AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಮೃತವರ್ಷಿಣಿ ರಜಿನಿ

'ಅಮೃತವರ್ಷಿಣಿ' ಧಾರಾವಾಹಿ ಖ್ಯಾತಿಯ ನಟಿ ರಜಿನಿ ಅವರು ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಅವರನ್ನು ವರಿಸಿದ್ದಾರೆ. ನವೆಂಬರ್ 10ರಂದು ನಡೆದ ಈ ಮದುವೆಯ ವಿಡಿಯೋವನ್ನು ರಜಿನಿ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಏಳು ವರ್ಷಗಳ ಪರಿಚಯ ಪ್ರೀತಿಯಾಗಿ, ಈಗ ದಾಂಪತ್ಯಕ್ಕೆ ಕಾಲಿಟ್ಟಿದೆ.

ವಿವಾಹದ ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಮೃತವರ್ಷಿಣಿ ರಜಿನಿ
ರಜಿನಿ-ಅರುಣ್
ರಾಜೇಶ್ ದುಗ್ಗುಮನೆ
|

Updated on: Nov 11, 2025 | 3:04 PM

Share

‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ ಅವರು ಜಿಮ್ ಟ್ರೇನರ್ ಅರುಣ್ ವೆಂಕಟೇಶ್​ ಜೊತೆ ವಿವಾಹ ಆಗಿದ್ದಾರೆ. ನವೆಂಬರ್ 10ರಂದು ಈ ಮದುವೆ ನಡೆದಿದೆ. ಈ ವಿವಾಹಕ್ಕೆ ಆಪ್ತರು ಹಾಗೂ ಕುಟುಂಬದವರು ಬಂದು ಹಾರೈಸಿದ್ದಾರೆ. ರಜಿನಿ ಅವರ ಆಪ್ತರು ಹಂಚಿಕೊಂಡ ಮದುವೆಯ ಕೆಲ ಫೋಟೋಗಳು ವೈರಲ್ ಆಗಿದ್ದವು. ಈಗ ರಜಿನಿ ಅವರೇ ವಿವಾಹ ಕ್ಷಣದ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಜಿನಿ ಹಾಗೂ ಅರುಣ್ ಮಧ್ಯೆ ಏಳು ವರ್ಷಗಳ ಪರಿಚಯ ಇದೆ. ಇಬ್ಬರೂ ಒಂದೇ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರಂತೆ. ಇಬ್ಬರ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಪ್ರೀತಿ ಮೂಡಿದೆ. ಈಗ ಇವರು ಸಪ್ತಪದಿ ತುಳಿದಿದ್ದಾರೆ. ಅರುಣ್ ವೃತ್ತಿಯಲ್ಲಿ ಜಿಮ್ ಟ್ರೇನರ್. ರಜಿನಿ ಅವರು ನಟಿ. ಇಬ್ಬರೂ ರೀಲ್ಸ್​ಗಳನ್ನು ಒಟ್ಟಾಗಿ ಮಾಡುತ್ತಿದ್ದರು. ಈಗ ಇವರು ಪತಿ-ಪತ್ನಿ ಆಗಿದ್ದಾರೆ.

ರಜಿನಿ ಅವರು ವಿವಾಹದ ಕ್ಷಣದ ವಿಡಿಯೋನ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಹಾರೈಕೆಗಳೊಂದಿಗೆ ನಾವು ಹೊಸ ಜೀವನಕ್ಕೆ ಕಾಲಿರಿಸಿದ್ದೆವೇ. ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದಿದ್ದಾರೆ ರಜಿನಿ. ಅಭಿಮಾನಿಗಳು ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಅರುಣ್ ಅವರು ಬಾಡಿಗೆ ಫಿದಾ ಆಗಿದ್ದಾರೆ.

View this post on Instagram

A post shared by Rajini (@rajiniiofficial)

ಅರುಣ್ ಜಿಮ್ ಟ್ರೇನರ್. ಹೀಗಾಗಿ, ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ವಿಡಿಯೋ ಉದ್ದಕ್ಕೂ ಅವರ ಫಿಸಿಕ್ ಹೈಲೈಟ್ ಆಗುವ ರೀತಿಯಲ್ಲಿ ಇದೆ. ಅವರು ದೇಹವನ್ನು ಇಷ್ಟು ಉತ್ತಮವಾಗಿ ಇಟ್ಟುಕೊಂಡಿದ್ದಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ‘ಅಮೃತವರ್ಷಿಣಿ’ ರಜಿನಿ ವಿವಾಹ; ಇಲ್ಲಿದೆ ಸುಂದರ ಫೋಟೋಗಳು

ರಜಿನಿ ಅವರನ್ನು ಅರುಣ್ ಅವರು ಮಮ್ಮಿ ಎಂದು ಕರೆಯುತ್ತಾರಂತೆ. ರೀಲ್ಸ್​ಗಳಲ್ಲಿ ಅನೇಕ ಕಡೆಗಳಲ್ಲಿ ರಜನಿ ಅವರನ್ನು ಅರುಣ್ ಮಮ್ಮಿ ಎಂದು ಸಂಬೋಧಿಸಿದ್ದನ್ನು ನೀವು ಕಾಣಬಹುದು. ಈ ವಿಚಾರ ಅವರ ಅಭಿಮಾನಿಗಳಿಗೆ ಅಚ್ಚರಿ ತರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?