AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನ ಇದ್ದರೆ ಡಿಕೆಡಿಲಿ ಚಾನ್ಸ್ ಸಿಗುತ್ತೆ ಎಂದವರಿಗೆ ಮುಖಕ್ಕೆ ಹೊಡೆದಂತೆ ಉತ್ತರಿಸಿದ ಅನುಶ್ರೀ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇದೆ. ಈ ಶೋ ಮೂಲಕ ಹಲವರ ಪ್ರತಿಭೆಗೆ ವೇದಿಕೆ ಸಿಕ್ಕಂತೆ ಆಗಿದೆ. ಪ್ರತಿಭೆಗೆ ಬಡತನ ಅಡ್ಡಬಂದು ಒದ್ದಾಡುತ್ತಿರುವವರ ಬದುಕು ಬದಲಾಗಿದೆ. ಆದರೆ, ಇದನ್ನು ಕೆಲವರು ಟ್ರೋಲ್ ಮಾಡಿದ್ದು ಇದೆ. ಈ ಆರೋಪವನ್ನು ಅನುಶ್ರೀ ಗಂಭೀರವಾಗಿ ಸ್ವೀಕರಿಸಿ ತಿರುಗೇಟು ನೀಡಿದ್ದಾರೆ.

ಬಡತನ ಇದ್ದರೆ ಡಿಕೆಡಿಲಿ ಚಾನ್ಸ್ ಸಿಗುತ್ತೆ ಎಂದವರಿಗೆ ಮುಖಕ್ಕೆ ಹೊಡೆದಂತೆ ಉತ್ತರಿಸಿದ ಅನುಶ್ರೀ
ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on: Dec 08, 2025 | 3:10 PM

Share

ರಿಯಾಲಿಟಿ ಶೋಗಳಲ್ಲಿ ಸಿಂಪತಿಗೋಸ್ಕರ ಕೆಲವು ಬಡವರ ಮನೆ ಮಕ್ಕಳನ್ನು ಸ್ಪರ್ಧಿಗಳಾಗಿ ಕರೆದು ತರಲಾಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಅದರಲ್ಲೂ ಡ್ಯಾನ್ಸ್ ಹಾಗೂ ಡ್ರಾಮಾ ರಿಯಾಲಿಟಿ ಶೋಗಳಲ್ಲಿ ಈ ವಿಷಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂಬ ಆರೋಪ ಇದೆ. ಈ ವಿಷಯವಾಗಿ ಆ್ಯಂಕರ್ ಅನುಶ್ರೀ (Anushree) ಅವರು ಮಾತನಾಡಿದ್ದಾರೆ. ಅವರು ಈ ರೀತಿಯ ಆರೋಪಕ್ಕೆ ಮುಖಕ್ಕೆ ಹೊಡೆದಂತೆ ಉತ್ತರ ನೀಡಿದ್ದಾರೆ. ಅವರ ವಿಡಿಯೋ ವೈರಲ್ ಆಗುತ್ತಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇದೆ. ಈ ಶೋ ಮೂಲಕ ಹಲವರ ಪ್ರತಿಭೆಗೆ ವೇದಿಕೆ ಸಿಕ್ಕಂತೆ ಆಗಿದೆ. ಪ್ರತಿಭೆಗೆ ಬಡತನ ಅಡ್ಡಬಂದು ಒದ್ದಾಡುತ್ತಿರುವವರ ಬದುಕು ಬದಲಾಗಿದೆ. ಆದರೆ, ಇದನ್ನು ಕೆಲವರು ಟ್ರೋಲ್ ಮಾಡಿದ್ದು ಇದೆ. ‘ರಿಯಾಲಿಟಿ ಶೋಗಳಲ್ಲಿ ಬಡವರ ಮಕ್ಕಳನ್ನು ಟಿಆರ್​ಪಿಗೋಸ್ಕರ ಬಳಕೆ ಮಾಡಿಕೊಳ್ಳುತ್ತಾರೆ’ ಎಂದು ಕೆಲವರು ಟೀಕಿಸಿದ್ದರು. ಈ ಆರೋಪವನ್ನು ಅನುಶ್ರೀ ಗಂಭೀರವಾಗಿ ಸ್ವೀಕರಿಸಿ ತಿರುಗೇಟು ನೀಡಿದ್ದಾರೆ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಆರಂಭ ಆದಾಗ ಸೋಶಿಯಲ್ ಮೀಡಿಯಾದಲ್ಲಿ ಕೆಲವು ವಿಡಿಯೋಗಳನ್ನು ನೋಡಿದೆ. ಡಿಕೆಡಿ ವೇದಿಕೆ ಹತ್ತಬೇಕು ಎಂದರೆ ಬಡತನದ ಕಥೆ ಇರಬೇಕು ಎಂದು ಹೇಳುತ್ತಿದ್ದರು’ ಎಂದು ಅನುಶ್ರೀ ಮಾತನಾಡಿದ್ದಾರೆ. ಅನುಶ್ರೀ ಅತ್ಯಂತ ಪ್ರೀತಿಸುವ ಶೋಗಳಲ್ಲಿ ಇದು ಕೂಡ ಒಂದು. ಈ ಶೋ ಬಗ್ಗೆ ಈ ರೀತಿ ಮಾತನಾಡಿದ್ದಕ್ಕೆ ಅವವರಿಗೆ ಬೇಸರ ಆಗಿದೆ. ಕಣ್ಣೀರು ಹಾಕುತ್ತಲೇ ಅವರು ಉತ್ತರಿಸಿದ್ದಾರೆ.

View this post on Instagram

A post shared by Zee Kannada (@zeekannada)

‘ಡಿಕೆಡಿಗೆ ಬರಬೇಕು ಎಂದರೆ ಬಡತನ ಇದ್ದರೆ ಮಾತ್ರ ಸಾಕಾಗೋದಿಲ್ಲ. ಪ್ರತಿಭೆಯ ಶ್ರೀಮಂತಿಕೆ ಕೂಡ ಇರಬೇಕು. ಆ ಪ್ರತಿಭೆಯ ಶ್ರೀಮಂತಿಕೆಯಿಂದಲೇ ಈ ಹುಡಗಿ (ಸ್ಪರ್ಧಿ) ಇಲ್ಲಿರೋದು. ಕಷ್ಟ ಅನ್ನೋದು ಎಲ್ಲರಿಗೂ ಇರುತ್ತದೆ. ಒಂದು ಕಾರ್ಯಕ್ರಮ ಎಂಬುದು ಬಂದಾಗ ಎಲ್ಲರೂ ನಮ್ಮ ಕುಟುಂಬದವರಾಗುತ್ತಾರೆ’ ಎಂಬುದು ಅನುಶ್ರೀ ಉತ್ತರ.

ಇದನ್ನೂ ಓದಿ: ‘ಅರ್ಜುನ್ ಜನ್ಯ ಗತಿ ಏನು’; ಅಭಿಮಾನಿಯ ನೇರ ಪ್ರಶ್ನೆಗೆ ಉತ್ತರಿಸಿದ ಅನುಶ್ರೀ

‘ನಮ್ಮ ಕುಟುಂಬದ ಜೊತೆ ನಾವು ಕಷ್ಟ ಸುಖ ಹಂಚಿಕೊಳ್ಳುತ್ತೇವೆ. ಅದೇ ರೀತಿ ಆ ಸ್ಪರ್ಧಿಗಳು ತಮ್ಮ ಕುಟುಂಬ ಎಂದು ಅವರ ಕಷ್ಟಗಳನ್ನು ಹಂಚಿಕೊಳ್ಳುತ್ತಾರೆ. ಅವರ ತಂದೆ ಕಲ್ಲು ಒಡೆಯುವವರು. ಹುಡುಗಿ ತಂದೆ ಅಲ್ಲೆಲ್ಲೋ ಕಲ್ಲು ಒಡೆಯುತ್ತಿದ್ದರೆ, ಶಿಲೆ ಇಲ್ಲಿ ತಯಾರಾಗುತ್ತಿದೆ’ ಎಂದು ಸ್ಪರ್ಧಿಯನ್ನು ಅನುಶ್ರೀ ಹೊಗಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ