AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಮ್ಕಿಗಳಿಗೆ ಬಗ್ಗದೇ ‘ಸೂರ್ಯವಂಶ’ ಧಾರಾವಾಹಿ ಶುರು ಮಾಡಿದ ಅನಿರುದ್ಧ್; ಉದಯ ಟಿವಿಯಲ್ಲಿ ಪ್ರಸಾರ

ಉದಯ ಟಿವಿಯಲ್ಲಿ ‘ಸೂರ್ಯವಂಶ’ ಧಾರಾವಾಹಿ ಮಾರ್ಚ್​ 11ರಿಂದ ಪ್ರಸಾರ ಆರಂಭಿಸಲಿದೆ. ಸೋಮವಾರದಿಂದ ಶನಿವಾರದ ತನಕ ಪ್ರತಿ ರಾತ್ರಿ 8 ಗಂಟೆಗೆ ಈ ಸೀರಿಯಲ್ ಬಿತ್ತರ ಆಗಲಿದೆ. ಪದ್ಮನಾಭ್​ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಪ್ರೋಮೋ ನೋಡಿದ ವೀಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಧಮ್ಕಿಗಳಿಗೆ ಬಗ್ಗದೇ ‘ಸೂರ್ಯವಂಶ’ ಧಾರಾವಾಹಿ ಶುರು ಮಾಡಿದ ಅನಿರುದ್ಧ್; ಉದಯ ಟಿವಿಯಲ್ಲಿ ಪ್ರಸಾರ
ಅನಿರುದ್ಧ್​ ಜತ್ಕರ್​, ಸುಂದರ್​ ರಾಜ್​, ಅಶ್ವಿನಿ
ಮದನ್​ ಕುಮಾರ್​
|

Updated on: Mar 06, 2024 | 7:19 PM

Share

ನಟ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ಈ ಮೊದಲು ‘ಜೊತೆಜೊತೆಯಲಿ’ ಸೀರಿಯಲ್​ನಿಂದ ಹೊರಬಂದಾಗ ಕೆಲವು ಕಾಂಟ್ರವರ್ಸಿ ಎದುರಾಗಿದ್ದವು. ಅನಿರುದ್ಧ್ ಅವರನ್ನು ಕಿರುತೆರೆಯಿಂದ ಬ್ಯಾನ್​ ಮಾಡಬೇಕು ಎಂಬ ಮಾತುಗಳು ಕೇಳಿಬಂದಿದ್ದವು. ಬೇರೆ ಸೀರಿಯಲ್​ ಮೂಲಕ ಅನಿರುದ್ಧ್​ ಅವರು ಮತ್ತೆ ಪ್ರೇಕ್ಷಕರ ಎದುರು ಬರಬೇಕು ಎಂಬ ನಿರ್ಧಾರ ಮಾಡಿದಾಗ ಕೆಲವರು ಧಮ್ಕಿ ಹಾಕುವ ಪ್ರಯತ್ನ ಮಾಡಿದ್ದರು. ಆ ಬಗ್ಗೆ ಅನಿರುದ್ಧ್ ಅವರು ಮಾತನಾಡಿದ್ದಾರೆ. ‘ಸೂರ್ಯವಂಶ’ (Suryavamsha) ಧಾರಾವಾಹಿ ಮೂಲಕ ಅನಿರುದ್ಧ್​ ಅವರು ಮತ್ತೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ‘ಉದಯ ಟಿವಿ’ (Udaya Tv) ಮೂಲಕ ಈ ಸೀರಿಯಲ್​ ಪ್ರಸಾರ ಆಗಲಿದೆ. ಇಂದು (ಮಾರ್ಚ್​ 6) ‘ಸೂರ್ಯವಂಶ’ ಸೀರಿಯಲ್​ ತಂಡದವರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಎಸ್​. ನಾರಾಯಣ್​ ಅವರ ನಿರ್ದೇಶನದಲ್ಲಿ ‘ಸೂರ್ಯವಂಶ’ ಸೀರಿಯಲ್​ ಈ ಮೊದಲೇ ಸೆಟ್ಟೇರಬೇಕಿತ್ತು. ಆದರೆ ಕಾರಣಾಂತರಗಳಿಂದ ತಂಡ ಬದಲಾಯಿತು. ಈ ಬದಲಾದ ತಂಡದ ಜೊತೆ ಅನಿರುದ್ಧ್​ ಅವರು ಕೈ ಜೋಡಿಸಿದ್ದಾರೆ. ಹರಿಸಂತು ಅವರು ಈ ಸೀರಿಯಲ್​ನ ಪ್ರಧಾನ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ಸಂಚಿಕೆ ನಿರ್ದೇಶನದ ಜವಾಬ್ದಾರಿಯನ್ನು ಪ್ರಕಾಶ್​ ಮುಚ್ಚಳಗುಡ್ಡ ಅವರು ನಿಭಾಯಿಸುತ್ತಿದ್ದಾರೆ. ಮಾರ್ಚ್​ 11ರಿಂದ ಸೋಮವಾರದಿಂದ ಶನಿವಾರದ ತನಕ ಪ್ರತಿ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ‘ಸೂರ್ಯವಂಶ’ ಸೀರಿಯಲ್​ ಪ್ರಸಾರ ಆಗಲಿದೆ.

ತಮ್ಮ ವಿರುದ್ಧದ ಪಿತೂರಿ ಬಗ್ಗೆ ಅನಿರುದ್ಧ್ ಮೌನ ಮುರಿದಿದ್ದಾರೆ. ‘ನಮ್ಮ ನಿರ್ಮಾಪಕರಿಗೆ ಕರೆ ಬಂದಿಲ್ಲವೇನೋ. ಬಂದಿದ್ದರೂ ಅವರು ಹೇಳದೇ ಇರಬಹುದು. ಆದರೆ ಉದಯ ವಾಹಿನಿಯವರಿಗೆ ಅನೇಕ ಕರೆಗಳು ಬಂದಿವೆ. ಈ ಚಾನೆಲ್ ಉತ್ತುಂಗದಲ್ಲಿ ಇದ್ದಾಗ ಬೇರೆ ಚಾನೆಲ್​ಗಳು ಹುಟ್ಟಿಯೇ ಇರಲಿಲ್ಲ. ಅದು ಉದಯ ವಾಹಿನಿಯ ಶಕ್ತಿ. ಅದು ಅವರಿಗೂ ಗೊತ್ತಿದೆ. ಯಾರು ಎಷ್ಟೇ ಕರೆಗಳು ಮಾಡಿದರೂ ಕೂಡ ಕಚೇರಿಗೆ ಬನ್ನಿ ಮಾತನಾಡೋಣ ಅಂತ ಉದಯ ಟಿವಿ ಅವರು ಹೇಳಿದರು. ಆದರೆ ಯಾರೂ ಮಾತನಾಡಲು ಬರಲಿಲ್ಲ’ ಎಂದು ಅನಿರುದ್ಧ್ ಹೇಳಿದ್ದಾರೆ. ಈ ಮೊದಲು ಎಸ್​. ನಾರಾಯಣ್​ ಅವರ ಬಳಿಯೂ ಹೋಗಿ ‘ಅನಿರುದ್ಧ್​ ಅವರನ್ನು ಆಯ್ಕೆ ಮಾಡಿಕೊಳ್ಳಬೇಡಿ’ ಅಂತ ಕೆಲವರು ಪಿತೂರಿ ಮಾಡಿದ್ದರು. ‘ಅಂಥವರಿಗೆ ಎಸ್​. ನಾರಾಯಣ್​ ಸೂಕ್ತ ಉತ್ತರ ನೀಡಿದ್ದರು. ಆ ಬಳಿಕ ಬೇರೆ ಯಾರೂ ಮಾತನಾಡಲು ಬರಲಿಲ್ಲ’ ಎಂದಿದ್ದಾರೆ ಅನಿರುದ್ಧ್.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

ಹಿರಿಯ ನಟ ಸುಂದರ್​ ರಾಜ್​ ಅವರು ಈ ಸೀರಿಯಲ್​ನಲ್ಲಿ ಸತ್ಯಮೂರ್ತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಕಥಾನಾಯಕನ ತಾತನಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ‘ನಮ್ಮ ಮನೆಯಲ್ಲಿ ನಾವು ಮಗನನ್ನು ಕಳೆದುಕೊಂಡು ಮೊಮ್ಮಗನನ್ನು ಪಡೆದುಕೊಂಡೆವು. ಈ ಧಾರಾವಾಹಿಯಲ್ಲಿ ಕೂಡ ಇದೇ ರೀತಿಯ ಕಥೆ ಇದೆ. ಈ ಪಾತ್ರ ಒಪ್ಪಿಕೊಳ್ಳುವಾಗ ಉತ್ತಮ ಗುಣಮಟ್ಟದಲ್ಲಿ ಸೀರಿಯಲ್​ ಮೂಡಿಬರಬೇಕು ಎಂದು ನಾನು ಷರತ್ತು ಹಾಕಿದ್ದೆ. ಅದಕ್ಕೆ ತಕ್ಕಂತೆಯೇ ನಿರ್ಮಾಪಕರು ಅದ್ದೂರಿಯಾಗಿ ಸೀರಿಯಲ್​ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ಸುಂದರ್​ ರಾಜ್​​ ಹೇಳಿದ್ದಾರೆ. ವಿಕ್ರಂ ಉದಯ್​ಕುಮಾರ್​, ರವಿ ಭಟ್​, ಸುಂದರಶ್ರೀ, ಪುಷ್ಪಾ ಬೆಳವಾಡಿ, ಲೋಕೇಶ್​​ ಬಸವಟ್ಟಿ ಮುಂತಾದ ಕಲಾವಿದರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ.

‘ಸೂರ್ಯವಂಶ’ ಧಾರಾವಾಹಿ ತಂಡ

‘ಸೂರ್ಯವಂಶ’ ಧಾರಾವಾಹಿಯಲ್ಲಿ ನಾಯಕಿಯಾಗಿ ಅಶ್ವಿನಿ ನಟಿಸುತ್ತಿದ್ದಾರೆ. ಈ ಸೀರಿಯಲ್​ನ ಪ್ರೋಮೋಗಳು ಅದ್ದೂರಿಯಾಗಿ ಮೂಡಿಬಂದಿರುವ ಬಗ್ಗೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಿರ್ಮಾಪಕರಿಗೆ ಧನ್ಯವಾದ ತಿಳಿಸಿದ್ದಾರೆ. ತನ್ವಿ ಕ್ರಿಯೇಷನ್ಸ್​ ಮೂಲಕ ಪದ್ಮನಾಭ್​ ಅವರು ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ನಾನು ಈ ಹಿಂದೆ ನಿರ್ಮಾಣ ಮಾಡಿದ ಮೂರು ಸಿನಿಮಾಗಳ ಪ್ರಸಾರ ಹಕ್ಕುಗಳನ್ನು ಉದಯ ಟಿವಿ ಅವರಿಗೆ ನೀಡಿದ್ದೇನೆ. ಈ ವಾಹಿನಿ ನನಗೆ ಗಾಡ್​ಫಾದರ್​ ಇದ್ದಂಗೆ. ಈ ಚಾನೆಲ್​ನಿಂದ ಸೂರ್ಯವಂಶ ಸೀರಿಯಲ್​ ನಿರ್ಮಾಣ ಮಾಡುವ ಅವಕಾಶ ಸಿಕ್ಕಾಗ ಅದನ್ನು ನಾನು ಖುಷಿಯಿಂದ ಒಪ್ಪಿಕೊಂಡೆ’ ಎಂದು ನಿರ್ಮಾಪಕ ಪದ್ಮನಾಭ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್