AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಅಬ್ಬರಕ್ಕೆ ಟಿಆರ್​ಪಿ ಮೀಟರ್ ಶೇಕ್; ಉಳಿದ ಧಾರಾವಾಹಿಗಳ ಕಥೆ ಏನು?

Kannada Serials TRP: ಅಮೃತಧಾರೆ ಧಾರಾವಾಹಿ 33ನೇ ವಾರದ TRP ರೇಟಿಂಗ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು ಯಶಸ್ಸು ಕಂಡಿದೆ. ಕಥಾವಸ್ತುವಿನಲ್ಲಿನ ಟ್ವಿಸ್ಟ್‌ಗಳು ಮತ್ತು ಬೆಳವಣಿಗೆಗಳು ವೀಕ್ಷಕರನ್ನು ಆಕರ್ಷಿಸಿವೆ. ಕರ್ಣ, ಅಣ್ಣಯ್ಯ, ಲಕ್ಷ್ಮೀ ನಿವಾಸ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ಅಮೃತಧಾರೆ’ ಅಬ್ಬರಕ್ಕೆ ಟಿಆರ್​ಪಿ ಮೀಟರ್ ಶೇಕ್; ಉಳಿದ ಧಾರಾವಾಹಿಗಳ ಕಥೆ ಏನು?
ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on:Aug 21, 2025 | 2:56 PM

Share

‘ಅಮೃತಧಾರೆ’ (Amruthadhaare) ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡುವ ಕೆಲಸ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆಯಬಹುದು ಎಂದು ಊಹಿಸಲಾಗಿತ್ತು. ಈಗ ಅದು ನಿಜವಾಗಿದೆ. ಈ ಧಾರಾವಾಹಿಗೆ ಮೊದಲಿಗಿಂತ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ. ಮುಂದಿನ ಕೆಲವು ವಾರ ಧಾರಾವಾಹಿಯಲ್ಲಿನ ಕಥೆಯ ತೀವ್ರತೆ ಇದೇ ರೀತಿ ಇದ್ದರೆ ಟಿಆರ್​ಪಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಹಾಗಾದರೆ 33ನೇ ವಾರದ ಟಿಆರ್​ಪಿಯಲ್ಲಿ ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿ ಇದೆ ಎಂಬ ಬಗ್ಗೆ ಇಲ್ಲಿದೆ ವಿವರ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಕಥಾ ನಾಯಕ ಗೌತಮ್ ಮಗು ಕಾಣೆ ಆಗಿದ್ದು, ಭೂಮಿಕಾಗೆ ಶಕುಂತಲಾ ಕೆಟ್ಟವಳು ಎಂಬ ವಿಚಾರ ಗೊತ್ತಾಗಿದ್ದು ಇತ್ಯಾದಿ ವಿಚಾರಗಳು ಧಾರಾವಾಹಿ ವೀಕ್ಷಕರಿಗೆ ಖುಷಿ ಕೊಟ್ಟಿದೆ. ಹೀಗಾಗಿ, ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿಗೆ ಈ ಬಾರಿ ನಾಲ್ಕನೇ ಸ್ಥಾನ ಸಿಕ್ಕಿದೆ. ಕೆಲವೇ ಪಾಯಿಂಟ್​ಗಳ ಅಂತರದಲ್ಲಿ ಎರಡನೇ ಸ್ಥಾನ ಮಿಸ್ ಆಗಿದೆ.

ಮೊದಲ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಇತ್ತೀಚೆಗೆ ಈ ಧಾರಾವಾಹಿ ಪ್ರಸಾರ ಆರಂಭಿಸಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಕಾರಣದಿಂದಲೇ ಹೆಚ್ಚಿನ ವೀಕ್ಷಕರು ಈ ಧಾರಾವಾಹಿ ನೋಡುತ್ತಿದ್ದಾರೆ.  ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ನಿಶಾ ರವಿಕೃಷ್ಣನ್ ಹಾಗೂ ವಿಕಾಶ್ ಉತ್ತಯ್ಯ ಈ ಧಾರಾವಾಹಿಯ ಭಾಗ ಆಗಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?
Image
ಸ್ವರಾ​ಗೆ ಸಂಸದೆ ಮೇಲೆ ಕ್ರಶ್; ಲೈಂಗಿಕ ಆಸಕ್ತಿ ರಿವೀಲ್ ಮಾಡಿ ಟ್ರೋಲ್
Image
ಒಂದೇ ವಾರಕ್ಕೆ ಸುಸ್ತಾದ ‘ಕೂಲಿ’; ಹೀನಾಯ ಕಲೆಕ್ಷನ್​​​ ಆರಂಭಿಸಿದ ಸಿನಿಮಾ
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರೇಕ್ಷಕರ ವರ್ಗ ಕೂಡ ಹಿರಿದಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ‘ಲಕ್ಷ್ಮೀ ನಿವಾಸ’ ಹಾಗೂ ‘ಅಮೃತಧಾರೆ ಧಾರಾವಾಹಿ ಮಧ್ಯೆ ಇರೋದು ಕೇವಲ ಒಂದು ಪಾಯಿಂಟ್ ಅಂತರ ಮಾತ್ರ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿ: ಅಂತೂ ಕಳಚಿಬಿತ್ತು ಶಕುಂತಲ ಮುಖವಾಡ; ಅತ್ತೆಗೆ ಭೂಮಿಕಾ ಚಾಲೆಂಜ್

ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾರರ್ ಶೈಲಿ ಆದರೂ ವೀಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರಾವಾಹಿಯನ್ನು ವೀಕ್ಷಣೆ ಮಾಡುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Thu, 21 August 25

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ