AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿಯಲ್ಲಿ ಭೂಮಿಕಾಳ ಬಚಾವ್ ಮಾಡಲು ಬಂದ, ‘ಅಣ್ಣಯ್ಯ’, ‘ಕರ್ಣ’

ಅಮೃತಧಾರೆ ಧಾರಾವಾಹಿಯಲ್ಲಿ ಗರ್ಭಿಣಿ ಭೂಮಿಕಾ ಮೇಲೆ ದಾಳಿ ನಡೆದಿದೆ. ಅಣ್ಣಯ್ಯ ಮತ್ತು ಕರ್ಣ ಧಾರಾವಾಹಿಗಳ ಕಲಾವಿದರು ಭೂಮಿಕಾಗೆ ಸಹಾಯಕ್ಕೆ ಬಂದಿದ್ದಾರೆ. ಈ ಮಹಾ ಸಂಗಮ ಧಾರಾವಾಹಿಯ ಟಿಆರ್ಪಿಯನ್ನು ಹೆಚ್ಚಿಸಲಿದೆ. ಜಯದೇವನ ಕುತಂತ್ರದಿಂದ ಭೂಮಿಕಾ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಪಾರ್ವತಿ ಮತ್ತು ಶಿವಣ್ಣ (ಅಣ್ಣಯ್ಯ) ರಕ್ಷಣೆಗೆ ಬಂದಿದ್ದಾರೆ. ಕಿರಣ್ ರಾಜ್ (ಕರ್ಣ) ಕೂಡ ವೈದ್ಯರಾಗಿ ಸಹಾಯ ಮಾಡುತ್ತಾರೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಭೂಮಿಕಾಳ ಬಚಾವ್ ಮಾಡಲು ಬಂದ, ‘ಅಣ್ಣಯ್ಯ’, ‘ಕರ್ಣ’
ಅಮೃತಧಾರೆ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 11, 2025 | 11:06 AM

Share

‘ಅಮೃತಧಾರೆ’ ಧಾರಾವಾಹಿ (Amruthadhare Serial) ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲೂ ಒಳ್ಳೆಯ ರೇಟಿಂಗ್ ಪಡೆಯುತ್ತಿದೆ. ಈಗ ಧಾರಾವಾಹಿ ದೊಡ್ಡ ತಿರುವು ಪಡೆದುಕೊಂಡಿದೆ. ಪ್ರೆಗ್ನೆಂಟ್ ಆಗಿರೋ ಭೂಮಿಕಾ ವಿರುದ್ಧ ಜಯದೇವ್ ಅಟ್ಯಾಕ್ ಮಾಡಿಸೋಕೆ ಪ್ರಯತ್ನಿಸಿದ್ದಾನೆ. ಈ ವೇಳೆ ಸಹಾಯಕ್ಕೆ ‘ಅಣ್ಣಯ್ಯ’ ಹಾಗೂ ‘ಕರ್ಣ’ ಧಾರಾವಾಹಿ ಕಲಾವಿದರು ಬಂದಿದ್ದಾರೆ! ಈ ಮೂಲಕ ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಹಾ ಸಂಗಮ ಆಗಿದೆ.

ಭೂಮಿಕಾಗೆ ಕಾಮಾಲೆ ಆಗಿದೆ ಎಂಬ ವಿಚಾರ ತಿಳಿಯುತ್ತದೆ. ತುಂಬು ಗರ್ಭಿಣಿಗೆ ಕಾಮಾಲೆ ಆಗಿದ ಎಂದಾಗ ಸಹಜವಾಗಿಯೇ ಆತಂಕ ಸೃಷ್ಟಿ ಆಗುತ್ತದೆ. ಆದರೆ, ಈ ಆತಂಕವನ್ನು ದೂರ ಮಾಡುವ ಅಜ್ಜಿ, ಹಳ್ಳಿ ಔಷಧಿ ಮಾಡಿಸಲು ಸೂಚನೆ ನೀಡುತ್ತಾಳೆ. ಈ ಔಷಧವನ್ನು ಹಾಕಿಸಿಕೊಳ್ಳೋಕೆ ಭೂಮಿಕಾ ಹೊರಡುತ್ತಾಳೆ. ಇದೇ ಸರಿಯಾದ ಸಮಯ ಎಂದು ಭಾವಿಸೋ ಜಯದೇವ್ ದೊಡ್ಡ ಪ್ಲ್ಯಾನ್ ಮಾಡುತ್ತಾನೆ. ಹೇಗಾದರೂ ಮಾಡಿ ಭೂಮಿಕಾನ ಅಲ್ಲಿಯೇ ಮುಗಿಸಬೇಕು ಎಂದು ಕುತಂತ್ರ ರೂಪಿಸುತ್ತಾನೆ.

ಇದನ್ನೂ ಓದಿ
Image
ನಂಬಲೇ ಬೇಕು.. ಸ್ಕ್ವಿಡ್ ಗೇಮ್ ನಟನಿಗೆ ಕನ್ನಡದ ಈ ಚಿತ್ರ ಎಂದರೆ ಸಖತ್ ಇಷ್ಟ
Image
ಗೆಳತಿಯ ತುಟಿಗೆ ಮುತ್ತು; ಸೆನ್ಸೇಷನ್ ಸೃಷ್ಟಿ ಮಾಡಿದ ಸಂಯುಕ್ತಾ ಹೆಗಡೆ
Image
ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್​ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಭೂಮಿಕಾ ಹಳ್ಳಿಗೆ ತೆರಳೋ ದಾರಿ ಮಧ್ಯೆ ಕಾರು ಕೆಟ್ಟಿ ನಿಲ್ಲುತ್ತದೆ. ಆಗ ಅವಳ ಮೇಲೆ ಅಟ್ಯಾಕ್ ಆಗುತ್ತದೆ. ಆಗ ‘ಅಣ್ಣಯ್ಯ’ ಧಾರಾವಾಹಿಯ ಶಿವಣ್ಣ, ಪಾರ್ವತಿ ಬರುತ್ತಾರೆ. ಶಿವಣ್ಣ ರೌಡಿಗಳ ವಿರುದ್ಧ ಹೋರಾಡಿದರೆ, ಪಾರು, ಭೂಮಿಕಾನಾ ಆಪರೇಷನ್ ಥಿಯೇಟರ್​ಗೆ ಕರೆದುಕೊಂಡು ಹೋಗುತ್ತಾಳೆ.

View this post on Instagram

A post shared by Zee Kannada (@zeekannada)

‘ಅಣ್ಣಯ್ಯ’ ಧಾರಾವಾಹಿಯಲ್ಲಿ ಪಾರುಳದ್ದು ವೈದ್ಯೆಯ ಪಾತ್ರ. ಈ ಕಾರಣಕ್ಕೆ ಈ ಸಿಚ್ಯುವೇಶನ್​ಗೆ ಹೊಂದುತ್ತದೆ ಎಂದು ಅವರನ್ನು ಕರೆತರಲಾಗಿದೆ. ಇಷ್ಟೇ ಅಲ್ಲ, ಇತ್ತೀಚೆಗೆ ಆರಂಭ ಆದ ‘ಕರ್ಣ’ ಧಾರಾವಾಹಿಯ ಕಲಾವಿದ ಕಿರಣ್ ರಾಜ್ ಕೂಡ ‘ಅಮೃತಧಾರೆ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಇದಕ್ಕೂ ಕಾರಣ ಇದೆ. ‘ಕರ್ಣ’ ಧಾರಾವಾಹಿಯಲ್ಲಿ ಕಿರಣ್ ರಾಜ್ ಅವರದ್ದು ಡಾಕ್ಟರ್ ಪಾತ್ರ. ಹೀಗಾಗಿ, ಅವರನ್ನು ಕರೆತರಲಾಗಿದೆ.

ಇದನ್ನೂ ಓದಿ: ಜುಲೈ 3ರಿಂದ ‘ಕರ್ಣ’ ಧಾರಾವಾಹಿ; ಟಿವಿಗೂ ಮೊದಲೇ ಒಟಿಟಿಯಲ್ಲಿ ಪ್ರಸಾರ

ಈ ರೀತಿಯ ಮಹಾ ಸಂಗಮದಿಂದ ಧಾರಾವಾಹಿ ಟಿಆರ್​ಪಿ ಸಾಕಷ್ಟು ಹೆಚ್ಚಲಿದೆ. ಈಗ ‘ಅಣ್ಣಯ್ಯ’ ಹಾಗೂ ‘ಕರ್ಣ’ ಧಾರಾವಾಹಿಯ ವೀಕ್ಷಕರು ಕೂಡ ‘ಅಮೃತಧಾರೆ’ ಧಾರಾವಾಹಿಯನ್ನು ನೋಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Sat, 5 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?