AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಮೃತವರ್ಷಿಣಿ ರಜಿನಿ

'ಅಮೃತವರ್ಷಿಣಿ' ಧಾರಾವಾಹಿ ಖ್ಯಾತಿಯ ನಟಿ ರಜಿನಿ ಅವರು ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಅವರನ್ನು ವರಿಸಿದ್ದಾರೆ. ನವೆಂಬರ್ 10ರಂದು ನಡೆದ ಈ ಮದುವೆಯ ವಿಡಿಯೋವನ್ನು ರಜಿನಿ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಏಳು ವರ್ಷಗಳ ಪರಿಚಯ ಪ್ರೀತಿಯಾಗಿ, ಈಗ ದಾಂಪತ್ಯಕ್ಕೆ ಕಾಲಿಟ್ಟಿದೆ.

ವಿವಾಹದ ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಮೃತವರ್ಷಿಣಿ ರಜಿನಿ
ರಜಿನಿ-ಅರುಣ್
ರಾಜೇಶ್ ದುಗ್ಗುಮನೆ
|

Updated on: Nov 11, 2025 | 3:04 PM

Share

‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ ಅವರು ಜಿಮ್ ಟ್ರೇನರ್ ಅರುಣ್ ವೆಂಕಟೇಶ್​ ಜೊತೆ ವಿವಾಹ ಆಗಿದ್ದಾರೆ. ನವೆಂಬರ್ 10ರಂದು ಈ ಮದುವೆ ನಡೆದಿದೆ. ಈ ವಿವಾಹಕ್ಕೆ ಆಪ್ತರು ಹಾಗೂ ಕುಟುಂಬದವರು ಬಂದು ಹಾರೈಸಿದ್ದಾರೆ. ರಜಿನಿ ಅವರ ಆಪ್ತರು ಹಂಚಿಕೊಂಡ ಮದುವೆಯ ಕೆಲ ಫೋಟೋಗಳು ವೈರಲ್ ಆಗಿದ್ದವು. ಈಗ ರಜಿನಿ ಅವರೇ ವಿವಾಹ ಕ್ಷಣದ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಜಿನಿ ಹಾಗೂ ಅರುಣ್ ಮಧ್ಯೆ ಏಳು ವರ್ಷಗಳ ಪರಿಚಯ ಇದೆ. ಇಬ್ಬರೂ ಒಂದೇ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರಂತೆ. ಇಬ್ಬರ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಪ್ರೀತಿ ಮೂಡಿದೆ. ಈಗ ಇವರು ಸಪ್ತಪದಿ ತುಳಿದಿದ್ದಾರೆ. ಅರುಣ್ ವೃತ್ತಿಯಲ್ಲಿ ಜಿಮ್ ಟ್ರೇನರ್. ರಜಿನಿ ಅವರು ನಟಿ. ಇಬ್ಬರೂ ರೀಲ್ಸ್​ಗಳನ್ನು ಒಟ್ಟಾಗಿ ಮಾಡುತ್ತಿದ್ದರು. ಈಗ ಇವರು ಪತಿ-ಪತ್ನಿ ಆಗಿದ್ದಾರೆ.

ರಜಿನಿ ಅವರು ವಿವಾಹದ ಕ್ಷಣದ ವಿಡಿಯೋನ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಹಾರೈಕೆಗಳೊಂದಿಗೆ ನಾವು ಹೊಸ ಜೀವನಕ್ಕೆ ಕಾಲಿರಿಸಿದ್ದೆವೇ. ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದಿದ್ದಾರೆ ರಜಿನಿ. ಅಭಿಮಾನಿಗಳು ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಅರುಣ್ ಅವರು ಬಾಡಿಗೆ ಫಿದಾ ಆಗಿದ್ದಾರೆ.

View this post on Instagram

A post shared by Rajini (@rajiniiofficial)

ಅರುಣ್ ಜಿಮ್ ಟ್ರೇನರ್. ಹೀಗಾಗಿ, ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ವಿಡಿಯೋ ಉದ್ದಕ್ಕೂ ಅವರ ಫಿಸಿಕ್ ಹೈಲೈಟ್ ಆಗುವ ರೀತಿಯಲ್ಲಿ ಇದೆ. ಅವರು ದೇಹವನ್ನು ಇಷ್ಟು ಉತ್ತಮವಾಗಿ ಇಟ್ಟುಕೊಂಡಿದ್ದಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ‘ಅಮೃತವರ್ಷಿಣಿ’ ರಜಿನಿ ವಿವಾಹ; ಇಲ್ಲಿದೆ ಸುಂದರ ಫೋಟೋಗಳು

ರಜಿನಿ ಅವರನ್ನು ಅರುಣ್ ಅವರು ಮಮ್ಮಿ ಎಂದು ಕರೆಯುತ್ತಾರಂತೆ. ರೀಲ್ಸ್​ಗಳಲ್ಲಿ ಅನೇಕ ಕಡೆಗಳಲ್ಲಿ ರಜನಿ ಅವರನ್ನು ಅರುಣ್ ಮಮ್ಮಿ ಎಂದು ಸಂಬೋಧಿಸಿದ್ದನ್ನು ನೀವು ಕಾಣಬಹುದು. ಈ ವಿಚಾರ ಅವರ ಅಭಿಮಾನಿಗಳಿಗೆ ಅಚ್ಚರಿ ತರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ