂದಿದ್ದಾರೆ ರಾಜೇಶ್ ನಟರಂಗ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ಅಮೃತಧಾರೆ’ ಧಾರಾವಾಹಿ ಮದುವೆ, ಸಂಬಂಧಗಳ ಕುರಿತು ಇದೆ. ಗೌತಮ್ ಆಗರ್ಭ ಶ್ರೀಮಂತ. ಆತನಿಗೆ ವಯಸ್ಸು 45 ದಾಟಿದರೂ ಇನ್ನೂ ಮದುವೆ ಆಗಿಲ್ಲ. ನಾಯಕಿ ಭೂಮಿಕಾಗೆ ಈಗ 35 ವರ್ಷ ವಯಸ್ಸು. ಆಕೆಗೂ ಮದುವೆ ಆಗಿಲ್ಲ. ಆಕೆಯೂ ಸಂಗಾತಿಯ ಹುಡುಕಾಟದಲ್ಲಿದ್ದಾಳೆ. ಧಾರಾವಾಹಿಯಲ್ಲಿ ಈಗತಾನೇ ನಾಯಕ, ನಾಯಕಿ ಮಧ್ಯೆ ಪರಿಚಯ ಆಗುತ್ತಿದೆ. ನಾಯಕ-ನಾಯಕಿ ಮಧ್ಯೆ ಆರಂಭದಲ್ಲೇ ದ್ವೇಷ ಹುಟ್ಟಿಕೊಂಡಿದೆ. ನಂತರ ಇದು ಪ್ರೀತಿಗೆ ತಿರುಗುತ್ತದೆ ಅನ್ನೋದರಲ್ಲಿ ಯಾವುದೇ ಅನುಮಾನ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ