AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಿಆರ್​ಪಿ ಕುಸಿಯಲು ಅನಿರುದ್ಧ್​ ಕಾರಣ, ಅವರು ಧಾರಾವಾಹಿಯಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಲ್ಲ’: ನಿರ್ಮಾಪಕ

‘ಅನಿರುದ್ಧ್​ ಅವರಿಂದ ಶೂಟಿಂಗ್​ಗೆ ತುಂಬಾ ಅಡಚಣೆ ಆಗಿದೆ. ಎದುರು ಮಾತನಾಡುವ ರೀತಿಯಲ್ಲಿ ಅವರು ಇಲ್ಲ. ಕಥೆಗೆ ಅಡೆಚಣೆ ಉಂಟು ಮಾಡುತ್ತಿದ್ದಾರೆ. ಅವರ ಕ್ಯಾರೆಕ್ಟರ್ ಮಾತ್ರ ಬಿಲ್ಡ್​ ಆಗಬೇಕು ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದರು’ ಎಂದು ಆರೂರು ಜಗದೀಶ್ ಹೇಳಿದ್ದಾರೆ.  

‘ಟಿಆರ್​ಪಿ ಕುಸಿಯಲು ಅನಿರುದ್ಧ್​ ಕಾರಣ, ಅವರು ಧಾರಾವಾಹಿಯಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಲ್ಲ’: ನಿರ್ಮಾಪಕ
ಜಗದೀಶ್​-ಅನಿರುದ್ಧ್​
TV9 Web
| Edited By: |

Updated on:Aug 20, 2022 | 7:37 PM

Share

ಅನಿರುದ್ಧ್ (Aniruddha Jatkar) ಅವರನ್ನು ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಗಿಡುವ ಬಗ್ಗೆ ಇಂದು (ಆಗಸ್ಟ್ 20) ಘೋಷಣೆ ಮಾಡಲಾಯಿತು. ಆ ಬಳಿಕ ಸುದ್ದಿಗೋಷ್ಠಿ ನಡೆಸಿ ಅನಿರುದ್ಧ್ ಸ್ಪಷ್ಟನೆ ನೀಡಿದ್ದರು. ‘ಧಾರಾವಾಹಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ನಾನು ಮತ್ತೆ ನಟಿಸಲು ಸಿದ್ಧ’ ಎಂದು ಹೇಳಿದ್ದರು. ಈ ಬೆನ್ನಲ್ಲೇ ನಿರ್ಮಾಪಕ ಆರೂರು ಜಗದೀಶ್ (Aroor Jagadish) ಅವರು ಸುದ್ದಿಗೋಷ್ಠಿ ನಡೆಸಿ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.

‘ಅನಿರುದ್ಧ್​ ಅವರಿಂದ ಶೂಟಿಂಗ್​ಗೆ ತುಂಬಾ ಅಡಚಣೆ ಆಗಿದೆ. ಎದುರು ಮಾತನಾಡುವ ರೀತಿಯಲ್ಲಿ ಅವರು ಇಲ್ಲ. ಕಥೆಗೆ ಅಡೆಚಣೆ ಉಂಟು ಮಾಡುತ್ತಿದ್ದಾರೆ. ಅವರ ಕ್ಯಾರೆಕ್ಟರ್ ಮಾತ್ರ ಬಿಲ್ಡ್​ ಆಗಬೇಕು ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದರು’ ಎಂದು ಆರೂರು ಜಗದೀಶ್ ಹೇಳಿದ್ದಾರೆ.

‘ನಮ್ಮ ಮಧ್ಯೆ ಮನಸ್ತಾಪ ಇರಲಿಲ್ಲ. ಧಾರಾವಾಹಿಗೆ ಸಾಕಷ್ಟು ದುಡ್ಡು ಹಾಕಿದ್ದೇನೆ. 24 ಗಂಟೆ ಕೆಲಸ ಮಾಡಿದ್ದೇನೆ. ಹೀಗಿದ್ದರೂ ನಿರ್ಮಾಪಕರಿಗೆ ಸಾಥ್ ಕೊಡಬೇಕು ಎಂದು ಅವರಿಗೆ ಯಾವಾಗಲೂ ಅನಿಸಿಲ್ಲ. ಕೊವಿಡ್ ಟೈಮ್​ನಲ್ಲಿ ಎಲ್ಲರಿಗೂ ಸಂಭಾವನೆಯಲ್ಲಿ ಶೇ.15 ಕಟ್ ಮಾಡಿದ್ದೆವು. ಆಗ ನಾನು ಆಸ್ಪತ್ರೆಯಲ್ಲಿ ಇದ್ದೆ. ಅವರು ನನ್ನ ಸ್ಯಾಲರಿ ಯಾಕೆ ಕಟ್ ಮಾಡಿದ್ರಿ ಅಂತ ಕಾಲ್ ಮಾಡಿ ಕೂಗಾಡಿದ್ರು. ಸೆಟ್​ನಲ್ಲೂ ಬಂದು ಕೂಗಾಡಿದರು. ನನ್ನ ದುಡ್ಡು ತಿಂದು ಬುದಕುತ್ತಿದ್ದಾರೆ ಅಂತ ಕೂಗಾಡಿದ್ದರು. ಅದನ್ನು ಕೇಳಿ ಬೇಸರ ಆಯ್ತು’ ಎಂದಿದ್ದಾರೆ ಜಗದೀಶ್.

ಇದನ್ನೂ ಓದಿ
Image
‘ಅಂದು ಜೊತೆ ಜೊತೆಯಲಿ ನಾಯಕಿ ಕ್ಷಮೆ ಕೇಳಿದ್ದರು’; ಹಳೆಯ ಘಟನೆ ನೆನೆದ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್
Image
Aniruddha Press Meet: ಭಿನ್ನಾಭಿಪ್ರಾಯಗಳು ಮನೆಯಲ್ಲಿ ಇದ್ದೇ ಇರುತ್ತೆ, ನನಗೆ ಯಾವುದೇ ದುರಹಂಕಾರ ಇಲ್ಲ: ನಟ ಅನಿರುದ್ಧ
Image
Aniruddha Jatkar: ಜೊತೆ ಜೊತೆಯಲಿ​ ತಂಡದಿಂದ ಅನಿರುದ್ಧ್ ಬ್ಯಾನ್: ನಿಷೇಧಕ್ಕೆ ಅವಕಾಶವಿಲ್ಲ ಎಂದ ಟೆಲಿವಿಷನ್ ಅಸೋಸಿಯೇಷನ್
Image
Megha Shetty:ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ

ಇದನ್ನೂ ಓದಿ: ‘ಜೊತೆ ಜೊತೆಯಲಿ ಧಾರಾವಾಹಿ 2-3 ತಿಂಗಳಲ್ಲಿ ಮುಗಿಯಲಿದೆ’: ಅನಿರುದ್ಧ್​

‘ನನಗಾಗಿರುವ ಪ್ರತಿ ನೋವನ್ನು ಚಾನೆಲ್ ಗಮನಕ್ಕೆ ತಂದಿದ್ದೇನೆ. ಹೇಳೋಕೆ ಹೋದ್ರೆ ತುಂಬಾ ಇದೆ. ನನಗೆ ಇನ್ನು ಆರೋಗ್ಯ ಹಾಳುಮಾಡಿಕೊಳ್ಳಲು ಇಷ್ಟವಿಲ್ಲ. ಅವರನ್ನು ಈ ಸೀರಿಯಲ್​ನಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಸಲ್ಲ. ನನಗೆ ಗೌರವ ಸಿಕ್ಕಿಲ್ಲ. ಅವರು ಮಾತಿನಲ್ಲಿ ಹೇಳುವಂತೆ ಕೃತಿಯಲ್ಲಿ ಇಲ್ಲ. ಅನೇಕ ಬಾರಿ ಶೂಟಿಂಗ್​ನಿಂದ ಅರ್ಧಕ್ಕೆ ಹೊರಹೋಗಿದ್ದಾರೆ. ಇದರಿಂದ ನನಗೆ ನಷ್ಟ ಉಂಟಾಗಿದೆ’ ಎಂದು ಜಗದೀಶ್ ಆರೋಪಿಸಿದ್ದಾರೆ.

‘ಕ್ಯಾರವಾನ್ ಇಲ್ಲ ಎಂದು ಶೂಟಿಂಗ್​​ಇಂದ ಎದ್ದು ಹೋಗಿದ್ದರು. ಹೆಣ್ಣು ಮಕ್ಕಳ ಕೇರ್ ನಾವು ತೆಗೆದುಕೊಳ್ಳುತ್ತೇವೆ. ಆ ಬಗ್ಗೆ ಅವರಿಗೆ ಯಾಕೆ ಚಿಂತೆ? ನನಗೆ ಆಗಿರೋ ಅವಮಾನ, ನೋವಿಗೆ ನಟರೇ ಸ್ಪಂದಿಸಲಿಲ್ಲ ಅಂದರೆ ಹೇಗೆ? ಈ ಸೀರಿಯಲ್ ಮಧ್ಯಭಾಗದಲ್ಲಿ ಟಿಆರ್​ಪಿ ಕಡಿಮೆ ಆಗಲು ಅವರೇ ಕಾರಣ. ಈ ಧಾರಾವಾಹಿ ನಿಲ್ಲಲು ಅವರೇ ಕಾರಣ’ ಎಂದಿದ್ದಾರೆ ಜಗದೀಶ್.

Published On - 7:16 pm, Sat, 20 August 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!