Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ಅಮೃತಧಾರೆ’ ಧಾರಾವಾಹಿ ಪ್ರೋಮೋ ಹಂಚಿಕೊಂಡಾಗ ಇದು ‘ಜೊತೆ ಜೊತೆಯಲಿ’ ರೀತೀಯ ಕಥೆ ಎಂದು ಪ್ರೇಕ್ಷಕರಿಗೆ ಅನಿಸಿತ್ತು. ಆದರೆ, ಈಗ ಆ ಭಿಪ್ರಾಯ ಬದಲಾಗಿದೆ.

‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ
ಅಮೃತಧಾರೆ ತಂಡ-ಜೊತೆ ಜೊತೆಯಲಿ ತಂಡ
Follow us
ರಾಜೇಶ್ ದುಗ್ಗುಮನೆ
|

Updated on: Jun 03, 2023 | 6:30 AM

ಜೀ ಕನ್ನಡ ವಾಹಿನಿಯಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial) ಪ್ರಸಾರ ಕಂಡಿತ್ತು. ಮೇಘಾ ಶೆಟ್ಟಿ, ಅನಿರುದ್ಧ್​ ಜತ್ಕರ್ ಆರಂಭದಲ್ಲಿ ಈ ಧಾರಾವಾಹಿಯಲ್ಲಿ ನಟಿಸಿದರು. ಬಳಿಕ ಅನಿರುದ್ಧ್ ಬದಲು ಹರೀಶ್ ರಾಜ್ ಈ ಪಾತ್ರ ಮಾಡಿದರು. ಈ ಧಾರಾವಾಹಿಯಲ್ಲಿ ವಯಸ್ಸಿನ ಅಂತರದ ಕಥೆ ಇತ್ತು. ಈ ಧಾರಾವಾಹಿ ಪೂರ್ಣಗೊಳ್ಳುತ್ತಿದ್ದಂತೆ ‘ಅಮೃತಧಾರೆ’ ಧಾರಾವಾಹಿ (Amruthadhare)  ಪ್ರಸಾರ ಕಾಣುತ್ತಿದೆ. ಇದನ್ನು ಅನೇಕರು ‘ಜೊತೆ ಜೊತೆಯಲಿ’ ಧಾರಾವಾಹಿಗೆ ಹೋಲಿಕೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದೆ. ಈ ಬಗ್ಗೆ ರಾಜೇಶ್ ನಟರಂಗ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹೀರೋ ಹಾಗೂ ಹೀರೋಯಿನ್ ಮಧ್ಯೆ ವಯಸ್ಸಿನ ಅಂತರ ಇತ್ತು. ಈ ಕಥೆ ಜನರಿಗೆ ಇಷ್ಟ ಆಗಿತ್ತು. ‘ಅಮೃತಧಾರೆ’ ಧಾರಾವಾಹಿ ಪ್ರೋಮೋ ಹಂಚಿಕೊಂಡಾಗ ಇದು ‘ಜೊತೆ ಜೊತೆಯಲಿ’ ರೀತಿಯ ಕಥೆ ಎಂದು ಪ್ರೇಕ್ಷಕರಿಗೆ ಅನಿಸಿತ್ತು. ಆದರೆ, ಈಗ ಆ ಅಭಿಪ್ರಾಯ ಬದಲಾಗಿದೆ. ಇದು ಸಂಪೂರ್ಣವಾಗಿ ಮದುವೆ ಹಾಗೂ ಸಂಬಂಧಗಳ ಬಗ್ಗೆ ಇರುವ ಧಾರಾವಾಹಿ ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ.

ಈ ಬಗ್ಗೆ ರಾಜೇಶ್ ನಟರಂಗ ಮಾತನಾಡಿದ್ದಾರೆ. ‘ಜೊತೆ ಜೊತೆಯಲಿ ಧಾರಾವಾಹಿಗೆ ನಮ್ಮ ಧಾರಾವಾಹಿ ಹೋಲಿಕೆ ಮಾಡಿದ್ದು ನನ್ನ ಗಮನಕ್ಕೂ ಬಂದಿದೆ. ಪ್ರಮೋಷನಲ್ ವಿಡಿಯೋ ಹಾಕಿದಾಗ ಈ ರೀತಿಯ ಮೆಸೇಜ್​ಗಳು, ಕಮೆಂಟ್​ಗಳು ನನಗೂ ಬಂದಿತ್ತು. ಅದು ಮಧ್ಯ ವಯಸ್ಕ ಪುರುಷ ಹಾಗೂ ಸಣ್ಣ ವಯಸ್ಸಿನ ಯುವತಿಯ ನಡುವಿನ ಕಥೆ. ಆದರೆ, ನಮ್ಮ ಧಾರಾವಾಹಿಯ ಆಯಾಮ ಬೇರೆ’ ಎಂದಿದ್ದಾರೆ ರಾಜೇಶ್ ನಟರಂಗ.

ಇದನ್ನೂ ಓದಿ: ‘ನಿಮ್ಮ ಗುಣಗಳನ್ನೂ ಒಪ್ಪುವ ಹೃದಯಗಳಿರುತ್ತವೆ’; ‘ಅಮೃತಧಾರೆ’ ಕಥಾವಸ್ತು ಬಗ್ಗೆ ರಾಜೇಶ್ ನಟರಂಗ ಮಾತು

‘ಮದುವೆ, ಸಂಬಂಧ ಅನ್ನೋದು ನಮ್ಮ ಕಥೆಯ ಜೀವಾಳ. ಸೋಶಿಯಲ್ ಮೀಡಿಯಾದಲ್ಲಿ ನಾವು ಅದು ಹಾಗಲ್ಲ ಹೀಗೆ ಎಂಬುದನ್ನು ಹೇಳಿ ಪ್ರಯೋಜನ ಇಲ್ಲ. ಅವರ ದೃಷ್ಟಿಕೋನವೇ ಬದಲಾಗುತ್ತದೆ. ಈಗ ಅದೇ ರೀತಿಯಲ್ಲಿ ಬದಲಾಗಿದೆ’ ಎನ್ನುತ್ತಾರೆ ರಾಜೇಶ್ ನಟರಂಗ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ