AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ

ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ
ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ
TV9 Web
| Edited By: |

Updated on: Aug 17, 2021 | 3:28 PM

Share

ತಮಿಳು ಕಿರುತೆರೆ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ, ನಿರೂಪಕ ಆನಂದ ಕಣ್ಣನ್ (Anandha Kannan) ಅವರು​ ಸೋಮವಾರ (ಆ.16) ನಿಧನರಾದರು. ಈ ಸುದ್ದಿ ಅವರ ಅಭಿಮಾನಿಗಳಿಗೆ ಕಂಬನಿ ತರಿಸಿದೆ. 48ರ ಪ್ರಾಯದ ಆನಂದ ಕಣ್ಣನ್​ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹಲವು ತಿಂಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ನಿರ್ದೇಶಕ ವೆಂಕಟ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಆನಂದ ಕಣ್ಣನ್ ಮೃತರಾದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

‘ಒಬ್ಬ ಅತ್ಯುತ್ತಮ ಗೆಳಯ, ಒಳ್ಳೆಯ ವ್ಯಕ್ತಿ ಆನಂದ ಕಣ್ಣನ್​ ಇನ್ನಿಲ್ಲ. ಅವರ ನಿಧನಕ್ಕೆ ನನ್ನ ಸಂತಾಪಗಳು. ಆನಂದ ಕಣ್ಣನ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ವೆಂಕಟ್​ ಪ್ರಭು ಟ್ವೀಟ್​ ಮಾಡಿದ್ದಾರೆ. ನಿರ್ಮಾಪಕ ಆರ್​.ಕೆ. ಸುರೇಶ್​, ನಟ ಸೆಂಥಿಲ್​ ಕುಮಾರ್​ ಸೇರಿದಂತೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಕನಸು ಕಂಡಿದ್ದ ಆನಂದ ಕಣ್ಣನ್​ ಅವರು ಕೇವಲ 48ನೇ ವಯಸ್ಸಿಗೆ ಬಾರದ ಲೋಕಕ್ಕೆ ತೆರಳುವಂತಾಗಿದ್ದು ನಿಜಕ್ಕೂ ನೋವಿನ ಸಂಗತಿ.

ತಮಿಳಿನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಆ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದರು. ಸಿಂಗಾಪುರ್ ವಸಂತಂ ವಾಹಿನಿಯಲ್ಲಿ ಆ್ಯಂಕರ್ ಆಗಿ ಅವರು ವೃತ್ತಿ ಜೀವನ ಆರಂಭಿಸಿದ್ದರು. ನಂತರ ಚೆನ್ನೈಗೆ ಬಂದು ಸನ್​ ಮ್ಯೂಸಿಕ್ ವಾಹಿನಿಯಲ್ಲಿ ವಿಡಿಯೋ ಜಾಕಿ ಆಗಿದ್ದರು. 2008ರಲ್ಲಿ ತೆರೆಕಂಡ ‘ಸರೋಜಾ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಸೈನ್ಸ್​ ಫಿಕ್ಷನ್​ ಕಥೆ ಹೊಂದಿದ್ದ ‘ಆಧಿಸಯ ಉಳಗಂ’ ಸಿನಿಮಾದಲ್ಲಿ ಆನಂದ ಕಣ್ಣನ್ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಆನಂದ ಕಣ್ಣನ್ ನಟಿಸಿದ್ದ ಕೆಲವು ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. 2013ರಿಂದ 2018ರವರೆಗೆ ಪ್ರಸಾರವಾದ ಸವಾಲ್​ ಸಿಂಗಾಪುರ್​ ಕಾರ್ಯಕ್ರಮದ 5 ಸೀಸನ್​ಗಳಲ್ಲೂ ಅವರು ನಿರೂಪಕರಾಗಿ ಕೆಲಸ ಮಾಡಿದ್ದರು. ಕಿರುತೆರೆ ಲೋಕದ ಹಲವು ಪ್ರಶಸ್ತಿಗಳೂ ಅವರಿಗೆ ಸಿಕ್ಕಿದ್ದವು. ಬಣ್ಣದ ಲೋಕದಲ್ಲಿ ಇನ್ನಷ್ಟು ಸಾಧನೆ ಮಾಡುವ ಮುನ್ನವೇ ಅವರಿಗೆ ಯಮಸ್ವರೂಪಿಯಾಗಿ ಕ್ಯಾನ್ಸರ್​ ಶುರುವಾಗಿತ್ತು.

ಕ್ಯಾನ್ಸರ್​ ಇದೆ ಎಂಬುದು ಗೊತ್ತಾದ ಬಳಿಕ ಆನಂದ ಕಣ್ಣನ್​ ಅವರ ವೃತ್ತಿಜೀವನಕ್ಕೆ ಹಿನ್ನಡೆ ಆಗಲಾರಂಭಿಸಿತು. ಮತ್ತೆ ಅವರನ್ನು ಹೊಸದೊಂದು ಕಾರ್ಯಕ್ರಮಕ್ಕೆ ನಿರೂಪಕರನ್ನಾಗಿ ಮಾಡಲು ವಾಹಿನಿಯೊಂದು ಆಲೋಚಿಸಿತ್ತು. ಆದರೆ ಅದು ಕೈಗೂಡುವುದಕ್ಕಿಂತ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ:

Anupam Shyam Death: ಬಹು ಅಂಗಾಂಗ ವೈಫಲ್ಯದಿಂದ ಹಿರಿಯ ನಟ ಅನುಪಮ್​ ಶ್ಯಾಮ್​ ನಿಧನ

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?