AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆದರೂ ಪತಿ ಅರುಣ್​ನ ಭೇಟಿ ಮಾಡೋಕೆ ಆಗ್ತಿಲ್ಲ’; ‘ಅಮೃತವರ್ಷಿಣಿ’ ರಜಿನಿ  

Amruthavarshini Rajini: ನಟಿ ರಜಿನಿ ಹಾಗೂ ಅರುಣ್ ಇತ್ತೀಚೆಗೆ ಮದುವೆಯಾಗಿದ್ದಾರೆ. ಆದರೆ, ಬಿಡುವಿಲ್ಲದ ಕೆಲಸ ಹಾಗೂ ಅರುಣ್ ಅವರ ಬಾಡಿಬಿಲ್ಡಿಂಗ್ ಸ್ಪರ್ಧೆಗಳ ಸಿದ್ಧತೆಯಿಂದಾಗಿ ಮದುವೆ ಬಳಿಕ ಅವರಿಬ್ಬರು ಭೇಟಿಯಾಗಿದ್ದು ಕೆಲವೇ ಕೆಲವು ಬಾರಿ. ಈ ಬಗ್ಗೆ ರಜಿನಿ ವಿಡಿಯೋ ಮೂಲಕ ವಿವರಿಸಿದ್ದಾರೆ.

‘ಮದುವೆ ಆದರೂ ಪತಿ ಅರುಣ್​ನ ಭೇಟಿ ಮಾಡೋಕೆ ಆಗ್ತಿಲ್ಲ’; ‘ಅಮೃತವರ್ಷಿಣಿ’ ರಜಿನಿ  
ಅಶ್ವಿನಿ-ರಜಿನಿ
ರಾಜೇಶ್ ದುಗ್ಗುಮನೆ
|

Updated on: Nov 22, 2025 | 7:31 AM

Share

‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ನಟಿ ರಜಿನಿ (Rajini) ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಹುಕಾಲದ ಗೆಳೆಯ ಅರುಣ್ ಅವರನ್ನು ಮದುವೆ ಆಗಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಮದುವೆ ಆದರೂ ಪತಿ ಅರುಣ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿದ್ದು ಬೆರಳೆಣಿಕೆ ಬಾರಿ ಮಾತ್ರ. ಇದಕ್ಕೆ ಕಾರಣ ಏನು ಎಂಬುದನ್ನು ರಜಿನಿ ಅವರು ವಿವರಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಅರುಣ್ ಅವರು ಜಿಮ್ ಟ್ರೇನರ್ ಹಾಗೂ ಬಾಡಿ ಬಿಲ್ಡರ್. ಅವರು ಸಾಕಷ್ಟು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ. ಇದಕ್ಕಾಗಿ ಸಾಕಷ್ಟು ಡಯಟ್ ಮಾಡಬೇಕಾಗುತ್ತದೆ. ಇನ್ನು, ರಜಿನಿ ಅವರು ನಟಿ. ಅವರು ಕೂಡ ಶೂಟ್​ನಲ್ಲಿ ಬ್ಯುಸಿ ಇರುತ್ತಾರೆ. ಈ ಎಲ್ಲಾ ಕಾರಣದಿಂದ ಮದುವೆ ಆದ ಬಳಿಕ ಇವರಿಗೆ ಭೇಟಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

View this post on Instagram

A post shared by Rajini (@rajiniiofficial)

‘ಇಂದು ವಿಶೇಷ ದಿನ. ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ 2 ಗಂಟೆವರೆಗೆ ಶೂಟ್ ಇತ್ತು. ನನ್ನ ಪಯಣ ಅರುಣ್ ಮನೆ ಕಡೆ. ಅರುಣ್ ಹಾಗೂ ನಾನು ಮದುವೆ ಆದ ಬಳಿಕ ಭೇಟಿ ಆಗಿದ್ದು ಬೆರಳೆಣಿಕಯಷ್ಟು ಬಾರಿ ಮಾತ್ರ. ಅವರು ಅಥ್ಲೆಟ್. ಅವರು ಹೊಸ ಕಾಂಪಿಟೇಷನ್​ಗೆ ರೆಡಿ ಆಗ್ತಿದಾರೆ. ಇದಕ್ಕೆ ಅವರದ್ದೇ ಆದ ಕ್ರಮ ಪಾಲಿಸಲೇಬೇಕು. ನಾನು ಶೂಟ್ ಅಲ್ಲಿ ಬ್ಯುಸಿ ಇದ್ದೆ. ಹೀಗಾಗಿ, ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ’ ಎಂದು ರಜಿನಿ ಹೇಳಿದ್ದಾರೆ.

ಇದನ್ನೂ ಓದಿ: ವಿವಾಹದ ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಮೃತವರ್ಷಿಣಿ ರಜಿನಿ

‘ನನ್ನ ಬೇಬೋ ಬಾಡಿ ಬಗ್ಗೆ ಅನೇಕರು ನೆಗೆಟಿವ್ ಕಮೆಂಟ್ ಮಾಡುತ್ತಾರೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಆ ಬಾಡಿ ಮಾಡೋಕೆ ಅವನು ಸಾಕಷ್ಟು ಶ್ರಮ ಹಾಕಿದ್ದಾನೆ. ಅವನನ್ನು ಕಳುಹಿಸೋಕೆ ಬೇಸರ ಆಗ್ತಿದೆ. ನನ್ನ ಕಡೆಯಿಂದ ಆಲ್​ ದಿ ಬೆಸ್ಟ್ ಹೇಳಿದೆ. ಬದುಕನ್ನು ಬೇರೆಯವರ ಇಚ್ಛೆಯಂತೆ ಬದುಕಬಾರದು’ ಎಂದು ರಜಿನಿ ಹೇಳಿದ್ದಾರೆ. ಅರುಣ್ ಅವರು ಕಾಂಪಿಟೇಷನ್ ಒಂದಕ್ಕಾಗಿ ತೆರಳುತ್ತಿದ್ದಾರೆ. ಹೀಗಾಗಿ, ಅವರನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಬಂದಿದ್ದಾರೆ ರಜಿನಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ