AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸನ್‌ ಉದಯ’ ಟಿವಿಯಲ್ಲಿ ಅಮೂಲ್ಯ ಗೌಡ ಹೊಸ ಧಾರಾವಾಹಿ ‘ಮಹಾಲಕ್ಷ್ಮೀ ಮದುವೆ’

‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಯು ‘ಸನ್‌ ಉದಯ’ ವಾಹಿನಿಯಲ್ಲಿ ಜೂನ್ 1ರಿಂದ ಪ್ರಸಾರ ಆಗಲಿದೆ. ಸೋಮವಾರದಿಂದ ಶನಿವಾರದ ತನಕ ಸಂಜೆ 6.30ಕ್ಕೆ ಪ್ರಸಾರ ಆಗಲಿರುವ ಈ ಸೀರಿಯಲ್​ನಲ್ಲಿ ಮಧ್ಯಮ ವರ್ಗದ ಕಥೆ ಇರಲಿದೆ. ಅಮೂಲ್ಯ ಗೌಡ, ಭರತ್‌ ಶಿವಣ್ಣ ಅವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.

‘ಸನ್‌ ಉದಯ’ ಟಿವಿಯಲ್ಲಿ ಅಮೂಲ್ಯ ಗೌಡ ಹೊಸ ಧಾರಾವಾಹಿ ‘ಮಹಾಲಕ್ಷ್ಮೀ ಮದುವೆ’
Mahalakshmi Maduve Serial CastImage Credit source: Sun Udaya
ಮದನ್​ ಕುಮಾರ್​
|

Updated on: May 26, 2026 | 7:47 PM

Share

‘ಸನ್ ಉದಯ’ (Sun Udaya) ವಾಹಿನಿಯಲ್ಲಿ ಹಲವು ಧಾರಾವಾಹಿಗಳು ಜನಮನ ಗೆದ್ದಿವೆ. ʻಮೂಗುತಿ ಮಲ್ಲಿ’ ರೀತಿಯ ಜನಪ್ರಿಯ ಧಾರಾವಾಹಿಯನ್ನು ಕನ್ನಡಿಗರಿಗೆ ನೀಡಿದ ಈ ವಾಹಿನಿಯು ಈಗ ಮಧ್ಯಮ ವರ್ಗದ ಮನೆ ಮನೆಯ ಕಥೆಯೊಂದನ್ನು ಇಟ್ಟುಕೊಂಡು ಹೊಸ ಧಾರಾವಾಹಿಯನ್ನು ಪರಿಚಯಿಸುತ್ತಿದೆ. ʻಮಹಾಲಕ್ಷ್ಮೀ ಮದುವೆʼ (Mahalakshmi Maduve) ಎಂಬುದು ಈ ಹೊಸ ಸೀರಿಯಲ್ ಹೆಸರು. ಈ ಧಾರಾವಾಹಿಯು ಜೂನ್‌ 1ರಿಂದ ಪ್ರಸಾರ ಆರಂಭಿಸಿಲಿದೆ. ಈ ಸೀರಿಯಲ್ (Kannada Serial) ಕಥೆಯ ಎಳೆ ಏನು ಎಂಬುದನ್ನು ತಿಳಿಸಲಾಗಿದೆ.

ಈ ಧಾರಾವಾಹಿಯ ಕಥಾನಾಯಕ ಶ್ರೀಹರಿ ಓರ್ವ ಮಧ್ಯಮ ವರ್ಗದ ಹುಡುಗ. ಕಥಾನಾಯಕಿ ಮಹಾಲಕ್ಷ್ಮೀ ಕೂಡ ಮಧ್ಯಮ ವರ್ಗದವಳು. ಬ್ಯಾಂಕಲ್ಲಿ ಕೆಲಸ ಮಾಡುವ ಮಗನಿಗೆ ಒಳ್ಳೆಯ ವರದಕ್ಷಿಣೆ ಹಾಗೂ ಒಡವೆ ತರುವ ಹುಡುಗಿ ಸಿಗಲಿ ಎಂಬುದು ಹುಡುಗನ ಅಮ್ಮನ ಆಸೆ. ಈ ಆಸೆಗೆ ಇನ್ನೂ ಸ್ವಲ್ಪ ಕುಮ್ಮಕ್ಕು ಕೊಡುವವಳು ಹುಡುಗನ ಅಕ್ಕ. ಹಾಗಂತ ಅವರೆಲ್ಲ ಕೆಟ್ಟವರಲ್ಲ. ‘ನಮ್ ಶ್ರೀಹರಿ ಚೆನ್ನಾಗಿದ್ರೆ ನಾವೂ ಚೆನ್ನಾಗಿರ್ತೀವಿ’ ಎಂಬ ಮಹದಾಸೆ ಅವರಿಗೆ.

ಆದರೆ ಮಹಾಲಕ್ಷ್ಮೀ ಗಟ್ಟಿಗಿತ್ತಿ. ಅಪ್ಪನ ಆಸರೆ ಇಲ್ಲದೇ ಮನೆಯ ಜವಾಬ್ದಾರಿಯನ್ನು ತಾನೇ ಹೊತ್ತುಕೊಂಡವಳು. ತಂಗಿಯರನ್ನು ಓದಿಸಬೇಕು, ಅಮ್ಮನಿಗೆ ಆಸರೆಯಾಗಬೇಕು ಎಂಬುದು ಆಕೆಯ ಉದ್ದೇಶ. ಆದ್ದರಿಂದ ಮದುವೆ ಆದರೂ ಕೂಡ ಸಂಬಳವನ್ನು ತಾಯಿಗೆ ಕೊಡುತ್ತೇನೆ ಎಂಬದು ಆಕೆಯ ಷರತ್ತು. ಸಾವಿರ ಸುಳ್ಳು ಅಲ್ಲ, ಒಂದೇ ಒಂದು ಸುಳ್ಳಿನ ಮೂಲಕ ನಡೆಯುವ ಶ್ರೀಹರಿ ಮತ್ತು ಮಹಾಲಕ್ಷ್ಮೀ ಮದುವೆ ಯಾವ ರೀತಿ ಮುಂದೆ ಸಾಗುತ್ತದೆ ಎಂಬುದೇ ಈ ಸೀರಿಯಲ್ ಕಹಾನಿ.

ಮಹಾಲಕ್ಷ್ಮೀ ಪಾತ್ರದಲ್ಲಿ ಖ್ಯಾತ ನಟಿ ಅಮೂಲ್ಯ ಗೌಡ ಅವರು ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಭರತ್‌ ಶಿವಣ್ಣ ಅವರು ಈ ಸೀರಿಯಲ್ ಮೂಲಕ ಕಿರುತೆರೆ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಶಿವಾಜಿ ರಾವ್‌ ಜಾಧವ್, ಸೀತಾ ಕೋಟೆ, ಮಂಜು ಪಾವಗಡ, ಅಮೃತಾ ರಾಮಮೂರ್ತಿ, ಪದ್ಮಿನಿ, ಮಾನಸಾ, ಮೇಘಶ್ರೀ, ಪ್ರತೀಕ್ಷಾ, ಧನುಷ್‌ ಗೌಡ, ಸ್ನೇಹಾ ಭಟ್‌, ಹರಿಪ್ರಿಯಾ, ʻಮಹಾಲಕ್ಷ್ಮೀ ಮದುವೆʼ ಧಾರಾವಾಹಿಯ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ

‘ಲೈಮ್‌ಲೈಟ್ ಪ್ರೊಡಕ್ಷನ್ಸ್‌’ ಮೂಲಕ ನಿರ್ಮಾಣ ಆಗುತ್ತಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಗೆ ಶಿವಧ್ವಜ್ ಶೆಟ್ಟಿ ಮತ್ತು ಪ್ರಶಾಂತ್ ರೈ ನಿರ್ಮಾಪಕರಾಗಿದ್ದಾರೆ. ಪಾಪಾ ಔಟ್‌ಡೋರ್‌ ಯೂನಿಟ್‌ನ ಗಾಯತ್ರಿ ಸೆಲ್ವಂ ಅವರು ಈ ಧಾರಾವಾಹಿಯ ಕಾರ್ಯಕಾರಿ ನಿರ್ಮಾಪಕರು. ಶಿವು ಪೂಜೇನ ಅಗ್ರಹಾರ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಯೋಗೇಶ್ ಗೌಡ ಅವರ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ