AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ತುಂಬಾ ಕೆಲಸಗಳಿವೆ, ಬಿಗ್ ಬಾಸ್​ಗೆ ಹೋಗಲ್ಲ: TV9ಗೆ ಅನಿರುದ್ಧ ಜತ್ಕರ್ ಸ್ಪಷ್ಟನೆ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆಗುವುದಕ್ಕೂ ಮೊದಲು ಸಂಭಾವ್ಯ ಪಟ್ಟಿ ಹರಿದಾಡುತ್ತದೆ. ಇದರಲ್ಲಿ ಅರ್ಧ ನಿಜ ಆಗಿದ್ದರೆ ಇನ್ನರ್ಧ ಸುಳ್ಳು. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ತಾವೇ ಸ್ಪಷ್ಟನೆ ನೀಡಿದ್ದಿದೆ.

‘ನನಗೆ ತುಂಬಾ ಕೆಲಸಗಳಿವೆ, ಬಿಗ್ ಬಾಸ್​ಗೆ ಹೋಗಲ್ಲ: TV9ಗೆ ಅನಿರುದ್ಧ ಜತ್ಕರ್ ಸ್ಪಷ್ಟನೆ
ಅನಿರುದ್ಧ
TV9 Web
| Edited By: |

Updated on:Sep 13, 2022 | 6:11 PM

Share

‘ಬಿಗ್ ಬಾಸ್’ ಟಿವಿ ಸೀಸನ್​ಗೆ ಕ್ಷಣಗಣನೆ ಆರಂಭ ಆಗಿದೆ. ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡದ ಸೀಸನ್ 9’ (Bigg Boss Kannada) ಆರಂಭ ಆಗಲಿದೆ. ಈಗಾಗಲೇ ಈ ಶೋಗೆ ಯಾರೆಲ್ಲ ಹೋಗುತ್ತಾರೆ ಎಂಬ ಕುರಿತು ಸಾಕಷ್ಟು ಗಾಸಿಪ್​ಗಳು ಹರಿದಾಡುತ್ತಿವೆ. ನಟ, ವಿಷ್ಣುವರ್ಧನ್ ಅಳಿಯ ಅನಿರುದ್ಧ ಜತ್ಕರ್ (Aniruddha Jatkar) ಕೂಡ ‘ಬಿಗ್ ಬಾಸ್​’ ಟಿವಿ ಸೀಸನ್​ಗೆ ಹೋಗುತ್ತಾರೆ ಎಂಬ ಮಾಹಿತಿ ಹರಿದಾಡಿದೆ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಆಗಿದೆ. ಈ ಕುರಿತು ಅನಿರುದ್ಧ ಅವರು ಟಿವಿ9 ಕನ್ನಡ ಡಿಜಿಟಲ್​ಗೆ ಸ್ಪಷ್ಟನೆ ನೀಡಿದ್ದಾರೆ. ‘ಬಿಗ್ ಬಾಸ್​ನಿಂದ ಯಾರೂ ಅಪ್ರೋಚ್ ಮಾಡಿಲ್ಲ. ಮಾಡಿದರೂ ನಾನು ಹೋಗಲ್ಲ’ ಎಂದಿದ್ದಾರೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆಗುವುದಕ್ಕೂ ಮೊದಲು ಸಂಭಾವ್ಯ ಪಟ್ಟಿ ಹರಿದಾಡುತ್ತದೆ. ಇದರಲ್ಲಿ ಅರ್ಧ ನಿಜ ಆಗಿದ್ದರೆ ಇನ್ನರ್ಧ ಸುಳ್ಳು. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ತಾವೇ ಸ್ಪಷ್ಟನೆ ನೀಡಿದ್ದಿದೆ. ಆದರೆ, ಇನ್ನೂ ಕೆಲವರು ಈ ಬಗ್ಗೆ ಸ್ಪಷ್ಟನೆ ನೀಡುವ ಗೋಜಿಗೆ ಹೋಗಿಲ್ಲ. ಅನಿರುದ್ಧ ಅವರು ಬಿಗ್ ಬಾಸ್​ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬಿಗ್ ಬಾಸ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವಾಗ ವಾಹಿನಿಯವರು ತಮ್ಮದೇ ಮಾನದಂಡ ಇಟ್ಟುಕೊಂಡಿರುತ್ತಾರೆ. ಕಿರುತೆರೆ, ಹಿರಿತೆರೆ, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಖ್ಯಾತಿ ಪಡೆದ ಸ್ಪರ್ಧಿಗಳಿಗೆ ಮಣೆ ಹಾಕಲಾಗುತ್ತದೆ. ಈ ಕಾರಣದಿಂದ ಅನಿರುದ್ಧ ಅವರಿಗೆ ಆಫರ್ ನೀಡಲಾಗಿದೆ ಹಾಗೂ ಅವರು ಬಿಗ್ ಬಾಸ್​ಗೆ ತೆರಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಇದನ್ನು ಅನಿರುದ್ಧ ಅಲ್ಲಗಳೆದ್ದಿದ್ದಾರೆ.

ಇದನ್ನೂ ಓದಿ
Image
‘ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ’; ಫ್ಯಾನ್ಸ್​ಗೋಸ್ಕರ ಅನಿರುದ್ಧ್​ ಭಾವನಾತ್ಮಕ ಪೋಸ್ಟ್
Image
Anirudh Jatkar: ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಸಿಕ್ಕ ಸಂಬಳದ ಬಗ್ಗೆ ನೇರವಾಗಿ ಮಾತನಾಡಿದ ಅನಿರುದ್ಧ್​
Image
‘ಜೊತೆ ಜೊತೆಯಲಿ’ ತಂಡ ಮಾಡಿದ ಆರೋಪಗಳಿಗೆ ಸುದ್ದಿಗೋಷ್ಠಿಯಲ್ಲಿ ಅನಿರುದ್ಧ್​ ತಿರುಗೇಟು
Image
‘ಜೊತೆ ಜೊತೆಯಲಿ ಧಾರಾವಾಹಿ 2-3 ತಿಂಗಳಲ್ಲಿ ಮುಗಿಯಲಿದೆ’: ಅನಿರುದ್ಧ್​

ಅನಿರುದ್ಧ್ ಅವರು ನಟನೆ ಮಾತ್ರವಲ್ಲದೆ ಹಲವು ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಈ ಕಾರಣದಿಂದಲೂ ಅವರು ಬಿಗ್ ಬಾಸ್ ಆಫರ್ ಸಿಕ್ಕರೆ ತಿರಸ್ಕರಿಸುತ್ತಾರಂತೆ. ‘ನನಗೆ ಬಿಗ್ ಬಾಸ್​ ಕಡೆಯಿಂದ ಆಫರ್ ಸಿಕ್ಕಿಲ್ಲ. ಆಫರ್ ಕೊಟ್ಟರೂ ನಾನು ಬಿಗ್ ಬಾಸ್​ಗೆ ಹೋಗಲ್ಲ. ನನಗೆ ಇಲ್ಲಿ ಹಲವು ಕೆಲಸಗಳಿವೆ. ನಾನು ಬಿಗ್​ ಬಾಸ್ ಮನೆಗೆ ತೆರಳಿದರೆ ಮೂರು ತಿಂಗಳ ಕಾಲ ನಾನು ಮಾಡಬೇಕಿರುವ  ಸಾಮಾಜಿಕ ಕೆಲಸಗಳು ನಿಂತು ಹೋಗುತ್ತವೆ’ ಎಂದಿದ್ದಾರೆ ಅನಿರುದ್ಧ.

ಇದನ್ನೂ ಓದಿ: ‘ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ’; ಫ್ಯಾನ್ಸ್​ಗೋಸ್ಕರ ಅನಿರುದ್ಧ್​ ಭಾವನಾತ್ಮಕ ಪೋಸ್ಟ್

ವಿಷ್ಣು ಸ್ಮಾರಕದ ಕೆಲಸಗಳು ನಡೆಯುತ್ತಿವೆ. ಕೆಲಸದ ಪ್ರಗತಿಯನ್ನು ಅನಿರುದ್ಧ ನೋಡಿಕೊಳ್ಳುತ್ತಿದ್ದಾರೆ. ಅವರು ಬಿಗ್ ಬಾಸ್​ಗೆ ತೆರಳಿದರೆ ಈ ಕೆಲಸದ ಬಗ್ಗೆ ಗಮನ ನೀಡಲು ಸಾಧ್ಯವಿಲ್ಲ. ಈ ಕಾರಣವನ್ನೂ ಅವರು ನೀಡುತ್ತಾರೆ.  ಮನೆಯ ಗೃಹಪ್ರವೇಶ ತಯಾರಿಯಲ್ಲೂ ಅನಿರುದ್ಧ ಬ್ಯುಸಿ ಇದ್ದಾರೆ.

Published On - 5:45 pm, Tue, 13 September 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ