AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್

ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ಗೆ ದೊಡ್ಡ ಶಾಕ್ ಎದುರಾಗಿದೆ. ಪತ್ನಿ ದಿಯಾ ಮೋಸ ಮಾಡಿ ಹಣ, ಚಿನ್ನದೊಂದಿಗೆ ಪರಾರಿಯಾಗಿದ್ದಾಳೆ. ಅಧಿಕಾರಿಗಳಿಗೆ ದೂರು ನೀಡಿದ್ದರಿಂದ ಜಯದೇವ್ ಬೀದಿಗೆ ಬಿದ್ದಿದ್ದಾನೆ. ಇವನಿಗೆ ಅಣ್ಣ ಗೌತಮ್ ಸಹಾಯ ಮಾಡುತ್ತಾನೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ ಘಟನೆಯಿಂದ ಧಾರಾವಾಹಿ ಮೇ ಅಂತ್ಯಕ್ಕೆ ಮುಕ್ತಾಯವಾಗುವ ಸಾಧ್ಯತೆ ಇದೆ.

‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 30, 2026 | 8:04 AM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare) ಈಗ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯಲ್ಲಿ ಜಯದೇವ್ ಬೀದಿಗೆ ಬರುವುದು ಬಹುತೇಕ ಖಚಿತವಾಗಿದೆ. ಈ ಧಾರಾವಾಹಿಯಲ್ಲಿ ವಿಲನ್ ಆಗಿ ಮೆರೆಯುತ್ತಿದ್ದ ಆತನಿಗೆ ಸ್ವತಃ ಪತ್ನಿಯಿಂದಲೇ ಮೋಸ ಆಗಿದೆ. ಕುಟುಂಬದ ಎಲ್ಲರಿಗೂ ಮೋಸ ಮಾಡಿದ ಆತನಿಗೆ ಈಗ ಶಾಕ್ ಎದುರಾಗಿದೆ. ಶೀಘ್ರವೇ ಧಾರಾವಾಹಿ ಪೂರ್ಣಗೊಳ್ಳಬಹುದು ಎಂಬ ಅನುಮಾನ ಬಂದಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ ಇಲ್ಲದಂತೆ ಆಗಿದೆ. ಇದರಿಂದ ಕಂಪನಿ ಮಾರಿ ವಿದೇಶಕ್ಕೆ ತೆರಳುವ ಪ್ಲ್ಯಾನ್ ಮಾಡಿದ್ದ. ಆದರೆ, ಈ ಪ್ಲ್ಯಾನ್ ಕೈಕೊಟ್ಟಿದೆ. ಹಣ ಹಾಗೂ ಚಿನ್ನವನ್ನು ತೆಗೆದುಕೊಂಡು ಜಯದೇವ್ ಪತ್ನಿ ದಿಯಾ ಓಡಿ ಹೋಗಿದ್ದಾಳೆ. ಜೊತೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಮಾಡಿದ್ದಾರೆ. ಇದರಿಂದ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದಾರೆ.

ಸದ್ಯದ ಬೆಳವಣಿಗೆ ಜಯದೇವ್​​ಗೆ ಶಾಕ್ ಕೊಟ್ಟಿದೆ. ಶಾರ್ಟ್​ ಕಟ್​​ನಲ್ಲಿ ತೆರಳಿ ಹಣ ಮಾಡಬೇಕು ಎಂದು ಆತ ಪ್ಲ್ಯಾನ್ ಮಾಡಿದ್ದ. ಆದರೆ, ಈ ಪ್ಲ್ಯಾನ್ ಉಲ್ಟಾ ಆಗಿದೆ. ಇದರಿಂದ ಮುಂದೇನು ಎನ್ನುವ ಪ್ರಶ್ನೆ ಆತನಿಗೆ ಮೂಡಿದೆ. ಈ ಸಂದರ್ಭದಲ್ಲಿ ಆತನ ಅಣ್ಣ ಗೌತಮ್ ಸಹಾಯಕ್ಕೆ ಬರುತ್ತಾನಾ ಎನ್ನುವ ಪ್ರಶ್ನೆ ಮೂಡಿದೆ.

View this post on Instagram

A post shared by Zee Kannada (@zeekannada)

ಈಗಾಗಲೇ ಗೌತಮ್​ಗೆ ಜಯದೇವ್ ಯಾವ ರೀತಿಯ ವ್ಯಕ್ತಿ ಎಂಬುದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಅವನು ಈತನ ಬೆಂಬಲಕ್ಕೆ ನಿಲ್ಲೋದು ಅನುಮಾನವೇ. ಈ ವಿಷಯದಲ್ಲಿ ಯಾವ ರೀತಿಯ ಬೆಳವಣಿಗೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ

ಮುಂದಿನ ದಿನಗಳಲ್ಲಿ ಧಾರಾವಾಹಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಧಾರಾವಾಹಿ ಹೋಗುತ್ತಿರುವ ರೀತಿ ನೋಡಿದರೆ ಮೇ ತಿಂಗಳಾಂತ್ಯಕ್ಕೆ ಧಾರಾವಾಹಿ ಕೊನೆಗೊಳ್ಳಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು