AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ

ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

Anandha Kannan: ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ
ಖ್ಯಾತ ನಿರೂಪಕ, ನಟ ಆನಂದ ಕಣ್ಣನ್ ಕ್ಯಾನ್ಸರ್​ನಿಂದ ನಿಧನ
TV9 Web
| Edited By: |

Updated on: Aug 17, 2021 | 3:28 PM

Share

ತಮಿಳು ಕಿರುತೆರೆ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ, ನಿರೂಪಕ ಆನಂದ ಕಣ್ಣನ್ (Anandha Kannan) ಅವರು​ ಸೋಮವಾರ (ಆ.16) ನಿಧನರಾದರು. ಈ ಸುದ್ದಿ ಅವರ ಅಭಿಮಾನಿಗಳಿಗೆ ಕಂಬನಿ ತರಿಸಿದೆ. 48ರ ಪ್ರಾಯದ ಆನಂದ ಕಣ್ಣನ್​ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹಲವು ತಿಂಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ನಿರ್ದೇಶಕ ವೆಂಕಟ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಆನಂದ ಕಣ್ಣನ್ ಮೃತರಾದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

‘ಒಬ್ಬ ಅತ್ಯುತ್ತಮ ಗೆಳಯ, ಒಳ್ಳೆಯ ವ್ಯಕ್ತಿ ಆನಂದ ಕಣ್ಣನ್​ ಇನ್ನಿಲ್ಲ. ಅವರ ನಿಧನಕ್ಕೆ ನನ್ನ ಸಂತಾಪಗಳು. ಆನಂದ ಕಣ್ಣನ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ವೆಂಕಟ್​ ಪ್ರಭು ಟ್ವೀಟ್​ ಮಾಡಿದ್ದಾರೆ. ನಿರ್ಮಾಪಕ ಆರ್​.ಕೆ. ಸುರೇಶ್​, ನಟ ಸೆಂಥಿಲ್​ ಕುಮಾರ್​ ಸೇರಿದಂತೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಕನಸು ಕಂಡಿದ್ದ ಆನಂದ ಕಣ್ಣನ್​ ಅವರು ಕೇವಲ 48ನೇ ವಯಸ್ಸಿಗೆ ಬಾರದ ಲೋಕಕ್ಕೆ ತೆರಳುವಂತಾಗಿದ್ದು ನಿಜಕ್ಕೂ ನೋವಿನ ಸಂಗತಿ.

ತಮಿಳಿನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಆನಂದ ಕಣ್ಣನ್​ ಅವರು ಮನರಂಜನಾ ವಾಹಿನಿಗಳಲ್ಲಿ ನಿರೂಪಕರಾಗಿ ಹೆಚ್ಚು ಫೇಮಸ್​ ಆಗಿದ್ದರು. ಆ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದರು. ಸಿಂಗಾಪುರ್ ವಸಂತಂ ವಾಹಿನಿಯಲ್ಲಿ ಆ್ಯಂಕರ್ ಆಗಿ ಅವರು ವೃತ್ತಿ ಜೀವನ ಆರಂಭಿಸಿದ್ದರು. ನಂತರ ಚೆನ್ನೈಗೆ ಬಂದು ಸನ್​ ಮ್ಯೂಸಿಕ್ ವಾಹಿನಿಯಲ್ಲಿ ವಿಡಿಯೋ ಜಾಕಿ ಆಗಿದ್ದರು. 2008ರಲ್ಲಿ ತೆರೆಕಂಡ ‘ಸರೋಜಾ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಸೈನ್ಸ್​ ಫಿಕ್ಷನ್​ ಕಥೆ ಹೊಂದಿದ್ದ ‘ಆಧಿಸಯ ಉಳಗಂ’ ಸಿನಿಮಾದಲ್ಲಿ ಆನಂದ ಕಣ್ಣನ್ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಆನಂದ ಕಣ್ಣನ್ ನಟಿಸಿದ್ದ ಕೆಲವು ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. 2013ರಿಂದ 2018ರವರೆಗೆ ಪ್ರಸಾರವಾದ ಸವಾಲ್​ ಸಿಂಗಾಪುರ್​ ಕಾರ್ಯಕ್ರಮದ 5 ಸೀಸನ್​ಗಳಲ್ಲೂ ಅವರು ನಿರೂಪಕರಾಗಿ ಕೆಲಸ ಮಾಡಿದ್ದರು. ಕಿರುತೆರೆ ಲೋಕದ ಹಲವು ಪ್ರಶಸ್ತಿಗಳೂ ಅವರಿಗೆ ಸಿಕ್ಕಿದ್ದವು. ಬಣ್ಣದ ಲೋಕದಲ್ಲಿ ಇನ್ನಷ್ಟು ಸಾಧನೆ ಮಾಡುವ ಮುನ್ನವೇ ಅವರಿಗೆ ಯಮಸ್ವರೂಪಿಯಾಗಿ ಕ್ಯಾನ್ಸರ್​ ಶುರುವಾಗಿತ್ತು.

ಕ್ಯಾನ್ಸರ್​ ಇದೆ ಎಂಬುದು ಗೊತ್ತಾದ ಬಳಿಕ ಆನಂದ ಕಣ್ಣನ್​ ಅವರ ವೃತ್ತಿಜೀವನಕ್ಕೆ ಹಿನ್ನಡೆ ಆಗಲಾರಂಭಿಸಿತು. ಮತ್ತೆ ಅವರನ್ನು ಹೊಸದೊಂದು ಕಾರ್ಯಕ್ರಮಕ್ಕೆ ನಿರೂಪಕರನ್ನಾಗಿ ಮಾಡಲು ವಾಹಿನಿಯೊಂದು ಆಲೋಚಿಸಿತ್ತು. ಆದರೆ ಅದು ಕೈಗೂಡುವುದಕ್ಕಿಂತ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ:

Anupam Shyam Death: ಬಹು ಅಂಗಾಂಗ ವೈಫಲ್ಯದಿಂದ ಹಿರಿಯ ನಟ ಅನುಪಮ್​ ಶ್ಯಾಮ್​ ನಿಧನ

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!