AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಲೇಬೇಡಿ

ಅಕ್ಟೋಬರ್ 17ಕ್ಕೆ ‘ಏಳುಮಲೆ’ ಸಿನಿಮಾ ಒಟಿಟಿಗೆ ಬಂದಿದೆ. ಚಿತ್ರ ಜೀ5 ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ರಾಣಾಗೆ ಜೊತೆಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಒಂದು ರಾತ್ರಿಯಲ್ಲಿ ನಡೆಯೋ ಕಥೆ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ. ಜಗಪತಿ ಬಾಬು, ಕಿಶೋರ್ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಲೇಬೇಡಿ
ಒಟಿಟಿ
ರಾಜೇಶ್ ದುಗ್ಗುಮನೆ
|

Updated on:Oct 17, 2025 | 11:36 AM

Share

ಒಟಿಟಿಯಲ್ಲಿ ಪ್ರತಿ ವಾರ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಲೇ ಇರುತ್ತವೆ. ಕನ್ನಡಕ್ಕಿಂತ ಪರಭಾಷಾ ಸಿನಿಮಾಗಳು ಒಟಿಟಿಗೆ ಕಾಲಿಡೋದು ಹೆಚ್ಚು. ಈಗ ಒಂದೇ ದಿನ ಕನ್ನಡದ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ ಕಾಲಿಟ್ಟಿವೆ.  ಇದು ಪ್ರೇಕ್ಷಕರ ಪಾಲಿಗೆ ನಿಜಕ್ಕೂ ವಿಶೇಷ. ಥಿಯೇಟರ್​​ನಲ್ಲಿ ಮಿಸ್ ಮಾಡಿಕೊಂಡವರು ಅಥವಾ ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸಿ ಮತ್ತೊಮ್ಮೆ ನೋಡಬೇಕು ಎಂದುಕೊಂಡವರು ಸಿನಿಮಾನ ಮನೆಯಲ್ಲೇ ಕುಳಿತು ವೀಕ್ಷಿಸಬಹುದು.

ಏಳುಮಲೆ

ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆಗಿ ಸೂಪರ್ ಹಿಟ್ ಆದ ಚಿತ್ರಗಳಲ್ಲಿ ‘ಏಳುಮಲೆ’ ಸಿನಿಮಾ ಕೂಡ ಒಂದು. ರಾಣಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ನಿರ್ದೇಶನ ಇದೆ. ಎಲ್ಲಕ್ಕಿಂತ ಮುಖ್ಯವಾಗಿ ತರುಣ್ ಸುಧೀರ್ ಅವರು ತಮ್ಮ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ವಿಮರ್ಶೆ ಸಿಕ್ಕ ಹೊರತಾಗಿಯೂ ಹೆಚ್ಚಿನ ಜನರನ್ನು ಸಿನಿಮಾ ತಲುಪಿಲ್ಲ ಎಂಬ ಬೇಸರ ಅವರಿಗೆ ಇದೆ. ಸೆಪ್ಟೆಂಬರ್ 5ರಂದು ಈ ಚಿತ್ರ ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು.

ಇದನ್ನೂ ಓದಿ: ಅಕ್ಟೋಬರ್ 10ರಿಂದ ‘ಮಿರಾಯ್’ ಸಿನಿಮಾ: ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರ

ಇದನ್ನೂ ಓದಿ
Image
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಅಕ್ಟೋಬರ್ 17ಕ್ಕೆ ಸಿನಿಮಾ ಒಟಿಟಿಗೆ ಬಂದಿದೆ. ಚಿತ್ರ ಜೀ5 ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ರಾಣಾಗೆ ಜೊತೆಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಒಂದು ರಾತ್ರಿಯಲ್ಲಿ ನಡೆಯೋ ಕಥೆ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ. ಜಗಪತಿ ಬಾಬು, ಕಿಶೋರ್ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

ಅಂದೊಂದಿತ್ತು ಕಾಲ

ವಿನಯ್ ರಾಜ್​ಕುಮಾರ್ ಹಾಗೂ ಅಧಿತಿ ಪ್ರಭುದೇವ ನಟನೆಯ ‘ಅಂದೊಂದಿತ್ತು ಕಾಲ’ ಆಗಸ್ಟ್ 19ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಕೂಡ ವಿಮರ್ಶೆಯಲ್ಲಿ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಆರಂಭಿಸಿದೆ. ಈ ಚಿತ್ರ ಇಂದು (ಅಕ್ಟೋಬರ್ 17) ಒಟಿಟಿಗೆ ಬಂದಿದೆ. ಕೀರ್ತಿ ಕೃಷ್ಣಪ್ಪ ಈ ಚಿತ್ರ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಈಗ ಒಟಿಟಿಯಲ್ಲಿ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:34 am, Fri, 17 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ