AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಅಬ್ಬರಕ್ಕೆ ಟಿಆರ್​ಪಿ ಮೀಟರ್ ಶೇಕ್; ಉಳಿದ ಧಾರಾವಾಹಿಗಳ ಕಥೆ ಏನು?

Kannada Serials TRP: ಅಮೃತಧಾರೆ ಧಾರಾವಾಹಿ 33ನೇ ವಾರದ TRP ರೇಟಿಂಗ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ಯಶಸ್ಸು ಕಂಡಿದೆ. ಕಥಾವಸ್ತುವಿನಲ್ಲಿನ ಟ್ವಿಸ್ಟ್‌ಗಳು ಮತ್ತು ಬೆಳವಣಿಗೆಗಳು ವೀಕ್ಷಕರನ್ನು ಆಕರ್ಷಿಸಿವೆ. ಕರ್ಣ, ಅಣ್ಣಯ್ಯ, ಲಕ್ಷ್ಮೀ ನಿವಾಸ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ಅಮೃತಧಾರೆ’ ಅಬ್ಬರಕ್ಕೆ ಟಿಆರ್​ಪಿ ಮೀಟರ್ ಶೇಕ್; ಉಳಿದ ಧಾರಾವಾಹಿಗಳ ಕಥೆ ಏನು?
ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on:Aug 21, 2025 | 2:56 PM

Share

‘ಅಮೃತಧಾರೆ’ (Amruthadhaare) ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡುವ ಕೆಲಸ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆಯಬಹುದು ಎಂದು ಊಹಿಸಲಾಗಿತ್ತು. ಈಗ ಅದು ನಿಜವಾಗಿದೆ. ಈ ಧಾರಾವಾಹಿಗೆ ಮೊದಲಿಗಿಂತ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ. ಮುಂದಿನ ಕೆಲವು ವಾರ ಧಾರಾವಾಹಿಯಲ್ಲಿನ ಕಥೆಯ ತೀವ್ರತೆ ಇದೇ ರೀತಿ ಇದ್ದರೆ ಟಿಆರ್​ಪಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಹಾಗಾದರೆ 33ನೇ ವಾರದ ಟಿಆರ್​ಪಿಯಲ್ಲಿ ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿ ಇದೆ ಎಂಬ ಬಗ್ಗೆ ಇಲ್ಲಿದೆ ವಿವರ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಕಥಾ ನಾಯಕ ಗೌತಮ್ ಮಗು ಕಾಣೆ ಆಗಿದ್ದು, ಭೂಮಿಕಾಗೆ ಶಕುಂತಲಾ ಕೆಟ್ಟವಳು ಎಂಬ ವಿಚಾರ ಗೊತ್ತಾಗಿದ್ದು ಇತ್ಯಾದಿ ವಿಚಾರಗಳು ಧಾರಾವಾಹಿ ವೀಕ್ಷಕರಿಗೆ ಖುಷಿ ಕೊಟ್ಟಿದೆ. ಹೀಗಾಗಿ, ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿಗೆ ಈ ಬಾರಿ ನಾಲ್ಕನೇ ಸ್ಥಾನ ಸಿಕ್ಕಿದೆ. ಕೆಲವೇ ಪಾಯಿಂಟ್​ಗಳ ಅಂತರದಲ್ಲಿ ಎರಡನೇ ಸ್ಥಾನ ಮಿಸ್ ಆಗಿದೆ.

ಮೊದಲ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಇತ್ತೀಚೆಗೆ ಈ ಧಾರಾವಾಹಿ ಪ್ರಸಾರ ಆರಂಭಿಸಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಕಾರಣದಿಂದಲೇ ಹೆಚ್ಚಿನ ವೀಕ್ಷಕರು ಈ ಧಾರಾವಾಹಿ ನೋಡುತ್ತಿದ್ದಾರೆ.  ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ನಿಶಾ ರವಿಕೃಷ್ಣನ್ ಹಾಗೂ ವಿಕಾಶ್ ಉತ್ತಯ್ಯ ಈ ಧಾರಾವಾಹಿಯ ಭಾಗ ಆಗಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?
Image
ಸ್ವರಾ​ಗೆ ಸಂಸದೆ ಮೇಲೆ ಕ್ರಶ್; ಲೈಂಗಿಕ ಆಸಕ್ತಿ ರಿವೀಲ್ ಮಾಡಿ ಟ್ರೋಲ್
Image
ಒಂದೇ ವಾರಕ್ಕೆ ಸುಸ್ತಾದ ‘ಕೂಲಿ’; ಹೀನಾಯ ಕಲೆಕ್ಷನ್​​​ ಆರಂಭಿಸಿದ ಸಿನಿಮಾ
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರೇಕ್ಷಕರ ವರ್ಗ ಕೂಡ ಹಿರಿದಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ‘ಲಕ್ಷ್ಮೀ ನಿವಾಸ’ ಹಾಗೂ ‘ಅಮೃತಧಾರೆ ಧಾರಾವಾಹಿ ಮಧ್ಯೆ ಇರೋದು ಕೇವಲ ಒಂದು ಪಾಯಿಂಟ್ ಅಂತರ ಮಾತ್ರ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿ: ಅಂತೂ ಕಳಚಿಬಿತ್ತು ಶಕುಂತಲ ಮುಖವಾಡ; ಅತ್ತೆಗೆ ಭೂಮಿಕಾ ಚಾಲೆಂಜ್

ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾರರ್ ಶೈಲಿ ಆದರೂ ವೀಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರಾವಾಹಿಯನ್ನು ವೀಕ್ಷಣೆ ಮಾಡುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Thu, 21 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್