AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್​ನ ಹೊರಹಾಕಿ ಹಾಯಾಗಿದ್ದ ಜಯದೇವ್​​ಗೆ ಬ್ಯಾಂಕ್​ನಿಂದ ಶಾಕ್; ಇದನ್ನು ಯಾರೂ ಊಹಿಸಿರಲಿಲ್ಲ

ಅಮೃತಧಾರೆ ಧಾರಾವಾಹಿಯಲ್ಲಿ ಐದು ವರ್ಷಗಳ ನಂತರದ ತಿರುವು ಕಥಾವಸ್ತುವಿಗೆ ಹೊಸ ವಿನ್ಯಾಸ ತಂದಿದೆ. ಜಯದೇವ್ ಅವರು 600 ಕೋಟಿ ರೂಪಾಯಿ ಸಾಲದ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಾಲದಿಂದಾಗಿ ಅವರ ಎಲ್ಲಾ ಆಸ್ತಿ ಮಾರಾಟವಾಗುವ ಸಂಭವವಿದೆ. ಇದರಿಂದ ಜಯದೇವ್ ಮತ್ತು ಅವರ ತಾಯಿ ಶಕುಂತಲ ಬೀದಿಗೆ ಬೀಳುವ ಅಪಾಯವಿದೆ.

ಗೌತಮ್​ನ ಹೊರಹಾಕಿ ಹಾಯಾಗಿದ್ದ ಜಯದೇವ್​​ಗೆ ಬ್ಯಾಂಕ್​ನಿಂದ ಶಾಕ್; ಇದನ್ನು ಯಾರೂ ಊಹಿಸಿರಲಿಲ್ಲ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 15, 2025 | 10:07 AM

Share

‘ಅಮೃತಧಾರೆ’ ಧಾರಾವಾಹಿ (Amruthadhaare) ಈಗ ಹೊಸ ತಿರುವನ್ನು ಪಡೆದುಕೊಂಡಿದ್ದು ಗೊತ್ತೇ ಇದೆ. ಧಾರಾವಾಹಿಯ ಕಥೆ ನೇರವಾಗಿ ಐದು ವರ್ಷ ಮುಂದಕ್ಕೆ ಹೋಗಿದೆ. ಈ ಎಲ್ಲಾ ಘಟನೆ ನಡೆಯುವ ಮೊದಲು ಭೂಮಿಕಾ ಮಗನನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿದ್ದಳು. ಆ ಬಳಿಕ ಮನೆಯನ್ನು ಮಲತಾಯಿ ಹಾಗೂ ಜಯದೇವ್ ಹೆಸರಿಗೆ ಬರೆದಿಟ್ಟು ಹೊರಟೇ ಹೋಗಿದ್ದ. ಈಗ ಜಯದೇವ್​ಗೆ ಶಾಕ್ ಸಿಕ್ಕಿದೆ.

ಜಯದೇವ್ ಇಡೀ ಆಸ್ತಿ ಅನುಭವಿಸುವ ಕನಸು ಕಂಡಿದ್ದ. ಇದಕ್ಕೆ ಆತನ ತಾಯಿ ಶಕುಂತಲ ಕೂಡ ಸಾಥ್ ನೀಡಿದ್ದಳು. ಇದು ಯಶಸ್ಸು ಕಂಡಿತ್ತು. ಗೌತಮ್ ಎಲ್ಲಾ ಆಸ್ತಿಯನ್ನು ಇವರ ಹೆಸರಿಗೆ ಬರೆದುಕೊಟ್ಟು ಮನೆ ಬಿಟ್ಟು ಹೋಗಿದ್ದ. ಎಲ್ಲಾ ಆಸ್ತಿಯನ್ನು ಇವರು ಎಂಜಾಯ್ ಮಾಡುತ್ತಿದ್ದರು. ಆದರೆ, ಈಗ ಎಲ್ಲಾ ಉಲ್ಟ್ ಆಗಿದೆ.

ಬ್ಯಾಂಕ್​ನವರು ಬಂದು ಜಯದೇವ್​ಗೆ ನೋಟಿಸ್ ನೀಡಿದ್ದಾರೆ. ನಿಮ್ಮ ಕಂಪನಿಯವರು ನಮ್ಮಿಂದ 600 ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದರು. ಅದನ್ನು ಹಿಂದಿರುಗಿಸಬೇಕು ಎಂದು ಹೇಳಿದ್ದಾರೆ. ಇದು ಜಯದೇವ್​ಗೆ ಶಾಕ್ ಮೂಡಿಸಿದೆ. ಇಷ್ಟು ದಿನ ಪಬ್ ಎಂದು ಎಂಜಾಯ್ ಮಾಡುತ್ತಿದ್ದ ಆತನಿಗೆ ಈ ಬೆಳವಣಿಗೆಯನ್ನು ಸಹಿಸಿಕೊಳ್ಳಲು ಸಾಧ್ಯ ಆಗುತ್ತಿಲ್ಲ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ

ಇದನ್ನೂ ಓದಿ: ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?

ಈಗ 600 ಕೋಟಿ ರೂಪಾಯಿ ಸಾಲ ಹಿಂದಿರುಗಿಸಬೇಕು ಎಂದರೆ ಎಲ್ಲಾ ಆಸ್ತಿಯನ್ನು ಮಾರಬೇಕಾದ ಪರಿಸ್ಥಿತಿ ಬರಬಹುದು. ಹಾಗಾದಲ್ಲಿ ಇವರು ಏನು ಅಂದುಕೊಂಡಿದ್ದರೋ ಅದು ಯಶಸ್ಸು ಕಾಣುವುದಿಲ್ಲ. ಅವರು ಬೀದಿಗೆ ಬರೋ ಸಾಧ್ಯತೆ ಇದೆ. ಈ ವೇಳೆ ಮತ್ತೆ ಗೌತಮ್ ಕಾಲು ಹಿಡಿದುಕೊಳ್ಳೋ ಪರಿಸ್ಥಿತಿ ಬರಬೇಕಾಗಿ ಬರಹುದು. ಈಗಾಗಲೇ ಜಯದೇವ್ ಎರಡನೇ ಪತ್ನಿಗೆ ಅಸಮಾಧಾನ ಮೂಡಿದೆ. ತನಗೆ ಅಧಿಕಾರ ಸಿಗುತ್ತಿಲ್ಲ ಎಂದು ಆಕೆ ಬೇಸರ ಮಾಡಿಕೊಂಡಿದ್ದಾಳೆ. ಆಕೆಗೆ ಈ ವಿಚಾರ ಗೊತ್ತಾದರೆ ನೇರವಾಗಿ ಮನೆ ಬಿಟ್ಟು ಹೋಗುವ ಸಾಧ್ಯತೆ ಇದೆ.

ಗೌತಮ್ ಹಾಗೂ ಭೂಮಿಕಾ ಈಗ ಒಂದೇ ಊರು ಸೇರಿದ್ದಾಳೆ. ಇಬ್ಬರೂ ಭೇಟಿ ಆಗುವ ಸನಿಹಕ್ಕೆ ಬಂದಿದ್ದಾಳೆ. ಇವರ ಮತ್ತೆ ಭೇಟಿ ಆಗಲಿ ಎಂದು ಫ್ಯಾನ್ಸ್ ಕೂಡ ಬಯಸುತ್ತಿದ್ದಾರೆ. ಇವರ ಭೇಟಿ ಯಾವಾಗ ಆಗುತ್ತದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ