AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ

ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ
ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ
TV9 Web
| Updated By: ಮದನ್​ ಕುಮಾರ್​|

Updated on: Aug 17, 2021 | 3:28 PM

Share

ತಮಿಳು ಕಿರುತೆರೆ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ, ನಿರೂಪಕ ಆನಂದ ಕಣ್ಣನ್ (Anandha Kannan) ಅವರು​ ಸೋಮವಾರ (ಆ.16) ನಿಧನರಾದರು. ಈ ಸುದ್ದಿ ಅವರ ಅಭಿಮಾನಿಗಳಿಗೆ ಕಂಬನಿ ತರಿಸಿದೆ. 48ರ ಪ್ರಾಯದ ಆನಂದ ಕಣ್ಣನ್​ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹಲವು ತಿಂಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ನಿರ್ದೇಶಕ ವೆಂಕಟ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಆನಂದ ಕಣ್ಣನ್ ಮೃತರಾದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

‘ಒಬ್ಬ ಅತ್ಯುತ್ತಮ ಗೆಳಯ, ಒಳ್ಳೆಯ ವ್ಯಕ್ತಿ ಆನಂದ ಕಣ್ಣನ್​ ಇನ್ನಿಲ್ಲ. ಅವರ ನಿಧನಕ್ಕೆ ನನ್ನ ಸಂತಾಪಗಳು. ಆನಂದ ಕಣ್ಣನ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ವೆಂಕಟ್​ ಪ್ರಭು ಟ್ವೀಟ್​ ಮಾಡಿದ್ದಾರೆ. ನಿರ್ಮಾಪಕ ಆರ್​.ಕೆ. ಸುರೇಶ್​, ನಟ ಸೆಂಥಿಲ್​ ಕುಮಾರ್​ ಸೇರಿದಂತೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಕನಸು ಕಂಡಿದ್ದ ಆನಂದ ಕಣ್ಣನ್​ ಅವರು ಕೇವಲ 48ನೇ ವಯಸ್ಸಿಗೆ ಬಾರದ ಲೋಕಕ್ಕೆ ತೆರಳುವಂತಾಗಿದ್ದು ನಿಜಕ್ಕೂ ನೋವಿನ ಸಂಗತಿ.

ತಮಿಳಿನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಆ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದರು. ಸಿಂಗಾಪುರ್ ವಸಂತಂ ವಾಹಿನಿಯಲ್ಲಿ ಆ್ಯಂಕರ್ ಆಗಿ ಅವರು ವೃತ್ತಿ ಜೀವನ ಆರಂಭಿಸಿದ್ದರು. ನಂತರ ಚೆನ್ನೈಗೆ ಬಂದು ಸನ್​ ಮ್ಯೂಸಿಕ್ ವಾಹಿನಿಯಲ್ಲಿ ವಿಡಿಯೋ ಜಾಕಿ ಆಗಿದ್ದರು. 2008ರಲ್ಲಿ ತೆರೆಕಂಡ ‘ಸರೋಜಾ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಸೈನ್ಸ್​ ಫಿಕ್ಷನ್​ ಕಥೆ ಹೊಂದಿದ್ದ ‘ಆಧಿಸಯ ಉಳಗಂ’ ಸಿನಿಮಾದಲ್ಲಿ ಆನಂದ ಕಣ್ಣನ್ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಆನಂದ ಕಣ್ಣನ್ ನಟಿಸಿದ್ದ ಕೆಲವು ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. 2013ರಿಂದ 2018ರವರೆಗೆ ಪ್ರಸಾರವಾದ ಸವಾಲ್​ ಸಿಂಗಾಪುರ್​ ಕಾರ್ಯಕ್ರಮದ 5 ಸೀಸನ್​ಗಳಲ್ಲೂ ಅವರು ನಿರೂಪಕರಾಗಿ ಕೆಲಸ ಮಾಡಿದ್ದರು. ಕಿರುತೆರೆ ಲೋಕದ ಹಲವು ಪ್ರಶಸ್ತಿಗಳೂ ಅವರಿಗೆ ಸಿಕ್ಕಿದ್ದವು. ಬಣ್ಣದ ಲೋಕದಲ್ಲಿ ಇನ್ನಷ್ಟು ಸಾಧನೆ ಮಾಡುವ ಮುನ್ನವೇ ಅವರಿಗೆ ಯಮಸ್ವರೂಪಿಯಾಗಿ ಕ್ಯಾನ್ಸರ್​ ಶುರುವಾಗಿತ್ತು.

ಕ್ಯಾನ್ಸರ್​ ಇದೆ ಎಂಬುದು ಗೊತ್ತಾದ ಬಳಿಕ ಆನಂದ ಕಣ್ಣನ್​ ಅವರ ವೃತ್ತಿಜೀವನಕ್ಕೆ ಹಿನ್ನಡೆ ಆಗಲಾರಂಭಿಸಿತು. ಮತ್ತೆ ಅವರನ್ನು ಹೊಸದೊಂದು ಕಾರ್ಯಕ್ರಮಕ್ಕೆ ನಿರೂಪಕರನ್ನಾಗಿ ಮಾಡಲು ವಾಹಿನಿಯೊಂದು ಆಲೋಚಿಸಿತ್ತು. ಆದರೆ ಅದು ಕೈಗೂಡುವುದಕ್ಕಿಂತ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ:

Anupam Shyam Death: ಬಹು ಅಂಗಾಂಗ ವೈಫಲ್ಯದಿಂದ ಹಿರಿಯ ನಟ ಅನುಪಮ್​ ಶ್ಯಾಮ್​ ನಿಧನ

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ