AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಆ್ಯಂಕರ್ ಅನುಶ್ರೀ

ಅನುಶ್ರೀ ಅವರು ರೋಷನ್ ಜೊತೆ ವಿವಾಹವಾಗಿದ್ದು, ಇದೀಗ ಜೀ ಕನ್ನಡ ವೇದಿಕೆಯಲ್ಲಿ ತಮ್ಮ ವಿವಾಹದ ಬಗ್ಗೆ ಮಾತನಾಡಿದ್ದಾರೆ. ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ ಎಂದು ಹೇಳಿದ್ದಾರೆ. ಜೀ ಕನ್ನಡ ವಾಹಿನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ನಲ್ಲಿ ಆ್ಯಂಕರಿಂಗ್ ಮಾಡುವ ಸಾಧ್ಯತೆ ಇದೆ.

‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಆ್ಯಂಕರ್ ಅನುಶ್ರೀ
ಅನುಶ್ರೀ-ರೋಷನ್
ರಾಜೇಶ್ ದುಗ್ಗುಮನೆ
|

Updated on:Sep 13, 2025 | 7:07 AM

Share

ಆ್ಯಂಕರ್ ಅನುಶ್ರೀ (Anushree) ಅವರ ಬಳಿ ಎಲ್ಲರೂ ಇಡುತ್ತಿದ್ದು ಒಂದೇ ಪ್ರಶ್ನೆ, ‘ಮದುವೆ ಯಾವಾಗ’. ಈ ಪ್ರಶ್ನೆಗೆ ಅನುಶ್ರೀ ಉತ್ತರಿಸದೇ ಸುಮ್ಮನೆ ಹೋಗಿದ್ದೇ ಹೆಚ್ಚು. ಈಗ ಮದುವೆ ನಡೆದಿದೆ. ಅನುಶ್ರೀ ಅವರ ವಿವಾಹ ಅವರು ಅಂದುಕೊಂಡ ರೀತಿಯೇ ನಡೆದಿದೆ. ರೋಷನ್ ಜೊತೆ ಹಸೆಮಣೆ ಏರಿದ್ದಾರೆ. ವಿವಾಹ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಜೀ ಕನ್ನಡ ವೇದಿಕೆ ಏರಿದ್ದಾರೆ. ಅಲ್ಲಿ ತಮ್ಮ ವಿವಾಹದ ಬಗ್ಗೆ ಮಾತನಾಡಿದ್ದಾರೆ. ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ ಎಂದು ಅವರು ಹೇಳಿದ್ದಾರೆ.

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಕೈ ಹಿಡಿದಿದ್ದು ಆ್ಯಂಕರಿಂಗ್. ಪರಿಸ್ಥಿತಿ ಎಂತಹದೇ ಇದ್ದರೂ ಸ್ಕ್ರಿಪ್ಟ್ ಇಲ್ಲದೆ ಅದನ್ನು ಸಮರ್ಥವಾಗಿ ನಿಭಾಯಿಸುವ ಕಲೆ ಅವರಿಗೆ ಗೊತ್ತಿದೆ. ಈ ಕಾರಣದಿಂದಲೇ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅನುಶ್ರೀ ಅವರ ಆ್ಯಂಕರಿಂಗ್ ವೃತ್ತಿಗೆ ಜೀ ಕನ್ನಡ ವಾಹಿನಿ ಭದ್ರ ಬುನಾದಿ ಹಾಕಿದೆ. ಹೀಗಾಗಿ, ವಿವಾಹ ಆದ ಬಳಿಕ ಅವರು ಮೊದಲು ಜೀ ಕನ್ನಡ ವೇದಿಕೆ ಏರಿದ್ದಾರೆ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

‘ಮಹಾನಟಿ 2’ ಹಾಗೂ ‘ನಾವು ನಮ್ಮವರು’ ಶೋನ ಮಹಾ ಸಂಗಮ ನಡೆದಿದೆ. ಶನಿವಾರ (ಸೆಪ್ಟೆಂಬರ್ 13) ಹಾಗೂ ಭಾನುವಾರ (ಸೆಪ್ಟೆಂಬರ್ 14) ಶೋ ನಡೆದಿದೆ. ಶೋನಲ್ಲಿ ಅನುಶ್ರೀ ಅವರ ಮಡಿಲು ತುಂಬೋ ಕೆಲಸ ಆಗಿದೆ. ಈ ವೇಳೆ ಅವರು ಖುಷಿ ಖುಷಿಯಿಂದ ಮಾತನಾಡಿದ್ದಾರೆ.

ಜೀ ಕನ್ನಡ ಪೋಸ್ಟ್​

View this post on Instagram

A post shared by Zee Kannada (@zeekannada)

‘ತಾಳಿದವನು ಬಾಳಿಯಾನು ಎಂಬ ಮಾತು ನಿಜ. ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣ ತಾಳಿ ಬಿದ್ದಿದೆ. ನನಗೆ ಜೀವನ ಕೊಟ್ಟಿದ್ದು ಜೀ ಕನ್ನಡ, ಆ ಜೀವಕ್ಕೆ ಅರ್ಥ ಕೊಟ್ಟಿದ್ದು ರೋಷನ್’ ಎಂದು ಪತಿಯ ಬಗ್ಗೆ ಹಾಗೂ ಜೀ ಕನ್ನಡದ ಬಗ್ಗೆ ಅನುಶ್ರೀ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದರು.

ಇದನ್ನೂ ಓದಿ: ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ; ಮೆಚ್ಚುಗೆಯ ಮಹಾಪೂರ

ಜೀ ಕನ್ನಡದಲ್ಲಿ ಶೀಘ್ರವೇ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹೊಸ ಸೀಸನ್ ಬರಲಿದೆ. ಇದರ ಆಡಿಷನ್ ಕೂಡ ನಡೆಯುತ್ತಿದೆ. ಈ ಶೋ ಮೂಲಕ ಅನುಶ್ರೀ ಅವರು ಆ್ಯಂಕರಿಂಗ್​​ಗೆ ಮರಳೋ ಸಾಧ್ಯತೆ ಇದೆ. ವಿವಾಹದ ಬಳಿಕ ಅವರು ದೊಡ್ಡ ಬ್ರೇಕ್ ಪಡೆದುಕೊಂಡಿಲ್ಲ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Sat, 13 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ