AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ಅಮೃತಧಾರೆ’ ಧಾರಾವಾಹಿ ಪ್ರೋಮೋ ಹಂಚಿಕೊಂಡಾಗ ಇದು ‘ಜೊತೆ ಜೊತೆಯಲಿ’ ರೀತೀಯ ಕಥೆ ಎಂದು ಪ್ರೇಕ್ಷಕರಿಗೆ ಅನಿಸಿತ್ತು. ಆದರೆ, ಈಗ ಆ ಭಿಪ್ರಾಯ ಬದಲಾಗಿದೆ.

‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ
ಅಮೃತಧಾರೆ ತಂಡ-ಜೊತೆ ಜೊತೆಯಲಿ ತಂಡ
ರಾಜೇಶ್ ದುಗ್ಗುಮನೆ
|

Updated on: Jun 03, 2023 | 6:30 AM

Share

ಜೀ ಕನ್ನಡ ವಾಹಿನಿಯಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial) ಪ್ರಸಾರ ಕಂಡಿತ್ತು. ಮೇಘಾ ಶೆಟ್ಟಿ, ಅನಿರುದ್ಧ್​ ಜತ್ಕರ್ ಆರಂಭದಲ್ಲಿ ಈ ಧಾರಾವಾಹಿಯಲ್ಲಿ ನಟಿಸಿದರು. ಬಳಿಕ ಅನಿರುದ್ಧ್ ಬದಲು ಹರೀಶ್ ರಾಜ್ ಈ ಪಾತ್ರ ಮಾಡಿದರು. ಈ ಧಾರಾವಾಹಿಯಲ್ಲಿ ವಯಸ್ಸಿನ ಅಂತರದ ಕಥೆ ಇತ್ತು. ಈ ಧಾರಾವಾಹಿ ಪೂರ್ಣಗೊಳ್ಳುತ್ತಿದ್ದಂತೆ ‘ಅಮೃತಧಾರೆ’ ಧಾರಾವಾಹಿ (Amruthadhare)  ಪ್ರಸಾರ ಕಾಣುತ್ತಿದೆ. ಇದನ್ನು ಅನೇಕರು ‘ಜೊತೆ ಜೊತೆಯಲಿ’ ಧಾರಾವಾಹಿಗೆ ಹೋಲಿಕೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದೆ. ಈ ಬಗ್ಗೆ ರಾಜೇಶ್ ನಟರಂಗ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹೀರೋ ಹಾಗೂ ಹೀರೋಯಿನ್ ಮಧ್ಯೆ ವಯಸ್ಸಿನ ಅಂತರ ಇತ್ತು. ಈ ಕಥೆ ಜನರಿಗೆ ಇಷ್ಟ ಆಗಿತ್ತು. ‘ಅಮೃತಧಾರೆ’ ಧಾರಾವಾಹಿ ಪ್ರೋಮೋ ಹಂಚಿಕೊಂಡಾಗ ಇದು ‘ಜೊತೆ ಜೊತೆಯಲಿ’ ರೀತಿಯ ಕಥೆ ಎಂದು ಪ್ರೇಕ್ಷಕರಿಗೆ ಅನಿಸಿತ್ತು. ಆದರೆ, ಈಗ ಆ ಅಭಿಪ್ರಾಯ ಬದಲಾಗಿದೆ. ಇದು ಸಂಪೂರ್ಣವಾಗಿ ಮದುವೆ ಹಾಗೂ ಸಂಬಂಧಗಳ ಬಗ್ಗೆ ಇರುವ ಧಾರಾವಾಹಿ ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ.

ಈ ಬಗ್ಗೆ ರಾಜೇಶ್ ನಟರಂಗ ಮಾತನಾಡಿದ್ದಾರೆ. ‘ಜೊತೆ ಜೊತೆಯಲಿ ಧಾರಾವಾಹಿಗೆ ನಮ್ಮ ಧಾರಾವಾಹಿ ಹೋಲಿಕೆ ಮಾಡಿದ್ದು ನನ್ನ ಗಮನಕ್ಕೂ ಬಂದಿದೆ. ಪ್ರಮೋಷನಲ್ ವಿಡಿಯೋ ಹಾಕಿದಾಗ ಈ ರೀತಿಯ ಮೆಸೇಜ್​ಗಳು, ಕಮೆಂಟ್​ಗಳು ನನಗೂ ಬಂದಿತ್ತು. ಅದು ಮಧ್ಯ ವಯಸ್ಕ ಪುರುಷ ಹಾಗೂ ಸಣ್ಣ ವಯಸ್ಸಿನ ಯುವತಿಯ ನಡುವಿನ ಕಥೆ. ಆದರೆ, ನಮ್ಮ ಧಾರಾವಾಹಿಯ ಆಯಾಮ ಬೇರೆ’ ಎಂದಿದ್ದಾರೆ ರಾಜೇಶ್ ನಟರಂಗ.

ಇದನ್ನೂ ಓದಿ: ‘ನಿಮ್ಮ ಗುಣಗಳನ್ನೂ ಒಪ್ಪುವ ಹೃದಯಗಳಿರುತ್ತವೆ’; ‘ಅಮೃತಧಾರೆ’ ಕಥಾವಸ್ತು ಬಗ್ಗೆ ರಾಜೇಶ್ ನಟರಂಗ ಮಾತು

‘ಮದುವೆ, ಸಂಬಂಧ ಅನ್ನೋದು ನಮ್ಮ ಕಥೆಯ ಜೀವಾಳ. ಸೋಶಿಯಲ್ ಮೀಡಿಯಾದಲ್ಲಿ ನಾವು ಅದು ಹಾಗಲ್ಲ ಹೀಗೆ ಎಂಬುದನ್ನು ಹೇಳಿ ಪ್ರಯೋಜನ ಇಲ್ಲ. ಅವರ ದೃಷ್ಟಿಕೋನವೇ ಬದಲಾಗುತ್ತದೆ. ಈಗ ಅದೇ ರೀತಿಯಲ್ಲಿ ಬದಲಾಗಿದೆ’ ಎನ್ನುತ್ತಾರೆ ರಾಜೇಶ್ ನಟರಂಗ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ