AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಮಾತಿಗೆ ಹೆದರಿ ‘ಅಗ್ನಿಪರೀಕ್ಷೆ’ಯಿಂದ ಅರ್ಧಕ್ಕೆ ನಡೆದ ಅಮುಕು ಡುಮುಕು ಮಂಜು

ಸೋಶಿಯಲ್ ಮೀಡಿಯಾ ಸ್ಟಾರ್ ಅಮುಕು ಡುಮುಕು ಮಂಜು ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಕಾರ್ಯಕ್ರಮದಿಂದ ಅರ್ಧದಲ್ಲೇ ಹೊರನಡೆದಿದ್ದಾರೆ. ನಟಿ ಸಂಗೀತಾ ಅವರನ್ನು ಇಂಪ್ರೆಸ್ ಮಾಡುವ ಟಾಸ್ಕ್ ನಿರಾಕರಿಸಿದಾಗ ಜಡ್ಜ್ ವಿನಯ್ ಗೌಡ ಸಿಟ್ಟಿಗೆದ್ದರು. ಈ ಮಾತಿನ ಚಕಮಕಿಯಿಂದ ಬೇಸತ್ತ ಮಂಜು ವೇದಿಕೆಯಿಂದ ದಿಢೀರ್ ನಿರ್ಗಮಿಸಿ ಎಲ್ಲರಿಗೂ ಶಾಕ್ ನೀಡಿದ್ದಾರೆ.

ವಿನಯ್ ಮಾತಿಗೆ ಹೆದರಿ ‘ಅಗ್ನಿಪರೀಕ್ಷೆ’ಯಿಂದ ಅರ್ಧಕ್ಕೆ ನಡೆದ ಅಮುಕು ಡುಮುಕು ಮಂಜು
ಅಮುಕು ಡುಮುಕು
ರಾಜೇಶ್ ದುಗ್ಗುಮನೆ
|

Updated on: Aug 17, 2026 | 2:54 PM

Share

ಮುಖ್ಯಾಂಶಗಳು

  • 'ಬಿಗ್ ಬಾಸ್ ಅಗ್ನಿಪರೀಕ್ಷೆ'ಯಿಂದ ಹೊರನಡೆದ ಮಂಜು
  • ಸಂಗೀತಾ ಇಂಪ್ರೆಸ್ ಮಾಡುವ ಟಾಸ್ಕ್ ಬೇಡವೆಂದ ಅಮುಕು ಡುಮುಕು
  • ವೇದಿಕೆಯಲ್ಲೇ ವಾಗ್ವಾದ; ಶಾಕ್ ಆದ ಶೋ ಜಡ್ಜ್‌ಗಳು

ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದವರು ಅಮುಕು ಡುಮುಕು ಮಂಜು. ರಿಯಾಲಿಟಿ ಶೋ ಒಂದರಲ್ಲಿ ಅವರು ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಈಗ ಅವರು ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಗೆ ಬಂದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಸಿಕ್ಕ ಜನಪ್ರಿಯತೆಯೇ ಇಲ್ಲಿವರೆಗೆ ಕರೆದುಕೊಂಡು ಬಂದಿತ್ತು. ಆದರೆ, ಈ ಅವಕಾಶವನ್ನು ಅವರು ಕೈ ಚೆಲ್ಲಿದ್ದಾರೆ. ಅವರು ಟಾಸ್ಕ್​​ನ ಅರ್ಧದಲ್ಲೇ ಹೊರ ನಡೆದಿದ್ದಾರೆ.

ಆಗಸ್ಟ್ 16ರಿಂದ ಬಿಗ್ ಬಾಸ್ ಅಗ್ನಿಪರೀಕ್ಷೆ ಆರಂಭ ಆಗಿದೆ. ಎರಡನೇ ದಿನದಲ್ಲಿ ಅಮುಕು ಡುಮುಕು ಅವರು ಆಗಮಿಸಿದ್ದರು. ಅವರು ವೇದಿಕೆಗೆ ಎಂಟ್ರಿ ಕೊಡುವಾಗಲೇ ವಿಚಿತ್ರವಾಗಿ ಆಗಮಿಸಿದ್ದರು. ಇದನ್ನು ನೋಡಿಯೇ ಮನೆಯ ಜಡ್ಜ್ ಶಾಕ್ ಆಗಿದ್ದರು. ನಿಮ್ಮ ಬಗ್ಗೆ ಹೇಳಿಕೊಳ್ಳುವಂತೆ ಮಂಜುಗೆ ಕೇಳಲಾಯಿತು. ‘ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆಯುವ ಆಸೆ ಇತ್ತು. ಹೀಗೆ ಖ್ಯಾತಿ ಪಡೆದುಕೊಂಡೆ’ ಎಂದರು. ‘ಗರ್ಲ್​​ ಫ್ರೆಂಡ್ ಇದ್ದಾರಾ’ ಎಂದು ಕೇಳಲಾಯಿತು. ‘ಇಲ್ಲ’ ಎಂದರು ಅಮುಕು ಡುಮುಕು.

‘ಸಂಗೀತಾ ಅವರನ್ನು ಇಂಪ್ರೆಸ್ ಮಾಡಬೇಕು’ ಎಂದು ಚಾಲೆಂಜ್ ಕೊಡಲಾಯಿತು. ‘ನಾನು ಮಾಡಲ್ಲ’ ಎಂದರು ಅಮುಕು ಡುಮುಕು. ‘ಸಂಗೀತಾ ಅವರದ್ದು ಕರಗುವ ಮನಸೇ ಅಲ್ಲ, ಅದಕ್ಕೆ ಮಾಡಲ್ಲ. ನಾನು ಹೀಗೆ ಇರ್ತೀನಿ. ನಾನು ಯಾರನ್ನೂ ಇಂಪ್ರೆಸ್ ಮಾಡೋಕೆ ಬಂದಿಲ್ಲ. ಇಷ್ಟ ಇದ್ರೆ ಕಳಿಸಿ, ಇಲ್ದಿದ್ರೆ ಇಲ್ಲ. ಫಿಲ್ಟರ್ ಹಾಕ್ಕೊಂಡು ಇರಲ್ಲ’ ಎಂದರು ಮಂಜು.

ಇದನ್ನೂ ಓದಿ: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಜಡ್ಜ್ ಆಗಿ ಮಿಂಚಿದ ಸಂಗೀತಾ ಶೃಂಗೇರಿ

‘ಆಗ ವಿನಯ್ ಸಿಟ್ಟಿಗೆದ್ದರು. ವೇದಿಕೆಗೆ ಮರ್ಯಾದೆ ಇದೆ. ನಿನಗೆ ಇಷ್ಟ ಬಂದಹಾಗೆ ಮಾತಾಡೋಕೆ ಅಲ್ಲ ಈ ವೇದಿಕೆ ಇರೋದು. ಟಾಸ್ಕ್ ಮಾಡೋಕೆ ರೆಡಿ ಇಲ್ಲ ಎಂದರೆ ಹೊರಟುಬಿಡು’ ಎಂದರು. ಹೀಗೆ ಹೇಳುತ್ತಿದ್ದಂತೆ ಮಂಜು ಹೊರಟುಬಿಟ್ಟರು. ಅವರು ಹೋಗಿದ್ದು ನೋಡಿ ಎಲ್ಲಾ ಜಡ್ಜ್​ಗಳು ಶಾಕ್ ಆದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು